ಕೊರೋನಾ ನಡುವೆ ಬಿಹಾರ ಚುನಾವಣೆ: ಬಿಜೆಪಿ ಪ್ರಣಾಳಿಕೆಯಲ್ಲಿ ಮಹತ್ವದ ಘೋಷಣೆ!

Published : Oct 22, 2020, 01:35 PM ISTUpdated : Oct 22, 2020, 02:04 PM IST
ಕೊರೋನಾ ನಡುವೆ ಬಿಹಾರ ಚುನಾವಣೆ: ಬಿಜೆಪಿ ಪ್ರಣಾಳಿಕೆಯಲ್ಲಿ ಮಹತ್ವದ ಘೋಷಣೆ!

ಸಾರಾಂಶ

ಗರಿಗೆದರಿದ ಬಿಹಾರ ವಿಧಾನಸಭಾ ಚುನಾವಣೆ| ಪ್ರಣಾಳಿಕೆ ಬಿಡುಗಡೆಗೊಳಿಸಿದ ಬಿಜೆಪಿ| ಪ್ರಣಾಳಿಕೆಯಲ್ಲಿ ಮಹತ್ವದ ಘೋಷಣೆ

ಪಾಟ್ನಾ(ಅ.22): ಬಿಹಾರ ವಿಧಾನಸಭಾ ಚುನಾವಣೆ ಸಂಬಂಧ ಇಂದು ಬಿಜೆಪಿ ತನ್ನ ಪ್ರಣಾಳಿಕೆ ಜಾರಿ ಮಾಡಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪಾಟ್ನಾದಲ್ಲಿ ಬಿಜೆಪಿಯ ಐದು ಸೂತ್ರ, ಒಂದು ಗುರಿ, 11 ಸಂಕಲ್ಪದ ಕಲ್ಪನೆಯ ದಾಖಲೆ ಜಾರಿಗೊಳಿಸಿದೆ. ಈ ಪ್ರಣಾಳಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೇರಿದರೆ ಬಿಹಾರಾದ್ಯಂತ ಉಚಿತ ಕೊರೋನಾ ಲಸಿಕೆ ಹಾಗೂ 19 ಲಕ್ಷ ಉದ್ಯೋಗ ಕಲ್ಪಿಸುವ ಮಾತು ಕೊಟ್ಟಿದೆ.

ಐದು ವರ್ಷದಲ್ಲಿ ಐದು ಲಕ್ಷ ಉದ್ಯೋಗ ನೀಡುವ ಘೋಷಣೆ:

ಬಿಜೆಪಿ ಜಾರಿಗೊಳಿಸಿದ ಈ ಪ್ರಣಾಳಿಕೆ ಜೊತೆ ವಿಡಿಯೋ ಒಂದನ್ನೂ ಜಾರಿಗೊಳಿಸಿದೆ. ಇದನ್ನು ಟ್ವೀಟ್ ಹಾಗೂ ಫೆಸ್‌ಬುಕ್ದ ಖಾತೆಯಲ್ಲೂ ಶೇರ್ ಮಾಡಿಕೊಂಡಿದ್ದಾರೆ. ಇಲ್ಲಿ ಮುಂದಿನ ಐದು ವರ್ಷಗಳಲ್ಲಿ ಐದು ಲಕ್ಷ ಉದ್ಯೋಗ ಕಲ್ಪಿಸುವ ಭರವಸೆ ನೀಡಿದೆ. ಜೊತೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವುfದಾಗಿಯೂ ತಿಳಿಸಿದೆ. ಅಲ್ಲದೇ ಬಿಹಜಾರದಲ್ಲಿ ಒಂದು ಕೋಟಿ ಮಹಿಳೆಯರನ್ನು ಸ್ವಾವಲಂಭಿಯಾಗಿಸುವ ಸಂಕಲ್ಪವನ್ನೂ ಮಾಡಿದೆ.

ಬಿಜೆಪಿ ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳುಬಿಹ

* ಬಿಹಾರದ ಪ್ರತಿಯೊಬ್ಬರಿಗೂ ಫ್ರೀ ಕೊರೋನಾ ಲಸಿಕೆ

* 2025 ರೊಳಗೆ ದರ್‌ಭಂಗಾದಲ್ಲಿ ಏಮ್ಸ್‌ ಆಸ್ಪತ್ರೆ ನಿರ್ಮಾಣ

* ಎಂಎಸ್‌ಪಿಯಲ್ಲಿ ರೈತರ ಬೆಳೆ ಖರೀದಿ

* ಉನ್ನತ ಶಿಕ್ಷಣ ವಿಶ್ವವಿದ್ಯಾನಿಲಯ ಹಾಗೂ ಸಂಸ್ಥೆಗಳಲ್ಲಿ ಮೂರು ಲಕ್ಷ  ಉಪನ್ಯಾಸಕರ ನೇಮಕ

* ಬಿಹಾರದಲ್ಲಿ ನೆಕ್ಸ್ಟ್‌ ಜನರೇಷನ್ ಐಟಿ ಹಬ್‌ ಆಗಿ ಅಭಿವೃದ್ಧಿ ಪಡಿಸಿ ಮುಂದಿನ ಐದು ವರ್ಷಗಳಲ್ಲಿ ಐದು ಲಕ್ಷಕ್ಕೂ ಅಧಿಕ ಉದ್ಯೋಗ

* ಐವತ್ತು ಸಾವಿರ ಕೋಟಿ ವ್ಯವಸ್ಥೆ ಮಾಡಿ ಒಂದು ಕೋಟಿ ಮಹಿಳೆಯರನ್ನು ಸ್ವಾವಲಂಭಿಯಾಗಿಸುವ ಯೋಜನೆ

*  2022ರವರೆಗೆ 30 ಲಕ್ಷ ಮಂದಿಗೆ ಮನೆ ನಿರ್ಮಾಣ

* ಮೆಡಿಕಲ್, ಇಂಜಿನಿಯರಿಂಗ್ ಹಾಘೂ ತಂತ್ರಜ್ಞಾನ ಶಿಕ್ಷಣವನ್ನು ಹಿಂದಿಯಲ್ಲಿ ಆರಂಭಿಸುವ ಭರವಸೆ

* ಮೀನು ಉತ್ಪಾದನೆಯಲ್ಲಿ ಬಿಹಾರವನ್ನು ದೇಶದ ನಂಬರ್ ವನ್ ರಾಜ್ಯವನ್ನಾಗಿಸುವ ಯತ್ನ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಟಿಹಾರ್ ಜಂಕ್ಷನ್‌ನಲ್ಲಿ ಮಹಿಳೆಯ ಭಯಾನಕ ಅನುಭವ: 30-40 ಪುರುಷರು ನುಗ್ಗಲು ಯತ್ನ, ಶೌಚಾಲಯದಲ್ಲಿ ಸಿಲುಕಿದ ಮಹಿಳೆ!
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!