Uniform Civil Code: ಚುನಾವಣೆಗೂ ಮುನ್ನ ಗುಜರಾತ್‌ನಲ್ಲಿ ಏಕರೂಪ ನಾಗರಿಕ ಸಂಹಿತೆ, ಸಮಿತಿ ರಚಿಸಿದ ಸರ್ಕಾರ!

Published : Oct 29, 2022, 06:33 PM IST
Uniform Civil Code: ಚುನಾವಣೆಗೂ ಮುನ್ನ ಗುಜರಾತ್‌ನಲ್ಲಿ ಏಕರೂಪ ನಾಗರಿಕ ಸಂಹಿತೆ, ಸಮಿತಿ ರಚಿಸಿದ ಸರ್ಕಾರ!

ಸಾರಾಂಶ

ಗುಜರಾತಿನಲ್ಲಿ ಏಕರೂಪ ನಾಗರಿಕ ಸಂಹಿತೆಯ ಕರಡು ರೂಪಿಸಿ ಅನುಷ್ಠಾನಗೊಳಿಸಲು ಸಮಿತಿಯೊಂದನ್ನು ರಚಿಸುವುದಾಗಿ ಘೋಷಿಸಲಾಗಿದೆ. ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ ಎಂದು  ಸಿಎಂ ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದಾರೆ.  

ಅಹಮದಾಬಾದ್‌ (ಅ.29): ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ವಿಚಾರದಲ್ಲಿ ಗುಜರಾತ್‌ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇರಿಸಿದೆ. ಅದರಂತೆ ಮುಂದಿನ ಚುನಾವಣೆಯ ವೇಳೆಗೆ ಗುಜರಾತ್‌ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬಹುದು ಎಂದು ಹೇಳಲಾಗಿದೆ.  ಏಕರೂಪ ನಾಗರಿಕ ಸಂಹಿತೆಯ ಕರಡು ರೂಪಿಸಿ ಅನುಷ್ಠಾನಗೊಳಿಸಲು ಸಮಿತಿಯೊಂದನ್ನು ರಚಿಸುವುದಾಗಿ ಸರ್ಕಾರ ಶನಿವಾರ ಘೋಷಣೆ ಮಾಡಿದೆ. ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ನ ನಿವೃತ್ತಿ ನ್ಯಾಯಾಧೀಶರು ಈ ಸಮಿತಿಗೆ ಅಧ್ಯಕ್ಷರಾಗಿರಲಿದ್ದಾರೆ ಎಂದು ರಾಜ್ಯ ಸಚಿವ ಸಂಪುಟ ನಿರ್ಧಾರ ಮಾಡಿದ್ದಾಗಿ ಗುಜರಾತ್‌ ಸಿಎಂ ಭೂಪೇಂದ್ರ ಪಟೇಲ್‌ ಟ್ವೀಟ್‌ ಮಾಡಿದ್ದಾರೆ. ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಲು ಸಮಿತಿ ರಚನೆಗೆ ಗುಜರಾತ್ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ರಾಜ್ಯ ಗೃಹ ಸಚಿವ ಹರ್ಷ ಸಾಂಘ್ವಿ ಹೇಳಿದ್ದಾರೆ. ಈಗಾಗಲೇ ಉತ್ತರಾಖಂಡ ರಾಜ್ಯ ಸರ್ಕಾರ ಕೂಡ ತನ್ನಲ್ಲಿ ಏಕರೂಪ ನಾಗರೀಕ ಸಂಹಿತೆ ಜಾರಿಯ ನಿಟ್ಟಿನಲ್ಲಿ ಸಮಿತಿ ರಚನೆ ಮಾಡಿದ್ದು, ಈಗಾಗಲೇ ಮೊದಲ ಸಭೆ ಕೂಡ ನಡೆದಿದೆ.


ಜುಲೈನಲ್ಲಿ, ಕೇಂದ್ರ ಸರ್ಕಾರವು (Gujarat Home Minister Harsh Sanghavi) ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತರಲು ಸಮಿತಿಯನ್ನು ಸ್ಥಾಪಿಸಲು ಪ್ರಸ್ತಾಪಿಸುವುದಿಲ್ಲ ಎಂದು ಹೇಳಿತ್ತು ಮತ್ತು ಈ ವಿಷಯದ ಕುರಿತು ವಿವಿಧ ಸಮಸ್ಯೆಗಳನ್ನು ಪರಿಶೀಲಿಸಲು ಮತ್ತು (Gujarat government) ಶಿಫಾರಸುಗಳನ್ನು ಮಾಡಲು ಕಾನೂನು ಆಯೋಗವನ್ನು ಕೇಳಿದೆ ಎಂದು ತಿಳಿಸಿತ್ತು. ಅದೇ ತಿಂಗಳಲ್ಲಿ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ರಚಿಸಲಾದ ಐದು ಸದಸ್ಯರ ಸಮಿತಿಯು ಜುಲೈ 4 ರಂದು ನವದೆಹಲಿಯಲ್ಲಿ ತನ್ನ ಮೊದಲ ಸಭೆಯನ್ನು ನಡೆಸಿತು. ನವೆಂಬರ್ ಕೊನೆಯಲ್ಲಿ/ಡಿಸೆಂಬರ್ ಆರಂಭದಲ್ಲಿ ಗುಜರಾತ್ ಹೊಸ ವಿಧಾನಸಭೆಗಾಗಿ ಚುನಾವಣೆ ನಡೆಯಲಿದೆ.

ಮೇ ತಿಂಗಳಲ್ಲಿ, ಉತ್ತರಾಖಂಡ ಸರ್ಕಾರವು (Uttarakhand government) ರಾಜ್ಯದಲ್ಲಿ ಯುಸಿಸಿ (UCC) ಜಾರಿಗೊಳಿಸುವ ನಿರ್ಧಾರವನ್ನು ಪ್ರಕಟಿಸಿತ್ತು. ಅದೇ ತಿಂಗಳು, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಕೂಡ ಯುಸಿಸಿಯನ್ನು ಶೀಘ್ರದಲ್ಲೇ ರಾಜ್ಯಕ್ಕೆ ತರಲಾಗುವುದು ಎಂದು ಘೋಷಿಸಿದ್ದರು. ಬಿಜೆಪಿ (BJP) ಮತ್ತು ಅದರ ನಾಯಕರು ಈ ಹಿಂದೆ ದೇಶದಲ್ಲಿ ಯುಸಿಸಿ ಅನುಷ್ಠಾನವನ್ನು ಬೆಂಬಲಿಸಿದ್ದಾರೆ, ಅದು ಧರ್ಮಗ್ರಂಥಗಳು ಮತ್ತು ವಿವಿಧ ಧಾರ್ಮಿಕ ಸಮುದಾಯಗಳ ಪದ್ಧತಿಗಳ ಆಧಾರದ ಮೇಲೆ ವೈಯಕ್ತಿಕ ಕಾನೂನುಗಳನ್ನು ಪ್ರತಿ ನಾಗರಿಕರನ್ನು ನಿಯಂತ್ರಿಸುವ ಸಾಮಾನ್ಯ ನಿಯಮಗಳೊಂದಿಗೆ ಬದಲಾಯಿಸುತ್ತದೆ. ಹಾಗಿದ್ದರೂ ಯುಸಿಸಿಯ ಕುರಿತಾದ ಚರ್ಚೆಯು ಹಲವಾರು ರಾಜ್ಯಗಳಲ್ಲಿ ಹುಟ್ಟಿಕೊಂಡಿದೆ.

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಪುಷ್ಕರ್‌ ಸಿಂಗ್‌ ಧಾಮಿ

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಇದನ್ನು "ಅಸಂವಿಧಾನಿಕ ಮತ್ತು ಅಲ್ಪಸಂಖ್ಯಾತರ ವಿರೋಧಿ ನಡೆ" ಎಂದು ಹೇಳಿದೆ. ಹಣದುಬ್ಬರದಿಂದ ಜನ ಬಳಲುತ್ತಿದ್ದಾರೆ. ಉತ್ತರಾಖಂಡ, ಉತ್ತರ ಪ್ರದೇಶದ ಸರ್ಕಾರ ಹಾಗೂ ಕೇಂದ್ರ ಸರ್ಕಾರು ಜನರ ಗಮನವನ್ನು ಬೇರೆಡೆ ಸೆಳೆಯಲು ಈ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಕರೆದಿದೆ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತು ಯಾವುದೇ ಕಾನೂನನ್ನು ರೂಪಿಸಲು ಅಥವಾ ಜಾರಿಗೊಳಿಸಲು ಸಂಸತ್ತಿಗೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಕೇಂದ್ರವು ಈ ತಿಂಗಳ ಆರಂಭದಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ಕಾನೂನು ಮತ್ತು ನ್ಯಾಯ ಸಚಿವಾಲಯವು ತನ್ನ ಅಫಿಡವಿಟ್‌ನಲ್ಲಿ ನೀತಿಯ ವಿಷಯವನ್ನು ಜನರ ಚುನಾಯಿತ ಪ್ರತಿನಿಧಿಗಳು ನಿರ್ಧರಿಸಬೇಕು ಮತ್ತು ಈ ನಿಟ್ಟಿನಲ್ಲಿ ಕೇಂದ್ರದಿಂದ ಯಾವುದೇ ನಿರ್ದೇಶನವನ್ನು ನೀಡಲಾಗುವುದಿಲ್ಲ ಎಂದು ಹೇಳಿದೆ.

Exclusive Interview: UCC ಜಾರಿಗೆ ಆಗ್ರಹ, ಹಿಜಾಬ್ ವಿವಾದ ಬಿಟ್ಟು ಓದಿಗೆ ಗಮನ ಕೊಡಿ: ಕೇರಳ ರಾಜ್ಯಪಾಲ

ಭಾರತೀಯ ಸಂವಿಧಾನದ 44 ನೇ ವಿಧಿಯು ನಿರ್ದೇಶನ ತತ್ವವಾಗಿದೆ, ಎಲ್ಲಾ ನಾಗರಿಕರಿಗೆ ಏಕರೂಪ ನಾಗರಿಕ ಸಂಹಿತೆಯನ್ನು ಪಡೆಯಲು ರಾಜ್ಯಗಳು ಪ್ರಯತ್ನಿಸುವ ಅಗತ್ಯವಿದೆ ಎಂದು ಅದು ಹೇಳಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!