
ಜಾಮಾನಗರ(ಜೂ.15): ಬಿಪೊರ್ಜಾಯ್ ಚಂಡಮಾರುತ ಭಾರತೀಯರ ಖುಷಿಯನ್ನ ಕಸಿದುಕೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಕೆಲವೇ ಹೊತ್ತಲ್ಲಿ ಭಾರತದ ಗುಜರಾತ್ನ ಕಛ್ ಜಿಲ್ಲೆಯ ಜಖಾವು ಬಂದರಿಗೆ ಚಂಡಮಾರುತ ಅಪ್ಫಳಿಸಲಿದೆ. ಸುಮಾರು 100 ರಿಂದ 150 ಕಿಲೋಮೀಟರ್ ವೇಗದಲ್ಲಿ ಸ್ಲೈಕ್ಲೋನ್ ಅಪ್ಪಳಸಲಿದೆ ಎಂದು ವರದಿಗಳು ಹೇಳುತ್ತಿದೆ. ಈಗಾಗಲೇ ಗುಜರಾತ್ ತೀರ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಜಾಮಾನಗರ ಕಡಲ ತೀರ ಪ್ರದೇಶದಲ್ಲಿ ಭಾರಿ ಗಾತ್ರದ ಅಲೆಗಳು ಅಪ್ಪಳಿಸುತ್ತಿದೆ. ತೀರ ಪ್ರದೇಶಗಳನ್ನು ಸಮುದ್ರ ಆವರಿಸಿಕೊಂಡಿದೆ. ಹಲವು ಪ್ರದೇಶಗಳಿಗೆ ನೀರು ನುಗ್ಗಿ ಮುಳುಗಡೆಯಾಗಿದೆ.
1 ಲಕ್ಷಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಬಿಪೊರ್ಜಾಯ್ ಚಂಡಮಮಾರುತ ಕೆಟಗರಿ 3 ಎಂದು ವಿಭಾಗಿಸಲಾಗಿದೆ. ಕಾರಣ ಈ ಚಂಡಮಾರುತ ಭಾರತದ ತೀರ ಪ್ರದೇಶದ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ. ಸದ್ಯ 100 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಹಲೆವೆಡೆ ಭಾರಿ ಮಳೆಯಾಗುತ್ತಿದೆ.
ಗುಜರಾತ್ಗೆ ಅಪ್ಪಳಿಸಲಿದೆ ಭೀಕರ ಚಂಡಮಾರುತ; ಹಲವೆಡೆ ಆರೆಂಜ್ ಅಲರ್ಟ್: ಪ್ರಧಾನಿ ಮೋದಿಯಿಂದ ಉನ್ನತ ಮಟ್ಟದ ಸಭೆ
ಬಿಪೊರ್ಜಾಯ್ ಚಂಡಮಾರುತ ವಾಯವ್ಯ ಭಾಗದತ್ತ ಮುನ್ನುಗ್ಗುತ್ತಿದ್ದು, ಗಂಟೆಗೆ 150 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಇಂದು ಸಂಜೆ ಜಖಾವು ಬಂದರಿಗೆ ಅಪ್ಪಳಿಸಲಿದೆ’ ಎಂದು ಹವಾಮಾನ ಇಲಾಖೆ ಹೇಳಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮಹತ್ವದ ಸಭೆ ನಡೆಸಿದ್ದಾರೆ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಗುಜರಾತ್ ತೀರ ಪ್ರದೇಶ ಮಾತ್ರವಲ್ಲ, ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ತೀರ ಪ್ರದೇಶದಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ.
ಚಂಡಮಾರುತ ಅಬ್ಬರಿಸುತ್ತಿರುವ ಕಾರಣ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು, ‘ಎಲ್ಲ ಸೇನಾಪಡೆಗಳು ಸನ್ನದ್ಧ ಸ್ಥಿತಿಯಲ್ಲಿರಬೇಕು. ರಕ್ಷಣೆಗೆ ಧಾವಿಸಬೇಕು’ ಎಂದು ಮೂರೂ ರಕ್ಷಣಾ ಮುಖ್ಯಸ್ಥರಿಗೆ ಸೂಚಿಸಿದ್ದಾರೆ. ಇದರ ಬೆನ್ನನ್ನೇ ಸೇನೆ, ನೌಕಾಪಡೆ ಹಾಗೂ ಬಿಎಸ್ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಇದೇ ವೇಳೆ, ಗುಜರಾತ್ ಸರ್ಕಾರ ಸತ 3ನೇ ದಿನವೂ ಕರಾವಳಿಯಿಂದ 10 ಕಿ.ಮೀ. ಅಂತರದಲ್ಲಿನ ಅಪಾಯಕಾರಿ ವಲಯಗಳಲ್ಲಿ ರಕ್ಷಣಾ ಕಾರ್ಯ ಮುಂದುವರಿಸಿದೆ. ‘ಬುಧವಾರದವರೆಗೆ 50 ಸಾವಿರ ಜನರನ್ನು ಸುರಕ್ಷಿತ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಇನ್ನೂ 5 ಸಾವಿರ ಜನರನ್ನು ಗುರುವಾರ ಬೆಳಗ್ಗೆಯೊಳಗೆ ಸ್ಥಳಾಂತರಿಸುತ್ತೇವೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.
ಗುಜರಾತ್ಗೆ ಅಪ್ಪಳಿಸಲಿದೆ ಅತಿ ಭೀಕರ ಚಂಡಮಾರುತ: ಡೆಡ್ಲಿ ಸೈಕ್ಲೋನಾಗಿ ಪರಿವರ್ತನೆಯಾದ ಬಿಪೊರ್ಜೊಯ್
18 ಎನ್ಡಿಆರ್ಎಫ್ ತಂಡಗಳು, 12 ಎಸ್ಡಿಆರ್ಎಫ್, 115 ರಾಜ್ಯ ರಸ್ತೆ ಹಾಗೂ ನಿರ್ಮಾಣ ಕೇಂದ್ರದ ತಂಡಗಳು, 397 ವಿದ್ಯುತ್ ಇಲಾಖೆಯ ತಂಡಗಳನ್ನು ರಕ್ಷಣಾ ಕೆಲಸಕ್ಕೆ ನಿಯೋಜಿಸಲಾಗಿದೆ. ಈಗಾಗಲೇ ಹಲವು ಭಾಗಗಳಲ್ಲಿ ಬಿರುಗಾಳಿ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಅಲ್ಲಿ ವಿದ್ಯುತ್ ಇಲಾಖೆ ತಂಡಗಳು ಮರು ವಿದ್ಯುತ್ ಸಂಪರ್ಕಕ್ಕೆ ಶ್ರಮಿಸುತ್ತಿವೆ. ಮೊಬೈಲ್ ಹಾಗೂ ಸ್ಥಿರ ದೂರವಾಣಿ ಸಂಪರ್ಕ ವ್ಯತ್ಯಯ ಆಗುವ ಸಾಧ್ಯತೆ ಇದೆ. ಹೀಗಾಗಿ ಸ್ಯಾಟಲೈಟ್ ಫೋನ್ಗಳನ್ನು ರಕ್ಷಣಾ ತಂಡಗಳಿಗೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ