‘ಕೊರೋನಾ ಇನ್ನಿಲ್ಲ, ಮಾಸ್ಕ್‌ ಏಕೆ ಹಾಕಬೇಕು?’ ಎಂದಿದ್ದ ಶಾಸಕ ಕೋವಿಡ್‌ಗೆ ಬಲಿ!

Published : May 01, 2021, 08:19 AM ISTUpdated : May 01, 2021, 09:19 AM IST
‘ಕೊರೋನಾ ಇನ್ನಿಲ್ಲ, ಮಾಸ್ಕ್‌ ಏಕೆ ಹಾಕಬೇಕು?’ ಎಂದಿದ್ದ ಶಾಸಕ ಕೋವಿಡ್‌ಗೆ ಬಲಿ!

ಸಾರಾಂಶ

ಇದು ಕೊರೋನಾ ನಿಯಮ ಪಾಲಿಸದೇ ಇದ್ದವರಿಗೆ ಪಾಠ| ಮಾಸ್ಕ್‌ ಸೇರಿ ಮಾರ್ಗಸೂಚಿಗಳ ಬಗ್ಗೆ ಉಡಾಫೆಯೇ ಬೇಡ| ಸ್ವಲ್ಪ ಎಚ್ಚರ ತಪ್ಪಿದರೂ ಭಾರೀ ಬೆಲೆ ತೆರಬೇಕಾಗುತ್ತೆ: ತಜ್ಞರು

ಲಖನೌ(ಮೇ.01): ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿಯ ಹಾಲಿ ಶಾಸಕರೊಬ್ಬರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಬರೇಲಿಯ ನವಾಬ್‌ಗಂಜ್‌ ಕ್ಷೇತ್ರದ ಶಾಸಕರಾದ 64 ವರ್ಷದ ಕೇಸರ್‌ ಸಿಂಗ್‌ ಗಂಗ್ವಾರ್‌ ಅವರು ಏ.18ರಂದು ಸೋಂಕಿಗೆ ತುತ್ತಾಗಿದ್ದರು. ಬರೇಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅವರು ಅಸುನೀಗಿದ್ದಾರೆ.

ಇತ್ತೀಚೆಗಷ್ಟೇ ಗಂಗ್ವಾರ್‌ ಅವರು ಮಾಸ್ಕ್‌ ಇಲ್ಲದೆ ವಿಧಾನಸಭೆ ಅಧಿವೇಶನಕ್ಕೆ ಬಂದಿದ್ದರು. ಈ ಬಗ್ಗೆ ಪ್ರಶ್ನಿಸಿದ ಮಾಧ್ಯಮ ಪ್ರತಿನಿಧಿಯೊಬ್ಬರಿಗೆ, ‘ಕೊರೋನಾ ವೈರಸ್‌ ಅವಸಾನವಾಗಿದೆ. ಮಾಸ್ಕ್‌ ಏಕೆ ಹಾಕಬೇಕು? ನಾನು ಮಾಸ್ಕ್‌ ಎಲ್ಲಿಟ್ಟಿದ್ದೇನೆ ಎಂದೇ ಗೊತ್ತಿಲ್ಲ’ ಎಂದು ಉಡಾಫೆಯಾಗಿ ಮಾತನಾಡಿದ್ದರು ಎಂಬ ವಿಡಿಯೋ ಈಗ ವೈರಲ್‌ ಆಗಿದೆ. ಆದರೆ ದುರಾದೃಷ್ಟಾವಶಾತ್‌ ಗಂಗ್ವಾರ್‌ ಅವರು ವೈರಸ್‌ಗೆ ಬಲಿಯಾಗಿದ್ದಾರೆ.

"

ದೇಶಾದ್ಯಂತ ಹಬ್ಬಿರುವ 2ನೇ ಅಲೆಯ ಸೋಂಕು ಭೀಕರವಾಗಿದ್ದು, ಜನ ಸಾಮಾನ್ಯರು ಮಾಸ್ಕ್‌, ಸಾಮಾಜಿಕ ಅಂತರ ಸೇರಿದಂತೆ ಇನ್ನಿತರ ಕೊರೋನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮಹಾಮಾರಿಯಿಂದ ತಮ್ಮನ್ನು ರಕ್ಷಿಸಿಕೊಳ್ಳಬೇಕು. ಇಲ್ಲದಿದ್ದರೆ ಸಂಕಷ್ಟಕಟ್ಟಿಟ್ಟಬುತ್ತಿ ಎಂದು ತಜ್ಞರು ಎಚ್ಚರಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಆರೋಪ ಸಾಬೀತು : ಪಾಕ್‌ ಐಎಸ್‌ಐ ಮಾಜಿ ಮುಖ್ಯಸ್ಥ ಹಮೀದ್‌ಗೆ 14 ವರ್ಷ ಜೈಲು