
ಕೋಲ್ಕತ್ತಾ(ಫೆ.01): ಪ್ರಧಾನಿ ನರೇಂದ್ರ ಮೋದಿ ಅವರು ‘ಜನಕಲ್ಯಾಣ’ದಲ್ಲಿ ನಿರತರಾಗಿದ್ದರೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಬಂಧುವಿನ ಕಲ್ಯಾಣದಲ್ಲಿ ನಿರತರಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದ್ದಾರೆ.
ಭಾನುವಾರ ಹೌರಾ ಜಿಲ್ಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಚುನಾವಣಾ ರಾರಯಲಿಯಲ್ಲಿ ಮಾತನಾಡಿದ ಶಾ, ‘ತೃಣಮೂಲ ಕಾಂಗ್ರೆಸ್ ಅಜೆಂಡಾ ಎಂದರೆ ಅವರ ಸೋದರ ಸಂಬಂಧಿ ಅಭಿಷೇಕ್ ಬ್ಯಾನರ್ಜಿಯನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡುವುದು’ ಎಂದು ವ್ಯಂಗ್ಯವಾಡಿದರು.
‘ಈ ಮೊದಲು ಮಾ, ಮಾಟಿ, ಮಾನುಷ್ (ಮಾತೆ, ಭೂಮಿ, ಜನ) ಎನ್ನುತ್ತಿದ್ದವರು ಈಗ ‘ಸರ್ವಾಧಿಕಾರ, ಸುಲಿಗೆ ಹಾಗೂ ಓಲೈಕೆ’ ಎನ್ನುತ್ತಿದ್ದಾರೆ’ ಎಂದೂ ಮಮತಾರನ್ನು ಟೀಕಿಸಿದರು.
ಭಾನುವಾರವಷ್ಟೇ ಬಿಜೆಪಿ ಸೇರಿದ ಟಿಎಂಸಿ ಮಾಜಿ ಮುಖಂಡ ರಾಜೀಬ್ ಬ್ಯಾನರ್ಜಿ ಹಾಗೂ ಇತರರು ರಾರಯಲಿಯಲ್ಲಿ ಹಾಜರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ