ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಕರೆ, ಮೂರೇ ದಿನದಲ್ಲಿ ಆರೋಪಿ ಇಂತೇಖಾಬ್ ಅಲಂ ಅರೆಸ್ಟ್!

Published : Jan 21, 2024, 07:06 PM ISTUpdated : Jan 21, 2024, 07:09 PM IST
ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಕರೆ, ಮೂರೇ ದಿನದಲ್ಲಿ ಆರೋಪಿ ಇಂತೇಖಾಬ್ ಅಲಂ ಅರೆಸ್ಟ್!

ಸಾರಾಂಶ

ರಾಮ ಮಂದಿರ ಪ್ರಾಣಪ್ರತಿಷ್ಠೆ ದಿನ ಭಗವಾನ್ ಶ್ರೀರಾಮನ ಮಂದಿರವನ್ನು ಸ್ಫೋಟಿಸುವುದಾಗಿ ಪೊಲೀಸರಿಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ಇಂತೇಖಾಬ್ ಅಲಂನನ್ನು ಪೊಲೀಸರು ಬಂಧಿಸಿದ್ದಾರೆ. ಉಗ್ರ ದಾವುದ್ ಇಬ್ರಾಹಿಂ ಆಪ್ತ ಚೋಟಾ ಶಕೀಲ್ ಗ್ಯಾಂಗ್‌ನ ಸದಸ್ಯ ಎಂದು ಬೆದರಿಕೆ ಹಾಕಿದ್ದ.   

ಪಾಟ್ನಾ(ಜ.21) ಆಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ ನಾಳೆ ಬಾಲರಾಮನ ಪ್ರಾಣಪ್ರತಿಷ್ಠೆ ನಡೆಯಲಿದೆ. ತಯಾರಿಗಳು ಪೂರ್ಣಗೊಂಡಿದೆ, ರಾಮ ಮಂದಿರ, ಆಯೋಧ್ಯೆ ಸಂಪೂರ್ಣ ಅಲಂಕಾರಗೊಂಡಿದೆ. ಪ್ರಧಾನಿ ಮೋದಿ ಸೇರಿ ದೇಶ ವಿದೇಶದ ಗಣ್ಯರು ಪ್ರಾಣಪ್ರತಿಷ್ಠೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹೀಗಾಗಿ ಗರಿಷ್ಠ ಭದ್ರತೆ ನೀಡಲಾಗಿದೆ. ಇದರ ನಡುವೆ ತಾನು ಚೋಟಾ ಶಕೀಲ್ ಗ್ಯಾಂಗ್ ಸದಸ್ಯ ಎಂದು ಬಿಹಾರ ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ, ಜನವರಿ 22ರಂದು ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ತಕ್ಷಣವೇ ಅಲರ್ಟ್ ಆದ ಪೊಲೀಸರು ಆರೋಪಿ ಇಂತೇಖಾಬ್ ಅಲಂನನ್ನು ಬಂಧಿಸಿದ್ದಾರೆ.

21 ವರ್ಷದ ಇಂತೇಖಾಬ್ ಅಲಂ ಬಲುವಾ ಕಲಿಯಾಗಂಜ್ ಮೂಲದವನಾಗಿದ್ದು, ಜನವರಿ 19 ರಂದು ಬಿಹಾರ ಪೊಲೀಸರಿಗೆ ಕರೆ ಮಾಡಿದ್ದಾನೆ. 112ಕ್ಕೆ ಕರೆ ಮಾಡಿ ತಾನು ಚೋಟಾ ಶಕೀಲ್ ಗ್ಯಾಂಗ್ ವ್ಯಕ್ತಿ. ರಾಮ ಮಂದಿರ ಪ್ರಾಣಪ್ರತಿಷ್ಠೆ ದಿನ ಅಂದರೆ ಜನವರಿ 22ರಂದು ಆಯೋಧ್ಯೆ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಪೊಲೀಸರಿಗೆ ತಡೆಯಲು ಸಾಧ್ಯವಾದರೆ ತಡೆಯಿರಿ ಎಂದು ಸವಾಲು ಹಾಕಿದ್ದಾನೆ. 

ಶಾಲೆಯಲ್ಲಿ ಪ್ರಾಣಪ್ರತಿಷ್ಠೆ ಸಂಭ್ರಮಕ್ಕೆ ಬ್ರೇಕ್, ತಮಿಳುನಾಡು ಸರ್ಕಾರದ ವಿರುದ್ಧ ಅಣ್ಣಾಮಲೈ ಗರಂ!

ಕರೆ ಬಂದ ನಂಬರ್ ಟ್ರೇಸ್ ಮಾಡಿದ ಪೊಲೀಸರು ಮೂರೇ ದಿನದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ತಂದೆಯ ಹೆಸರಿನಲ್ಲಿರುವ ಸಿಮ್ ಮೂಲಕ ಆರೋಪಿ ಇಂತೇಖಾಬ್ ಅಲಂ ಪೊಲೀಸರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ. ಸೂಕ್ಷ್ಮ ವಿಚಾರವಾಗಿರುವ ಕಾರಣ ಪ್ರಕರಣ ದಾಖಲಿಸಲಾಗಿದೆ. ಬೆದರಿಕೆ ಕರೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

ಆರೋಪಿ ಇಂತೇಖಾಬ್ ಅಲಂ ಮಾನಸಿಕವಾಗಿ ಸ್ಥಿರವಾಗಿಲ್ಲ ಅನ್ನೋ ವಾದಗಳು ಕುಟುಂಬದಿಂದ ಕೇಳಿಬಂದಿದೆ. ಇತ್ತ ಈತನ ವಿರುದ್ಧ ಇತರ ಯಾವುದೇ ಪ್ರಕರಣಗಳಿಲ್ಲ. ಆದರೆ ಪೊಲೀಸರು ಎಲ್ಲಾ ಆಯಾಮದಲ್ಲಿ ತನಿಖೆ ನಡೆಸುವುದಾಗಿ ಹೇಳಿದ್ದಾರೆ. 

ಬಿಜೆಪಿ ವಿರುದ್ಧ ಹೋರಾಡಿ, ಶ್ರೀರಾಮನ ವಿರುದ್ಧವಲ್ಲ, ತಮ್ಮ ನಾಯಕರಿಗೆ ಕಾಂಗ್ರೆಸ್ ಮುಖಂಡನ ಸಲಹೆ!

ಆಯೋಧ್ಯೆ ರಾಮ ಮಂದಿರಕ್ಕೆ ಬೆದರಿಕೆ ಹೆಚ್ಚಿರುವುದರಿಂದ ಜೊತೆಗೆ ಗಣ್ಯರು ಸುರಕ್ಷತೆ ದೃಷ್ಟಿಯಿಂದ ಭಯೋತ್ಪಾದನಾ ನಿಗ್ರಹ ದಳ ಈಗಾಗಲೆ ಆಯೋಧ್ಯೆಯಲ್ಲಿ ನಿಯೋಜನೆಗೊಂಡಿದೆ. ಉತ್ತರ ಪ್ರದೇಶ ಪೊಲೀಸ್ ಸೇರಿದಂತೆ ಭದ್ರತಾ ಪಡೆಗಳು ಗರಿಷ್ಠ ಮಟ್ಟದ ಸುರಕ್ಷತೆ ನೀಡಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?