Bhargavastra: ಸಮೂಹ ಡ್ರೋನ್‌ ದಾಳಿ ತಡೆಗೆ ಭಾರತದ ಬತ್ತಳಿಕೆಗೆ ಹೊಸ ‘ಭಾರ್ಗವಾಸ್ತ್ರ’

Published : May 15, 2025, 06:13 AM IST
Bhargavastra: ಸಮೂಹ ಡ್ರೋನ್‌ ದಾಳಿ ತಡೆಗೆ ಭಾರತದ ಬತ್ತಳಿಕೆಗೆ ಹೊಸ ‘ಭಾರ್ಗವಾಸ್ತ್ರ’

ಸಾರಾಂಶ

ಇತ್ತೀಚೆಗೆ ಭಾರತದ ಮೇಲೆ ಪಾಕಿಸ್ತಾನ ನಡೆಸಿದ್ದ ಸಮೂಹ ಡ್ರೋನ್‌ಗಳ ರೀತಿಯ ದಾಳಿಯನ್ನು ಯಶಸ್ವಿಯಾಗಿ ತಡೆಯುವ ಮತ್ತೊಂದು ದೇಶೀಯ ವಾಯುದಾಳಿ ಪತ್ತೆ ಹಾಗೂ ದಾಳಿ ವ್ಯವಸ್ಥೆಯನ್ನು ಬುಧವಾರ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಇದರೊಂದಿಗೆ ಭಾರತದ ಬತ್ತಳಿಕೆಗೆ ಮತ್ತೊಂದು ಅಸ್ತ್ರ ಸೇರುವ ಕ್ಷಣ ಸನ್ನಿಹಿತವಾದಂತಾಗಿದೆ.

ಭುವನೇಶ್ವರ (ಮೇ.15): ಇತ್ತೀಚೆಗೆ ಭಾರತದ ಮೇಲೆ ಪಾಕಿಸ್ತಾನ ನಡೆಸಿದ್ದ ಸಮೂಹ ಡ್ರೋನ್‌ಗಳ ರೀತಿಯ ದಾಳಿಯನ್ನು ಯಶಸ್ವಿಯಾಗಿ ತಡೆಯುವ ಮತ್ತೊಂದು ದೇಶೀಯ ವಾಯುದಾಳಿ ಪತ್ತೆ ಹಾಗೂ ದಾಳಿ ವ್ಯವಸ್ಥೆಯನ್ನು ಬುಧವಾರ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಇದರೊಂದಿಗೆ ಭಾರತದ ಬತ್ತಳಿಕೆಗೆ ಮತ್ತೊಂದು ಅಸ್ತ್ರ ಸೇರುವ ಕ್ಷಣ ಸನ್ನಿಹಿತವಾದಂತಾಗಿದೆ.

ಸೋಲಾರ್‌ ಡಿಫೆನ್ಸ್‌ ಆ್ಯಂಡ್‌ ಏರೋಸ್ಪೇಸ್‌ ಲಿ. ಅಭಿವೃದ್ಧಿಪಡಿಸಿರುವ ‘ಭಾರ್ಗವಾಸ್ತ್ರ’ ಎಂಬ ಡ್ರೋನ್‌ ವ್ಯವಸ್ಥೆಯು, 6-10 ಕಿ.ಮೀ ದೂರದಿಂದಲೇ ತನ್ನತ್ತ ಸಾಗಿಬರುತ್ತಿರುವ ಸಣ್ಣ ಸಣ್ಣ ಡ್ರೋನ್‌ಗಳನ್ನು ಪತ್ತೆ ಮಾಡಿ, 2.5 ಕಿ.ಮೀ ದೂರದಲ್ಲೇ ಅದನ್ನು ಹೊಡೆದುರುಳಿಸುವ ಸಾಮರ್ಥ್ಯ ಹೊಂದಿದೆ.

ಬುಧವಾರ ಒಡಿಶಾದ ಕರಾವಳಿ ತೀರದಲ್ಲಿ ಈ ಭಾರ್ಗವಾಸ್ತ್ರವನ್ನು ಯಶಸ್ವಿಯಾಗಿ ಪ್ರಯೋಗಿಸಲಾಗಿದೆ. ಬುಧವಾರದ ಪ್ರಯೋಗದ ವೇಳೆ ಎರಡು ಬಾರಿ ತಲಾ ಒಂದೊಂದು ರಾಕೆಟ್‌ ಮತ್ತು ಎರಡು ಬಾರಿ ತಲಾ 2 ರಾಕೆಟ್‌ಗಳನ್ನು ಹಾರಿಸಿ ಅದನ್ನು ಭಾರ್ಗವಾಸ್ತ್ರದ ಮೂಲಕ ಧ್ವಂಸ ಮಾಡಲಾಯಿತು. ಈ ವೇಳೆ ಅಸ್ತ್ರದ ಎಲ್ಲಾ ವ್ಯವಸ್ಥೆಯು ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡಿದೆ ಎಂದು ಕಂಪನಿ ಮಾಹಿತಿ ನೀಡಿದೆ.

ಈ ಅಸ್ತ್ರವನ್ನು ದೇಶದ ಯಾವುದೇ ಪ್ರದೇಶದಲ್ಲಿ ಅತ್ಯಂತ ಸರಳವಾಗಿ, ಬೇಡಿಗೆ ಅನುಗುಣವಾಗಿ ನಿಯೋಜಿಸಿ ಶತ್ರು ದಾಳಿ ತಡೆಬಹುದಾಗಿದೆ. ಇದು ರಡಾರ್‌, ಇಒ ಮತ್ತು ಆರ್‌ಎಫ್‌ ರಿಸೀವರ್‌ಗಳನ್ನು ಒಳಗೊಂಡಿದೆ. ಹಾಲಿ ಇರುವ ದೇಶೀಯ ಯುದ್ಧ ಮೂಲಸೌಕರ್ಯಗಳಲ್ಲೂ ಇದನ್ನು ಅಳವಡಿಸಬಹುದು ಎಂದು ಕಂಪನಿ ಹೇಳಿದೆ.

ಇತ್ತೀಚೆಗೆ ಭಾರತದ ಮೇಲೆ ಪಾಕಿಸ್ತಾನ ನಡೆಸಿದ ಸಮೂಹ ಡ್ರೋನ್‌ ದಾಳಿಯನ್ನು ಭಾರತದ ಮತ್ತೊಂದು ದೇಶೀಯ ಏರ್‌ಡಿಫೆನ್ಸ್‌ ವ್ಯವಸ್ಥೆಯಾದ ಆಕಾಶ್‌ ಯಶಸ್ವಿಯಾಗಿ ತಡೆದಿತ್ತು.

ಇದನ್ನೂ ಓದಿ: ಕರ್ನಾಟಕದ ಸೊಸೆ 'ಉಗ್ರರ ಸೋದರಿ' ಎಂದಿದ್ದ ಬಿಜೆಪಿ ಸಚಿವನ ವಿರುದ್ಧ ಕೇಸು|ಮಪ್ರ ಹೈಕೋರ್ಟ್ ಗರಂ...

ಇಂದು ಎಲ್‌ಒಸಿಗೆ ಸಚಿವ ರಾಜನಾಥ್‌ ಸಿಂಗ್‌ ಭೇಟಿ

ನವದೆಹಲಿ: ಭಾರತ-ಪಾಕ್‌ ನಡುವೆ ಕದನವಿರಾಮ ಘೋಷಣೆಯಾಗಿದ್ದರೂ ಉಭಯ ದೇಶಗಳ ನಡುವಿನ ಗಡಿಯಲ್ಲಿ ಉದ್ವಿಗ್ನತೆ ಬೂದಿ ಮುಚ್ಚಿದ ಕೆಂಡದಂತಿರುವ ಹೊತ್ತಿನಲ್ಲಿ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಗುರುವಾರ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ)ಗೆ ಭೇಟಿ ನೀಡಲಿದ್ದಾರೆ.

ಈ ವೇಳೆ ಸಿಂಗ್‌ ಅವರು ಜಮ್ಮುವಿನ ಯಾವುದಾದರೂ ಒಂದು ವಾಯುನೆಲೆ ಮತ್ತು ಅಲ್ಲಿರುವ ಮುಂಚೂಣಿ ನೆಲೆಗಳಿಗೆ ತೆರಳುವ ನಿರೀಕ್ಷೆಯಿದೆ.

ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ ಗಡಿಯ ಸಮೀಪವಿರುವ ಆದಂಪುರ ವಾಯುನೆಲೆಗೆ ಭೇಟಿ ಕೊಟ್ಟು ವಾಯುಪಡೆಯ ಯೋಧರನ್ನುದ್ದೇಶಿಸಿ ಮಾತನಾಡಿದ್ದರು. ಜತೆಗೆ, ಪಾಕ್‌ ತಾನು ನಾಶಪಡಿಸಿರುವುದಾಗಿ ಹೇಳಿಕೊಂಡಿದ್ದ ಎಸ್‌-400 ವಾಯುರಕ್ಷಣಾ ವ್ಯವಸ್ಥೆ ಮತ್ತು ಮಿಗ್‌-29 ಯುದ್ಧವಿಮಾನದ ಎದುರೇ ನಿಂತು ಭಾಷಣ ಮಾಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..