
ನವದೆಹಲಿ(ಮೇ.31): ಜೂ.10ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ ಕೇಂದ್ರ ಸಚಿವರು ಸೇರಿದಂತೆ ಹಲವು ನಾಯಕರನ್ನು ಪಟ್ಟಿಯಿಂದ ಕೈಬಿಟ್ಟಿದೆ.
ಪ್ರಸ್ತುತ ಜಾರ್ಖಂಡ್ನಿಂದ ಬಿಜೆಪಿ ಪ್ರತಿನಿಧಿಸುತ್ತಿರುವ ಸಂಸದ, ಕೇಂದ್ರ ಅಲ್ಪಸಂಖ್ಯಾತ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಅಲ್ಲದೇ ನಾಯಕರಾದ ಒ.ಪಿ.ಮಾಥುರ್, ಬಿಜೆಪಿಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಗೌತಮ್ ಮತ್ತು ವಿನಯ್ ಸಹಸ್ರಬುದ್ಧೆ, ರಾಜ್ಯಸಭೆಯ ಬಿಜೆಪಿಯ ಮುಖ್ಯ ಸಚೇತಕ ಮತ್ತು ಮಾಜಿ ಕೇಂದ್ರ ಸಚಿವ ಶಿವ್ ಪ್ರತಾಪ್ ಶುಕ್ಲಾ ಅವರಿಗೂ ಸಹ ಟಿಕೆಟ್ ನೀಡಲಾಗಿಲ್ಲ.
11 ಸ್ಥಾನಗಳು ಖಾಲಿ ಇರುವ ಉತ್ತರ ಪ್ರದೇಶದಲ್ಲಿ 6 ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ. ಯೋಗಿ ಆದಿತ್ಯನಾಥ ಅವರಿಗಾಗಿ ತನ್ನ ಗೋರಖ್ಪುರ ಸ್ಥಾನ ಬಿಟ್ಟುಕೊಟ್ಟರಾಧಾ ಮೋಹನ್ ಅಗರವಾಲ್ ಅವರಿಗೆ ರಾಜ್ಯಸಭಾ ಟಿಕೆಟ್ ನೀಡಲಾಗಿದೆ.
ಸಚಿವ ಸಂಪುಟ ಪುನಾರಚನೆ?
ಕೇಂದ್ರ ಮಂತ್ರಿಮಂಡಲದಲ್ಲಿ ಹಲವು ರಾಜ್ಯಸಭಾ ಸಂಸದರಿಗೆ ಸ್ಥಾನ ನೀಡಲಾಗಿದೆ. ಮುಂದಿನ ಚುನಾವಣೆಯಲ್ಲಿ ಹಲವು ಸಚಿವರಿಗೆ ರಾಜ್ಯಸಭಾ ಟಿಕೆಟ್ ನೀಡದಿರುವ ಕಾರಣ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. ಯಾವ ಹೊಸ ಸಂಸದರಿಗೆ ಸಚಿವ ಸ್ಥಾನ ಲಭ್ಯವಾಗಬಹುದು ಎಂಬ ಕುತೂಹಲ ಮನೆಮಾಡಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ