ಅನಸ್ತೇಸಿಯಾ ಚುಚ್ಚಿಕೊಂಡು 24 ವರ್ಷದ ಯುವ ವೈದ್ಯೆ ಆತ್ಮಹತ್ಯೆ

Published : Jan 05, 2023, 12:56 PM IST
ಅನಸ್ತೇಸಿಯಾ ಚುಚ್ಚಿಕೊಂಡು 24 ವರ್ಷದ ಯುವ ವೈದ್ಯೆ ಆತ್ಮಹತ್ಯೆ

ಸಾರಾಂಶ

24 ವರ್ಷದ ಮಹಿಳಾ ವೈದ್ಯೆಯೊಬ್ಬರು ಅರಿವಳಿಕೆ ಔಷಧವನ್ನು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಮಧ್ಯಪ್ರದೇಶ ಭೋಪಾಲ್‌ನಲ್ಲಿ ನಡೆದಿದೆ.

ಭೋಪಾಲ್:  24 ವರ್ಷದ ಮಹಿಳಾ ವೈದ್ಯೆಯೊಬ್ಬರು ಅರಿವಳಿಕೆ ಔಷಧವನ್ನು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಮಧ್ಯಪ್ರದೇಶ ಭೋಪಾಲ್‌ನಲ್ಲಿ ನಡೆದಿದೆ.  ಭೋಪಾಲ್‌ನ ಸರ್ಕಾರಿ ಗಾಂಧಿ ವೈದ್ಯಕೀಯ ಕಾಲೇಜಿನ (ಜಿಎಂಸಿ) ಹಾಸ್ಟೆಲ್‌ನಲ್ಲಿ ಯುವ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.  ಮೃತ ವೈದ್ಯೆಯನ್ನು ಆಕಾಂಶಾ ಮಹೇಶ್ವರಿ (Akansha Maheshwari) ಎಂದು ಗುರುತಿಸಲಾಗಿದೆ. 

ನಿನ್ನೆ(ಜ.4) ಸಂಜೆ ಆಕೆಯ ಮೃತದೇಹ ಕಾಲೇಜು ಹಾಸ್ಟೆಲ್‌ನ ಕೊಠಡಿಯಲ್ಲಿ ಪತ್ತೆಯಾಗಿದೆ.   ಆಕೆಯ ಕೊಠಡಿಯಲ್ಲಿದ್ದ ಸಿರೀಂಜ್ ಹಾಗೂ ಲಸಿಕೆಯ ಬಾಟಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಕೋಹ್-ಇ-ಫಿಜಾ ಪೊಲೀಸ್ ಠಾಣೆಯ (Koh-e-Fiza police station) ಉಸ್ತುವಾರಿ ವಿಜಯ್ ಸಿಸೋಡಿಯಾ (Vijay Sisodia)ಹೇಳಿದ್ದಾರೆ.  ಮಹಿಳೆಯು ತಲಾ 2.5 ಮಿಲಿಯ ನಾಲ್ಕು ಡೋಸ್ ಅರಿವಳಿಕೆಯನ್ನು  ತನ್ನ ದೇಹಕ್ಕೆ ಇಂಜೆಕ್ಟ್ ಮಾಡಿಕೊಂಡು ಪ್ರಾಣ ಬಿಟ್ಟಿದ್ದಾಳೆ. 

ಆಪರೇಷನ್‌ ಮಾಡಿ ಮಹಿಳೆಯ ಹೊಟ್ಟೆಯೊಳಗೆ ಟವೆಲ್‌ ಬಿಟ್ಟ ವೈದ್ಯ..!

ಆಕೆಯ ಕೊಠಡಿಯಲ್ಲಿ ಡೆತ್‌ನೋಟ್ (security guard) ಪತ್ತೆಯಾಗಿದ್ದು, ಅದರಲ್ಲಿ ನಾನು ಮಾನಸಿಕವಾಗಿ ಗಟ್ಟಿಯಾಗಿಲ್ಲ. ಕೆಲಸದ ಒತ್ತಡ ನಿಭಾಯಿಸಲಾಗುತ್ತಿಲ್ಲ.  ವೈಯಕ್ತಿಕ ಕಾರಣಗಳಿಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನಾನೇ ಜವಾಬ್ದಾರಿ ಬೇರೆ ಯಾರೂ ಕಾರಣರಲ್ಲ ಎಂದು  ಬರೆದಿದ್ದಾರೆ.  ಅಲ್ಲದೇ  ತನ್ನ ಪೋಷಕರ ಬಳಿ ಕ್ಷಮಿಸುವಂತೆ ಕೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕಾಂಶಾ ಮಹೇಶ್ವರಿ ಅವರು ಸರ್ಕಾರಿ ಜಿಎಂಸಿಯಿಂದ ಮಕ್ಕಳ ವಿಭಾಗದ ತಜ್ಞ (paediatrics stream) ವಿಚಾರದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದು,  ಸ್ನಾತಕೋತ್ತರ ಪದವಿಯ ಮೊದಲ ವರ್ಷದಲ್ಲಿ ಅಧ್ಯಯನ ನಡೆಸುತ್ತಿದ್ದರು.  ಇತರ ಹಾಸ್ಟೆಲ್ ವಿದ್ಯಾರ್ಥಿಗಳ ಪ್ರಕಾರ, ಬುಧವಾರ ಬೆಳಗ್ಗೆಯಿಂದಲೇ ಈಕೆ ವಾಸವಿದ್ದ ಹಾಸ್ಟೆಲ್‌ ಕೊಠಡಿ ಮುಚ್ಚಿತ್ತು.  ಆದರೆ ವಿದ್ಯಾರ್ಥಿಗಳು ಸಂಜೆ ಬಂದು ನೋಡಿದಾಗಲೂ ಕೊಠಡಿ ಬಾಗಿಲು ಮುಚ್ಚಿಯೇ ಇರುವುದನ್ನು ನೋಡಿದಾಗ ಅನುಮಾನ ಬಂದು ಹಾಸ್ಟೆಲ್‌ನ ಭದ್ರತಾ ಸಿಬ್ಬಂದಿ (security guard) ಹಾಗೂ ಮೇಲ್ವಿಚಾರಕರಿಗೆ ವಿಷಯ ತಿಳಿಸಿದ್ದಾರೆ. ಕೊಠಡಿ ಒಳಗಿನಿಂದ ಚಿಲಕ ಹಾಕಿದ ಹಿನ್ನೆಲೆಯಲ್ಲಿ ಬಾಗಿಲು ಒಡೆದು ನೋಡಿದಾಗ ಯುವತಿ ಶವ ಪತ್ತೆಯಾಗಿದೆ. 

Fraud Case: ರಸ್ತೆ ಬದಿಯ ನಕಲಿ ಆಯುರ್ವೇದ ವೈದ್ಯನಿಂದ 8 ಲಕ್ಷ ರೂ. ಪಂಗನಾಮ: ಮೋಸದ ಜಾಲ ಹೀಗೂ ಉಂಟಾ?

ಮೂಲತ ಮಧ್ಯಪ್ರದೇಶದ ಗ್ವಾಲಿಯರ್‌ನವರಾದ (Gwalior) ಆಕಾಂಶಾ, ಒಂದು ತಿಂಗಳ ಹಿಂದೆ ಜಿಎಂಸಿಯಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಸೇರಿದ್ದರು.  ನಿನ್ನೆ ಬೆಳಗ್ಗೆ ಆಕೆ ಪೋಷಕರೊಂದಿಗೆ ಮಾತನಾಡಿದ್ದಾಳೆ ಎಂದು ತಿಳಿದು ಬಂದಿದ್ದು, ನಂತರ ಆಕೆ ಶವವಾಗಿ ಪತ್ತೆಯಾಗಿದ್ದಾಳೆ.  ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಟ್ರಂಪ್‌ಗೆ ಮುಯ್ಯಿಗೆ ಮುಯ್ಯಿ, ಪುಟಿನ್‌ ಜೊತೆ ಭಾಯಿ ಭಾಯಿ!
ಇನ್ನೂ 10 ದಿನಗಳ ಕಾಲ ಇಂಡಿಗೋಳು