ಸಂವಿಧಾನ ತಿದ್ದುಪಡಿಗೆ ಬಿಜೆಪಿಗೆ ಪ್ರಚಂಡ ಬಹುಮತ ಬೇಕು: ಜ್ಯೋತಿ ಮಿರ್ಧಾ

Published : Apr 03, 2024, 05:49 AM IST
ಸಂವಿಧಾನ ತಿದ್ದುಪಡಿಗೆ ಬಿಜೆಪಿಗೆ ಪ್ರಚಂಡ ಬಹುಮತ ಬೇಕು: ಜ್ಯೋತಿ ಮಿರ್ಧಾ

ಸಾರಾಂಶ

ಕಾಂಗ್ರೆಸ್‌ ತಮ್ಮಿಷ್ಟದಂತೆ ಬದಲಾಯಿಸಿರುವ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಈ ಬಾರಿ ಬಿಜೆಪಿ 400 ಸ್ಥಾನ ಗೆಲ್ಲುವುದು ಅಗತ್ಯ ಎಂಬ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಭಾರೀ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ಮತ್ತೋರ್ವ ಲೋಕಸಭಾ ಅಭ್ಯರ್ಥಿ ಜ್ಯೋತಿ ಮಿರ್ಧಾ ಇಂಥದ್ದೇ ಅರ್ಥದ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದಾರೆ.   

ನವದೆಹಲಿ (ಏ.03): ಕಾಂಗ್ರೆಸ್‌ ತಮ್ಮಿಷ್ಟದಂತೆ ಬದಲಾಯಿಸಿರುವ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಈ ಬಾರಿ ಬಿಜೆಪಿ 400 ಸ್ಥಾನ ಗೆಲ್ಲುವುದು ಅಗತ್ಯ ಎಂಬ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಭಾರೀ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ಮತ್ತೋರ್ವ ಲೋಕಸಭಾ ಅಭ್ಯರ್ಥಿ ಜ್ಯೋತಿ ಮಿರ್ಧಾ ಇಂಥದ್ದೇ ಅರ್ಥದ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದಾರೆ. ಮಿರ್ಧಾ ಹೇಳಿಕೆ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್‌, ಬಿಜೆಪಿಯ ಉದ್ದೇಶವೇ ಸಂವಿಧಾನ ಬದಲಾವಣೆ ಎಂದಿದೆ.

ರಾಜಸ್ಥಾನದ ನಾಗೋರ್‌ನ ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ದಾ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ,‘ಮುಂದೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿದೆ. ಈ ನಿರ್ಧಾರ ತೆಗೆದುಕೊಳ್ಳಲು ಸಂವಿಧಾನಕ್ಕೆ ತಿದ್ದುಪಡಿ ತರಬೇಕಿದೆ. ತಿದ್ದುಪಡಿ ಮಾಡಬೇಕಾದರೆ ಉಭಯ ಸದನದಲ್ಲಿ ಪ್ರಚಂಡ ಬಹುಮತ ಬೇಕಾಗಿದೆ. ಪ್ರಸ್ತುತ ಎನ್‌ಡಿಎಗೆ ಲೋಕಸಭೆಯಲ್ಲಿ ಮಾತ್ರ ಬಹುಮತವಿದ್ದು, ರಾಜ್ಯಸಭೆಯಲ್ಲಿಯೂ ಬಹುಮತ ಬೇಕಾಗಿದೆ’ ಎಂದು ಹೇಳಿದ್ದಾರೆ.

ದಿಂಗಾಲೇಶ್ವರ ಶ್ರೀ ವಿಚಾರವಾಗಿ ಯಾರೊಂದಿಗೂ ಮಾತಾಡಿಲ್ಲ: ಪ್ರಲ್ಹಾದ್‌ ಜೋಶಿ

ಈ ವಿಡಿಯೋ ತುಣಕನ್ನು ಜಾಲತಾಣದಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ‘ಈ ಹಿಂದೆ ಸಂಸದ ಅನಂತಕುಮಾರ್‌ ಹೆಗಡೆ ಹೇಳಿಕೆ ನೀಡಿದಾಗ, ಇದೇ ಬಿಜೆಪಿ ಅವರಿಗೆ ಟಿಕೆಟ್ ನಿರಾಕರಿಸಿತು. ಈಗ ಮತ್ತೋರ್ವ ಬಿಜೆಪಿ ಅಭ್ಯರ್ಥಿ ಇದೇ ಹೇಳಿಕೆ ನೀಡಿದ್ದಾರೆ. ಇನ್ನೆಷ್ಟು ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್‌ ನಿರಾಕರಿಸಲಿದೆ’ ಎಂದು ಪ್ರಶ್ನಿಸಿದರು. ಇನ್ನು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌, ‘ಇದೆಲ್ಲಾ ಬಿಜೆಪಿಯ ‘ಮಹಾಸೂತ್ರಧಾರ (ಪ್ರಧಾನಿ ಮೋದಿ)’ ಅವರಿಂದ ಸಂಘಟಿತವಾಗಿದ್ದು, ಇದು ಬಿಜೆಪಿಯ ಉದ್ದೇಶಪೂರ್ವಕ ತಂತ್ರ’ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬ್ಯಾಗಲ್ಲಿ ಹೃದಯ ಇಟ್ಕೊಂಡು ಓಡಾಟ: ನೈಸರ್ಗಿಕ ಹೃದಯ ಇಲ್ಲದೇ ಬದುಕುಳಿದಿರುವ ಜಗತ್ತಿನ ಏಕೈಕ ಮಹಿಳೆ ಈಕೆ
ಕೇವಲ 2 ನಿಮಿಷ ಮಗಳ ನೋಡಲು 11ಗಂಟೆಗೆ ಸ್ಟೇಶನ್‌ಗೆ ಬಂದ ತಂದೆ, ಭಾವುಕ ಕ್ಷಣದ ವಿಡಿಯೋ