Tirupati 'ಹನುಮ ಜನ್ಮಸ್ಥಳ': ಫೆ.16ಕ್ಕೆ ಭೂಮಿ ಪೂಜೆ

Kannadaprabha News   | Asianet News
Published : Feb 06, 2022, 07:47 AM IST
Tirupati 'ಹನುಮ ಜನ್ಮಸ್ಥಳ': ಫೆ.16ಕ್ಕೆ ಭೂಮಿ ಪೂಜೆ

ಸಾರಾಂಶ

ತಿರುಪತಿ ಸಮೀಪವಿರುವ ಅಂಜನಾದ್ರಿಯನ್ನು ಆಂಜನೇಯನ ಜನ್ಮಸ್ಥಳದ ರೂಪದಲ್ಲಿ ಧಾರ್ಮಿಕ ಕೇಂದ್ರವಾಗಿ ಅಭಿವೃದ್ಧಿಪಡಿಸಲು ನಿರ್ಧರಿಸಿರುವ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಆಡಳಿತ ಮಂಡಳಿ, ಈ ಸಂಬಂಧ ಅಭಿವೃದ್ಧಿ ಕಾರ್ಯಗಳಿಗೆ ಫೆ.16ರಂದು ಭೂಮಿಪೂಜೆ ನೆರವೇರಿಸಲು ನಿರ್ಧರಿಸಿದೆ.

ತಿರುಪತಿ (ಫೆ.06): ತಿರುಪತಿ (Tirupati) ಸಮೀಪವಿರುವ ಅಂಜನಾದ್ರಿಯನ್ನು (Anjanadri) ಆಂಜನೇಯನ ಜನ್ಮಸ್ಥಳದ (Anjaneya Birthplace) ರೂಪದಲ್ಲಿ ಧಾರ್ಮಿಕ ಕೇಂದ್ರವಾಗಿ ಅಭಿವೃದ್ಧಿಪಡಿಸಲು ನಿರ್ಧರಿಸಿರುವ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಆಡಳಿತ ಮಂಡಳಿ, ಈ ಸಂಬಂಧ ಅಭಿವೃದ್ಧಿ ಕಾರ್ಯಗಳಿಗೆ ಫೆ.16ರಂದು ಭೂಮಿಪೂಜೆ ನೆರವೇರಿಸಲು ನಿರ್ಧರಿಸಿದೆ.

ಶತಮಾನಗಳಿಂದಲೂ ಕರ್ನಾಟಕದ (Karnataka) ಕೊಪ್ಪಳ (Koppal) ಜಿಲ್ಲೆಯ ಹಂಪಿ (Hampi) ಬಳಿ ಇರುವ ಅಂಜನಾದ್ರಿ ಬೆಟ್ಟವೇ (Anjanadri Hill) ಹನುಮಂತನ ಜನ್ಮಸ್ಥಳ ಎಂದು ನಂಬಿಕೊಂಡು ಬರಲಾಗಿದೆ. ಇಲ್ಲಿಯೇ ರಾಮ, ಲಕ್ಷ್ಮಣರು ಮೊದಲ ಬಾರಿಗೆ ಆಂಜನೇಯನನ್ನು ಭೇಟಿ ಮಾಡಿದ್ದರು. ಅದರ ಕುರುಹು ಎಂಬಂತೆ ಬೆಟ್ಟದ ಮೇಲೆ ರಾಮ, ಲಕ್ಷ್ಮಣ, ಸೀತೆ, ಅಂಜನಾ ದೇವಿಯ ಕಲ್ಲಿನ ಪ್ರತಿಮೆಗಳಿವೆ.

ಆದರೆ ಕೆಲ ವರ್ಷಗಳ ಹಿಂದೆ ಇದ್ದಕ್ಕಿದ್ದಂತೆ ಹೊಸ ವಾದ ಮಂಡಿಸಿದ್ದ ಟಿಟಿಡಿ ಆಡಳಿತ ಮಂಡಳಿ, ಹನುಮಂತನ ಜನ್ಮಸ್ಥಳ ಕರ್ನಾಟಕದ ಹಂಪಿ ಬಳಿ ಇರುವ ಅಂಜನಾದ್ರಿ ಅಲ್ಲ, ಬದಲಾಗಿ ತಿರುಪತಿ ಬಳಿ ಇರುವ ಅಂಜನಾದ್ರಿ ಬೆಟ್ಟಎಂದಿತ್ತು. ಇದಕ್ಕೆ ಪೂರಕವಾಗಿ ಒಂದಿಷ್ಟುಶಿಲಾಶಾಸನಗಳು, ಭೌಗೋಳಿಕ ಮತ್ತು ವೈಜ್ಞಾನಿಕ ದಾಖಲೆಗಳನ್ನು ಮುಂದಿಟ್ಟು ತಮ್ಮ ವಾದವೇ ಸರಿ ಎಂದು ಪಟ್ಟು ಹಿಡಿದಿತ್ತು. 

ತಿರುಪತಿಯೇ ಹನುಮ ಜನ್ಮಸ್ಥಳ: ಮತ್ತಷ್ಟು ಪಂಡಿತರ ವಾದ!

ಈ ವಾದವನ್ನು ಕರ್ನಾಟಕ ತಿರಸ್ಕರಿಸಿತ್ತಾದರೂ, ಆ ಬಗ್ಗೆ ಗಮನ ಕೊಡದ ಟಿಟಿಡಿ, ಇದೀಗ ತಿರುಪತಿ ಸಮೀಪದ ಅಂಜನಾದ್ರಿಯನ್ನು ಹೊಸ ಧಾರ್ಮಿಕ ಯಾತ್ರಾಸ್ಥಳವನ್ನಾಗಿ ಅಭಿವೃದ್ಧಿಪಡಿಸಲು ಮುಂದಾಗಿದೆ. ಈ ಕುರಿತು ಹೇಳಿಕೆ ನೀಡಿರುವ ಟಿಟಿಡಿ (TTD) ಅಧ್ಯಕ್ಷ ಕೆ.ಎಸ್‌.ಜವಾಹರ್‌ ರೆಡ್ಡಿ, ‘ಅಂಜನಾದ್ರಿಯನ್ನು ಹನುಮಂತನ ಜನ್ಮಸ್ಥಳದ ರೂಪದಲ್ಲಿ ಧಾರ್ಮಿಕ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಫೆ.16ರಂದು ಭೂಮಿ ಪೂಜೆ ನಡೆಸಲಾಗುವುದು. 

ಇದರಲ್ಲಿ ಭಾಗಿಯಾಗುವಂತೆ ವಿಶಾಖ ಶಾರದ ಪೀಠದ ಸ್ವರೂಪಾನಂದ ಸರಸ್ವರಿ ಸ್ವಾಮೀಜಿ, ರಾಮ ಜನ್ಮಭೂಮಿ ಟ್ರಸ್ಟ್‌ ಖಜಾಂಚಿ ಗೋವಿಂದೇವ ಗಿರಿ ಮಹಾರಾಜ್‌, ಚಿತ್ರಕೂಟ ಸ್ವಾಮೀಜಿ ರಾಮಭದ್ರಾಚಾರ್ಯಲು, ಕೋಟೇಶ್ವರ ಶರ್ಮಾ ಮತ್ತು ಇನ್ನಿತರೆ ಹಲವು ಧಾರ್ಮಿಕ ನಾಯಕರಿಗೆ ಆಹ್ವಾನ ನೀಡಲಾಗಿದೆ. ಇಡೀ ಕಾರ್ಯಕ್ರಮವನ್ನು ವಿಶ್ವದೆಲ್ಲೆಡೆ ಇರುವ ಭಕ್ತರಿಗೆ ತಲುಪಿಸುವ ಸಲುವಾಗಿ ಟಿಟಿಡಿಯ ವಾಹಿನಿಯಾದ ಎಸ್‌ವಿಬಿಸಿಯಲ್ಲಿ ಫೆ.16ರಂದು ಬೆಳಗ್ಗೆ 9.30ರಿಂದ ಕಾರ್ಯಕ್ರಮದ ನೇರ ಪ್ರಸಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ತಿರುಪತಿಯೇ ಹನುಮ ಜನ್ಮಸ್ಥಳ: ತಿರುಪತಿಯಲ್ಲಿರುವ ಅಂಜನಾದ್ರಿ ಬೆಟ್ಟವೇ ಹನುಮಂತನ ನಿಜವಾದ ಜನ್ಮಸ್ಥಳ ಎಂದು ಇತ್ತೀಚೆಗೆ ಘೋಷಿಸಿದ್ದ ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಸಂಶೋಧನೆಗೆ ಈಗ ಮತ್ತಿಷ್ಟುಪಂಡಿತರು ಬಲ ನೀಡುವ ಯತ್ನ ಮಾಡಿದ್ದಾರೆ. 

ಆಂಜನೇಯ ಜನ್ಮಸ್ಥಳ ಗೊಂದಲ ಎಬ್ಬಿಸುವುದು ಸರಿಯಲ್ಲ: ಮೋದಿ

ಟಿಟಿಡಿಯ (ತಿರುಪತಿ ತಿರುಮಲ ದೇವಸ್ಥಾನ ಸಮಿತಿ) ಶ್ರೀ ವೆಂಕಟೇಶ್ವರ ಇನ್‌ಸ್ಟಿಟ್ಯೂಟ್‌ ಆಫ್‌ ಹೈಯರ್‌ ವೇದಿಕ್‌ ಸ್ಟಡೀಸ್‌ ಮತ್ತು ರಾಷ್ಟ್ರೀಯ ಸಂಸ್ಕೃತ ವಿವಿ ಆಯೋಜಿಸಿದ್ದ ವೆಬಿನಾರ್‌ನಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ತಮಿಳುನಾಡಿನ ಕೋರ್ಟಲ್ಲಂ ಸಿದ್ದೇಶ್ವರ ಪೀಠದ ಶ್ರೀ ಸಿದ್ದೇಶ್ವರಾನಂದ ಭಾರತೀ ಸ್ವಾಮೀಜಿ, ಟಿಟಿಡಿ ಪಂಡಿತ ಪರಿಷತ್‌ ಮುಖ್ಯಸ್ಥ ಆಚಾರ‍್ಯ ವಿ. ಮುರಳೀಧರ ಶರ್ಮ, ಆಚಾರ‍್ಯ ಸಮುದ್ರ ರಂಗ ರಾಮಾನುಚಾರ್ಯರು, ‘ರಾಮಾಯಣ ಹಾಗೂ ಪುರಾಣಗಳು ತಿರುಮಲದ ಅಂಜನಾದ್ರಿ ಬೆಟ್ಟವೇ ಆಂಜನೇಯನ ಜನ್ಮಸ್ಥಳ ಎಂದು ಹೇಳಿವೆ’ ಎಂದು ಸಮರ್ಥಿಸಿಕೊಂಡಿದ್ದಾರೆ.

ತಮಿಳುನಾಡಿನ ಸಿದ್ದೇಶ್ವರ ಪೀಠದ ಶ್ರೀ ಸಿದ್ದೇಶ್ವರಾನಂದ ಭಾರತೀ ಸ್ವಾಮೀಜಿ ಪ್ರತಿಪಾದಿಸಿದ್ದಾರೆ. ‘ತಿರುಪತಿಯೇ ಜನ್ಮಸ್ಥಳ ಎಂದು ವಾಲ್ಮೀಕಿ ರಾಮಾಯಣದಲ್ಲೂ ಸ್ಪಷ್ಟವಾಗಿ ನಮೂದಿಸಲ್ಪಟ್ಟಿದೆ. ಆಂಜನೇಯ ಹುಟ್ಟಿದ್ದು ಕರ್ನಾಟಕದ ಕಿಷ್ಕಿಂಧೆಯಲ್ಲಿ ಎಂಬ ವಾದಗಳಿಗೆ ಪುರಾಣಗಳು ಮತ್ತು ಇತರೆ ಯಾವುದೇ ಸಾಂಪ್ರದಾಯಿಕ ಸಾಕ್ಷ್ಯಗಳು ಇಲ್ಲ. ಪುರಾಣಗಳ ಜ್ಞಾನ ಇಲ್ಲದವರು ಆಂಜನೇಯನ ಜನ್ಮಸ್ಥಾನದ ಕುರಿತು ಮಾತನಾಡಲು ಅನರ್ಹರು’ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!