
ನವದೆಹಲಿ(ಜ. 11) ಕೊರೋನಾ ನಂತರ ಹಕ್ಕಿಜ್ವರ ಕಾಡುತ್ತಿದೆ. ಈಗ ನವದೆಹಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮವೊಂದಕ್ಕೆ ಮುಂದಾಗಿದೆ. ದೆಹಲಿಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ನಂತರದಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆದೇಶ ಒಂದನ್ನು ಹೊರಡಿಸಿದ್ದಾರೆ.
ದೆಹಲಿಗೆ ಹೊರಗಿನಿಂದ ಸಂಸ್ಕರಿಸಿದ ಮಾಂಸ ಬರುವುದಕ್ಕೆ ತಡೆ ಹೇರಲಾಗಿದೆ. ಹಕ್ಕಿ ಜ್ವರಕ್ಕೆ ಸಂಬಂಧಿಸಿ ಸಾರ್ವಜನಿಕರು ಗೊಂದಲಕ್ಕೆ ಸಿಲುಕಬಾರದು. ಸರ್ಕಾರ ಸಕಲ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದು ಜನರ ಹಿತ ಕಾಪಾಡಲು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.
ಕೊರೋನಾ ಆತಂಕ ಕಡಿಮೆಯಾಯಿತು ಎಂದಾಗಲೆ ಹಕ್ಕಿ ಜ್ವರದ ಭೀತಿ ಕಾಣಿಸಿಕೊಂಡಿದೆ. ದೇಶದ ಎಂಟು ರಾಜ್ಯಗಳಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶ, ಕೇರಳ, ರಾಜಸ್ಥಾನ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಹರಿಯಾಣ, ಗುಜರಾತ್ ನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿತ್ತು. ಇದೀಗ ದೆಹಲಿಯಲ್ಲಿಯೂ ಪ್ರಕರಣ ವರದಿಯಾದ ನಂತರ ಸರ್ಕಾರ ಸಕಲ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ