ಬಿಲ್ಕಿಸ್ ಬಾನೋ ಕೇಸ್‌: ಅಪರಾಧಿಗಳ ಬಿಡುಗಡೆ ನಿರ್ಧಾರ ಹಿಂಪಡೆಯುವಂತೆ ರಾಷ್ಟ್ರಪತಿಗೆ ಮನವಿ

By BK AshwinFirst Published Aug 20, 2022, 7:05 PM IST
Highlights

ಬಿಲ್ಕಿಸ್‌ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ 11 ಅಪರಾಧಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಸಂಬಂಧ ಮೂವರು ಕಾಂಗ್ರೆಸ್‌ ಮುಸ್ಲಿಂ ಶಾಸಕರು ಬಿಡುಗಡೆ ನಿರ್ಧಾರ ಹಿಂಪಡೆಯುವಂತೆ ರಾಷ್ಟ್ರಪತಿಗೆ ಮನವಿ ಮಾಡಿದ್ದಾರೆ.

2002 ರ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 11 ಅಪರಾಧಿಗಳನ್ನು ಬಿಡುಗಡೆ ಮಾಡುವ "ನಾಚಿಕೆಗೇಡಿನ ನಿರ್ಧಾರ" ಹಿಂಪಡೆಯಲು ಗುಜರಾತ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಅಲ್ಲಿನ ಕಾಂಗ್ರೆಸ್‌ನ ಮೂವರು ಶಾಸಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. ಮೂವರು ಶಾಸಕರಾದ ಗ್ಯಾಸುದ್ದೀನ್ ಶೇಖ್, ಇಮ್ರಾನ್ ಖೇಡಾವಾಲಾ ಮತ್ತು ಜಾವೇದ್ ಪಿರ್ಜಾದಾ ರಾಷ್ಟ್ರಪ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ ಎಂದು ಗ್ಯಾಸುದ್ದೀನ್ ಶೇಖ್ ಶನಿವಾರ ತಿಳಿಸಿದ್ದಾರೆ. "ಗುಜರಾತ್ ಕಾಂಗ್ರೆಸ್ ಶಾಸಕರಾದ @Gyasuddin_INC, @Imran_kedawala ಮತ್ತು ಜಾವೇದ್ ಪಿರ್ಜಾದಾ ಅವರು ಬಿಲ್ಕಿಸ್ ಬಾನೋ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ" ಎಂದು ಪತ್ರದ ಪ್ರತಿಯೊಂದಿಗೆ ಗ್ಯಾಸುದ್ದೀನ್ ಶೇಖ್ ಅವರ ಟ್ವಿಟ್ಟರ್‌ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾಗಿದೆ. 

ಬಿಲ್ಕಿಸ್ ಬಾನೋ ಅವರ ಸಾಮೂಹಿಕ ಅತ್ಯಾಚಾರ ಮತ್ತು ಅವರ ಕುಟುಂಬದ 7 ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಲು ಆದೇಶಿಸಿದ ಗುಜರಾತ್ ಬಿಜೆಪಿ ಸರ್ಕಾರದ "ನಾಚಿಕೆಗೇಡಿನ ನಿರ್ಧಾರ"ದಿಂದ ಅಂತಹ ನಿರ್ಧಾರವನ್ನು ತೆಗೆದುಕೊಂಡ ದಿನವನ್ನು ಕಳಂಕಗೊಳಿಸಿದೆ ಎಂದು ಸಹ ಈ ಪತ್ರದಲ್ಲಿ ತಿಳಿಸಲಾಗಿದೆ. ಕ್ಷಮಾದಾನ ನೀತಿಯಡಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅತ್ಯಾಚಾರ ಅಪರಾಧಿಗಳನ್ನು ಬಿಡುಗಡೆ ಮಾಡಬಾರದು ಎಂದು ಕೇಂದ್ರ ಸರ್ಕಾರ ಸ್ಪಷ್ಟ ಮಾರ್ಗಸೂಚಿ ಹೊಂದಿದ್ದರೂ, ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಿಗೆ ಕ್ಷಮಾದಾನ ನೀಡುವ ಮೂಲಕ ಗುಜರಾತ್‌ನ ಬಿಜೆಪಿ ಸರ್ಕಾರ ತನ್ನ ಅಸೂಕ್ಷ್ಮತೆಯನ್ನು ಪ್ರದರ್ಶಿಸಿದೆ. ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವವರಿಗೆ ಇದು ನಿರಾಶಾದಾಯಕ ನಿರ್ಧಾರ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

"ಬಿಲ್ಕಿಸ್‌ ಬಾನೊ ಅತ್ಯಾಚಾರಿಗಳು ಬ್ರಾಹ್ಮಣರು, ಸುಸಂಸ್ಕೃತರು"; ಬಿಜೆಪಿ ಶಾಸಕ

2002ರ ಗುಜರಾತ್ ಕೋಮುಗಲಭೆಯಲ್ಲಿ ಆಕೆಯ 3 ವರ್ಷದ ಮಗಳು ಸೇರಿದಂತೆ ಆಕೆಯ ಕುಟುಂಬದ ಏಳು ಸದಸ್ಯರ ಹತ್ಯೆಯ ಅಪರಾಧಕ್ಕಾಗಿ ಮತ್ತು ಬಿಲ್ಕಿಸ್ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು.ಇದಕ್ಕೆ ವಿರುದ್ಧವಾಗಿ, ಗುಜರಾತ್‌ನ ಬಿಜೆಪಿ ಸರ್ಕಾರವು ಇಂತಹ ಘೋರ ಅಪರಾಧಗಳ ಅಪರಾಧಿಗಳಿಗೆ ಕ್ಷಮೆ ನೀಡಿದೆ ಎಂದು ಶಾಸಕರು ಪತ್ರದಲ್ಲಿ ಹೇಳಿದ್ದಾರೆ .2002ರ ಕೋಮು ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೋ ಅವರ 7 ಕುಟುಂಬ ಸದಸ್ಯರ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಎಲ್ಲಾ 11 ಅಪರಾಧಿಗಳನ್ನು ಆಗಸ್ಟ್ 15 ರಂದು  ಗುಜರಾತ್‌ನ ಬಿಜೆಪಿ ಸರ್ಕಾರವು ಅವರನ್ನು ಬಿಡುಗಡೆ ಮಾಡಲು ಅನುಮತಿಸಿದ ನಂತರ ಗೋಧ್ರಾ ಉಪ-ಜೈಲಿನಿಂದ ಹೊರನಡೆದಿದ್ದಾರೆ. ಗುಜರಾತ್‌ ಸರ್ಕಾರದ ಈ ನಿರ್ಧಾರ ವಿರೋಧ ಪಕ್ಷಗಳಿಂದ ತೀವ್ರ ವಿರೋಧಕ್ಕೆ ಕಾರಣವಾಗಿದೆ.

ಆಡೋದು ಒಂದು, ಮಾಡೋದು ಒಂದು; ದ್ವಂದ್ವ ನೀತಿ ಜನತೆ ನೋಡುತ್ತಿದೆ; ರಾಹುಲ್‌ ಗಾಂಧಿ

ರಾಜ್ಯದ 1992 ರ ಉಪಶಮನ ನೀತಿಯ ಅಡಿಯಲ್ಲಿ ಪರಿಹಾರಕ್ಕಾಗಿ ಅಪರಾಧಿಗಳ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿದ ನಂತರ ಅವರನ್ನು ಬಿಡುಗಡೆ ಮಾಡಲಾಯಿತು. ಜನವರಿ 21, 2008 ರಂದು ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು ಗಲಭೆಯಲ್ಲಿ ಬದುಕುಳಿದ ಬಿಲ್ಕಿಸ್ ಬಾನೋ ಅವರ ಕುಟುಂಬದ 7 ಸದಸ್ಯರ ಕೊಲೆ ಮತ್ತು ಆಕೆಯ ಮೇಲಿನ ಸಾಮೂಹಿಕ ಅತ್ಯಾಚಾರದ ಪ್ರಕರಣದ ಎಲ್ಲಾ 11 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಅವರ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು. ಆದರೆ, 15 ವರ್ಷಗಳಿಗಿಂತ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ್ದೇವೆ ಎಂದು ಈ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರು ತನ್ನ ಅಕಾಲಿಕ ಬಿಡುಗಡೆಗಾಗಿ ಮನವಿಯೊಂದಿಗೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. 1992ರ ನೀತಿಯಂತೆ ಅಪರಾಧಿಗೆ ಶಿಕ್ಷೆ ವಿಧಿಸಿದ ದಿನಾಂಕವನ್ನು ಆಧರಿಸಿ ಆತನ ಶಿಕ್ಷೆಯ ವಿನಾಯತಿ ವಿಚಾರವನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರಕ್ಕೆ ಸೂಚಿಸಿತ್ತು. ಅದರ ನಂತರ, ಸರ್ಕಾರವು ಸಮಿತಿಯನ್ನು ರಚಿಸಿತು, ಹಾಗೂ ಆ ಸಮಿತಿ ಎಲ್ಲಾ ಅಪರಾಧಿಗಳ ಬಿಡುಗಡೆಗೆ ಅವಕಾಶ ನೀಡಲು ನಿರ್ಧರಿಸಿತು. 

click me!