ದೇವರನಾಡಲ್ಲಿ ಪೈಶಾಚಿಕ ಕೃತ್ಯ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ

Published : Jul 30, 2023, 04:53 PM IST
ದೇವರನಾಡಲ್ಲಿ ಪೈಶಾಚಿಕ ಕೃತ್ಯ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ

ಸಾರಾಂಶ

ದೇವರನಾಡು ಎಂದು ಕರೆಯಲ್ಪಡುವ ಕೇರಳದಲ್ಲಿ ರಾಕ್ಷಸೀಯ ಕೃತ್ಯವೊಂದು ಬೆಳಕಿಗೆ ಬಂದಿದೆ. 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಕತ್ತು ಹಿಸುಕಿ ಕೊಲೆ ಮಾಡಲಾಗಿದ್ದು, ಬಾಲಕಿಯ ಶವ ಸಮೀಪದ ಜವುಗು ಪ್ರದೇಶದಲ್ಲಿ ಪತ್ತೆಯಾಗಿದೆ. 

ತಿರುವನಂತಪುರ: ದೇವರನಾಡು ಎಂದು ಕರೆಯಲ್ಪಡುವ ಕೇರಳದಲ್ಲಿ ರಾಕ್ಷಸೀಯ ಕೃತ್ಯವೊಂದು ಬೆಳಕಿಗೆ ಬಂದಿದೆ. 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಕತ್ತು ಹಿಸುಕಿ ಕೊಲೆ ಮಾಡಲಾಗಿದ್ದು, ಬಾಲಕಿಯ ಶವ ಸಮೀಪದ ಜವುಗು ಪ್ರದೇಶದಲ್ಲಿ ಪತ್ತೆಯಾಗಿದೆ. ಕೇರಳದ ಎರ್ನಾಕುಲಂನಲ್ಲಿ ಈ ಪೈಶಾಚಿಕ ಕೃತ್ಯ ನಡೆದಿದ್ದು, ಬಾಲಕಿ ವಾಸವಿರುವ ಕಟ್ಟಡಕ್ಕೆ ಕೆಲ ದಿನಗಳ ಹಿಂದಷ್ಟೇ ವಾಸ್ತವ್ಯಕ್ಕೆ ಬಂದಿದ್ದ ವ್ಯಕ್ತಿ ಈ ಅಮಾನವೀಯ ಕೃತ್ಯವೆಸಗಿದ್ದು,  ಲೈಂಗಿಕ ದೌರ್ಜನ್ಯದ ಬಳಿಕ ಬಾಲಕಿಯ ಕೊಲೆ ಮಾಡಿ ಜೋಳಿಗೆಯಲ್ಲಿ ಹಾಕಿದ್ದಾನೆ. ಶುಕ್ರವಾರ ಈ ಘಟನೆ ನಡೆದಿದ್ದು, ನಂತರ ಆರೋಪಿಯೇ ತಪ್ಪೊಪ್ಪಿಕೊಂಡಿದ್ದಾನೆ. 

ಶುಕ್ರವಾರ ಸಂಜೆಯೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಆದರೆ ಆತ ಪಾನಮತ್ತ ಸ್ಥಿತಿಯಲ್ಲಿದ್ದ ಕಾರಣ ಆತನಿಂದ ಮಾಹಿತಿ ಪಡೆಯಲು ಗಂಟೆಗಳೇ ಬೇಕಾಗಿತ್ತು.  ಬಿಹಾರ ಮೂಲದ ದಂಪತಿಯ 5 ವರ್ಷದ ಮಗು ಶುಕ್ರವಾರ ಸಂಜೆಯಿಂದ ನಾಪತ್ತೆಯಾಗಿತ್ತು.  ಸುತ್ತಮುತ್ತಲ ಸಿಸಿಟಿವಿ ಪರಿಶೀಲಿಸಿದಾಗ ಆರೋಪಿ ಬಾಲಕಿಯನ್ನು ಕರೆದುಕೊಂಡು ಹೋಗಿರುವುದು ಕಂಡು ಬಂದಿತ್ತು. 

ಕೇರಳದಲ್ಲಿ ಹಲಸು ಕ್ರಾಂತಿ ಸೃಷ್ಟಿಸಿದ ವಾಟ್ಸಾಪ್ ಗ್ರೂಪ್; ಗ್ರಾಮೀಣ ಮಹಿಳೆಯರಿಗೆ ಬದುಕು ಕಟ್ಟಿಕೊಟ್ಟ'ಚಕ್ಕಾಕೂಟಂ'

ಬಿಹಾರ ಮೂಲದವನೇ ಆದ ಅಶ್ಫಾಖ್ ಅಸ್ಲಾಂ (Asfaq Aslam) ಎಂಬಾತ ಬಾಲಕಿಯನ್ನು ಕರೆದುಕೊಂಡು ಹೋಗಿರುವುದು ಕಂಡು ಬಂತು ನಂತರ ರಾತ್ರಿ 9. 30ರ ಸುಮಾರಿಗೆ ಆತನನ್ನು ವಶಕ್ಕೆ ಪಡೆದಾಗ ಆತ ಕಂಠಪೂರ್ತಿ ಕುಡಿದಿದ್ದು, ಪ್ರಶ್ನೆಗಳಿಗೆ ಉತ್ತರಿಸುವ ಸ್ಥಿತಿಯಲ್ಲೂ ಆತ ಇರಲಿಲ್ಲ ಎಂದು ಎರ್ನಾಕುಲಂ ಗ್ರಾಮೀಣ ಎಸ್‌ ಪಿ ವಿವೇಕ್‌ ಕುಮಾರ್ ಹೇಳಿದ್ದಾರೆ. 

ಇದಾದ ಬಳಿಕ ಶನಿವಾರ ಬೆಳಗ್ಗೆ ಅಸ್ಲಾಂ ತಪ್ಪೊಪ್ಪಿಕೊಂಡಿದ್ದು, ಮಗುವನ್ನು ಎಲ್ಲಿಗೆ ಕರೆದುಕೊಂಡು ಹೋಗಿದ್ದ ಎಂಬುದನ್ನು ಹೇಳಿದ್ದಾನೆ. ಆರೋಪಿ ಇತ್ತೀಚೆಗಷ್ಟೇ ಬಾಲಕಿ ಹಾಗೂ ಆಕೆಯ ಕುಟುಂಬ ವಾಸವಿರುವ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದ. ನೀರಿನಿಂದ ಕುಡಿದ ಜವುಗು ಪ್ರದೇಶದಲ್ಲಿ ಬಾಲಕಿಯ ಶವ ಎಸೆದಿದ್ದ ಆರೋಪಿ ವ ಯಾರಿಗೂ ಕಾಣಬಾರದು ಎಂಬ ಕಾರಣಕ್ಕೆ ಶವವನ್ನು ಕಸ ಹಾಗೂ ಚೀಲಗಳಿಂದ ಮುಚ್ಚಿದ್ದ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆತನನ್ನು ಬಂಧಿಸಲಾಗಿದ್ದು, ಆತ ಕುಡಿದಿದ್ದ ಕಾರಣಕ್ಕೆ ವಿಚಾರಣೆ ವಿಳಂಬವಾಗಿತ್ತು. 

ಫೇಸ್‌ಬುಕ್‌ನಲ್ಲಿ (Facebook) ಬಾಲಕಿ ನಾಪತ್ತೆಯಾದ ಬಗ್ಗೆ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಆರೋಪಿಯ ಜೊತೆ ಬಾಲಕಿಯನ್ನು ನೋಡಿದ್ದಾಗಿ ಮತ್ತೊಬ್ಬ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದರು.  ಅಲ್ಲೇ ಈ ವ್ಯಕ್ತಿ ಆರೋಪಿ ಬಳಿ ಬಾಲಕಿಯ ಬಗ್ಗೆ ಕೇಳಿದಾಗ ಆತ, ಆಕೆ ನನ್ನ ಮಗಳು ಎಂದು ಹೇಳಿದ್ದ. ನಂತರ ಆತ ಮಾರುಕಟ್ಟೆಯ ಹಿಂಭಾಗಕ್ಕೆ ಮದ್ಯ ಸೇವನೆಗಾಗಿ ಹೋಗಿದ್ದ. ಅಲ್ಲದೇ ಈ ವೇಳೆ ಬಾಲಕಿಯ ಕೈಯಲ್ಲಿ ಚಾಕೋಲೇಟ್‌ಗಳಿದ್ದವು  ಎಂದು ಪೊಲೀಸರಿಗೆ ಆರೋಪಿಯನ್ನು ನೋಡಿದ ವ್ಯಕ್ತಿ ಮಾಹಿತಿ ನೀಡಿದ್ದಾರೆ. 

ಆತ ನೀಡಿದ ಮಾಹಿತಿ ಆಧರಿಸಿ ಇಡೀ ಮಾರ್ಕೆಟ್ ಸುತ್ತಮುತ್ತ ಹುಡುಕಾಟ ನಡೆಸಲಾಗಿತ್ತು.  ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿಯೂ  ಬಾಲಕಿಯನ್ನು ಟ್ರೇಸ್ ಮಾಡುವುದಕ್ಕೆ ಅನೇಕರು ನೆರವಾಗಿದ್ದಾರೆ. ಈ ಮಧ್ಯೆ ಕೇರಳ ಪೊಲೀಸರು ಇಂದು ಯುವತಿಯ ಕುಟುಂಬದೊಂದಿಗೆ ಸಾಮಾಜಿಕ ಜಾಲತಾಣದ ಮೂಲಕ ಕ್ಷಮೆ ಕೋರಿದ್ದು, ಮಗುವನ್ನು ಮಡಿಲು ಸೇರಿಸಲಾಗದಿರುವುದಕ್ಕೆ  ಬೇಸರ ವ್ಯಕ್ತಪಡಿಸಿದ್ದಾರೆ. 

ಖಾಕಿ ತೊಟ್ಟು ಪೊಲೀಸ್‌ ಸ್ಟೇಷನ್‌ನಲ್ಲಿ ಕೋಳಿ ಸಾರು ಮಾಡಿದ ವಿಡಿಯೋ ವೈರಲ್‌, ನೋಟಿಸ್‌ ನೀಡಿದ ಐಜಿ!

ಬಾಲಕಿ ಶುಕ್ರವಾರ ಸಂಜೆ 3 ಗಂಟೆಯ ವೇಳೆಗೆ ನಾಪತ್ತೆಯಾಗಿದ್ದು, ಸಂಜೆ 5.30ರೊಳಗೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಲಾಗಿದೆ.  ಮಗುವಿಗಾಗಿ ಪೋಷಕರು ಎಲ್ಲೆಡೆ ಹುಡುಕಿ ಕಾಣದೇ ಇದ್ದಾಗ ಸಂಜೆ 7. ಗಂಟೆ 10 ನಿಮಿಷಕ್ಕೆ ಪ್ರಕರಣ ದಾಖಲಿಸಿದ್ದಾರೆ. ಪೋಷಕರ ದೂರು ಆಧರಿಸಿ ಸಂಜೆ 8 ಗಂಟೆಗ ಎಫ್‌ಐಆರ್ ಆಗಿದ್ದು, ರಾತ್ರಿ 9.30ಕ್ಕೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಆದರೆ ಕಂಠಮಟ್ಟ ಕುಡಿದಿದ್ದ ಆರೋಪಿ ಪೊಲೀಸರ ಪ್ರಶ್ನೆಗೆ ಉತ್ತರಿಸಲಾಗದ ಕಾರಣ ಶನಿವಾರ ಪೊಲೀಸರು ವಿಚಾರಣೆ ನಡೆಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ. 

ಬಾಲಕಿಯ ಶವವನ್ನು ಬಳಿಕ ಶಾಲಾ ಆವರಣದಲ್ಲಿ ಇಡಲಾಗಿದ್ದು, 100 ಹೆಚ್ಚು ಜನ ಅಂತಿಮ ನಮನ ಸಲ್ಲಿಸಿದರು. ಘಟನೆಗೆ ಸಂಬಂಧಿಸಿದಂತೆ ಕೇರಳ ಗವರ್ನರ್ ಅರಿಫ್ ಮೊಹಮ್ಮದ್ ಖಾನ್ (Kerala Governor Arif Mohammed Khan) ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದು, ಇದೊಂದು ದುರಾದೃಷ್ಟಕರ ವಿಚಾರ ಎಂದಿದ್ದಾರೆ. ಕೇರಳ ಮಾತ್ರವಲ್ಲ ಇನ್ನೆಲ್ಲೇ ಆದರೂ ಇದನ್ನು ಒಪ್ಪಿಕೊಳ್ಳಲಾಗದು, ಅವರು ಮನುಷ್ಯರಲ್ಲ ರಾಕ್ಷಸರು, ಅವರನ್ನು ಮನುಷ್ಯರೆಂದು ಕರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ