
ನವದೆಹಲಿ (ಆ.4): ಖ್ಯಾತ ಭರತನಾತ್ಯ ಕಲಾವಿದೆ ಹಾಗೂ ಪದ್ಮ ಪ್ರಶಸ್ತಿ ಪುರಷ್ಕೃತೆ ಯಾಮಿನಿ ಕೃಷ್ಣಮೂರ್ತಿ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಶನಿವಾರ ಕೊನೆಯುಸಿರೆಳೆದಿದ್ದಾರೆ.
84 ವರ್ಷ ವಯಸ್ಸಿನ ಇವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಕಳೆದ 7 ತಿಂಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಮ್ಯಾನೇಜರ್ ಹಾಗೂ ಕಾರ್ಯದರ್ಶಿಯಾಗಿದ್ದ ಗಣೇಶ್ ಮಾಹಿತಿ ನೀಡಿದ್ದಾರೆ.
ಅಪರ್ಣಾ ಮಾತಲ್ಲಿ ಕನ್ನಡ ಕೇಳೋದೇ ಒಂದು ಖುಷಿ: ಮಜಾ ಟಾಕೀಸ್ನ ದಿನಗಳ ನೆನೆದು ಕಣ್ಣೀರಾದ ಇಂದ್ರಜಿತ್ ಲಂಕೇಶ್
ಕಲಾವಿದೆಯ ಮೃತ ದೇಹವನ್ನು ಅವರೇ ಸ್ಥಾಪಿಸಿರುವ ‘ಯಾಮಿನಿ ಸ್ಕೂಲ್ ಆಫ್ ಡ್ಯಾನ್ಸ್’ಗೆ ಭಾನುವಾರ ಬೆಳಗ್ಗೆ 9 ಗಂಟೆಗೆ ತಂದು ಅಂತಿಮ ದರ್ಶನಕ್ಕೆ ಇಡಲಾಗುತ್ತದೆ.
ಆಂದ್ರಪ್ರದೇಶ ಮೂಲದವರಾದ ಯಾಮಿನಿ, 2016ರಲ್ಲಿ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣಕ್ಕೆ ಭಾಜನರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ