"ರಾಮನ ಅಸ್ತಿತ್ವವೇ ಇಲ್ಲ ಎಂದಿದ್ದ ಕಾಂಗ್ರೆಸ್", ಇದೀಗ ಭಕ್ತರಾಗಿದ್ದು ಹೇಗೆ? ಬಿಜೆಪಿ ತಿರುಗೇಟು!

Published : Jul 30, 2020, 02:56 PM IST
"ರಾಮನ ಅಸ್ತಿತ್ವವೇ ಇಲ್ಲ ಎಂದಿದ್ದ ಕಾಂಗ್ರೆಸ್", ಇದೀಗ ಭಕ್ತರಾಗಿದ್ದು ಹೇಗೆ? ಬಿಜೆಪಿ ತಿರುಗೇಟು!

ಸಾರಾಂಶ

ರಾಮ ಮಂದಿರ ನಿರ್ಮಾಣಕ್ಕೆ ಕ್ಷಣಗಣನೆ ಆರಂಭವಾಗಿದೆ. ದೇಶಾದ್ಯಂತ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ನೇರವೇರಿಸಲಿದ್ದಾರೆ. ಇದೀಗ ಭೂಮಿ ಪೂಜೆ ಕಾರ್ಯಕ್ರಮ ರಾಜಕೀಯ ಗುದ್ದಾಟಕ್ಕೆ ಕಾರಣವಾಗಿದೆ. 

ನವದೆಹಲಿ(ಜು.30):   ಹಲವು ದಶಕಗಳ ಕಾಲ ರಾಜಕೀಯ ಹಾಗೂ ಚುನಾವಣೆಯ ಪ್ರಮಖ ವಸ್ತುವಾಗಿದ್ದ ರಾಮಮಂದಿರ ವಿಚಾರ ಇನ್ನೂ ಮುಂದುವರಿಯುತ್ತಲೇ ಇದೆ. ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ರಾಮ ಜನ್ಮ ಭೂಮಿ ಸಮಿತಿ ಮಂದಿರ ನಿರ್ಮಾಣ ಆರಂಭಿಸಿದೆ. ಆಗಸ್ಟ್ 5 ರಂದು ನಡೆಯಲಿರುವ ಭೂಮಿ ಪೂಜಯೊಂದಿಗೆ ಮಂದಿರ ನಿರ್ಮಾಣ ಆರಂಭಗೊಳ್ಳಲಿದೆ. ಇದೀಗ ಕಾಂಗ್ರೆಸ್, ರಾಮ ಮಂದಿರ ಭೂಮಿ ಪೂಜೆಗೆ ಬಿಜೆಪಿ ಸರ್ಕಾರ ತಮಗೆ ಆಹ್ವಾನ ನೀಡಿಲ್ಲ ಎಂದು ಆರೋಪಿಸಿದೆ. ಇದಕ್ಕೆ ಬಿಜೆಪಿ ರಾಷ್ಟ್ರೀಯ ವಕ್ತಾರ ಜಿಎಲ್‌ವಿ ನರಸಿಂಹ ರಾವ್ ತಿರುಗೇಟು ನೀಡಿದ್ದಾರೆ. 

ರಾಮ ಜನ್ಮಭೂಮಿ ಮಂದಿರದ ಅರ್ಚಕ, 16 ಭದ್ರತಾ ಸಿಬ್ಬಂದಿಗೆ ಕೊರೋನಾ!

ಇದೇ ಕಾಂಗ್ರೆಸ್ ಪಕ್ಷ ಶ್ರೀರಾಮನ ಅಸ್ಥಿತ್ವವೇ ಇಲ್ಲ ಎಂದಿತ್ತು. ತಮ್ಮ ಅಧಿಕಾರವದಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬೇಕಾದ ಯಾವ ಪ್ರಯತ್ನಗಳನ್ನು ಮಾಡಲಿಲ್ಲ. ಬದಲಾಗಿ ಮಂದಿರ ನಿರ್ಮಾಣ ಮಾಡದಂತೆ ತಡೆಯಲಾಯಿತು. ಧ್ವಂಸಗೊಳಿಸಿದ ಬಾಬ್ರಿ ಮಸೀದಿ ಮರುಸ್ಥಾಪಿಸುವ  ಪ್ರಯತ್ನಕ್ಕೂ ಕಾಂಗ್ರೆಸ್ ಒಲವು ತೋರಿತ್ತು. ಇದೀಗ ಇದೇ ಕಾಂಗ್ರೆಸ್ ರಾಮ ಮಂದಿರ ಭೂಮಿ ಪೂಜೆಗೆ ಆಮಂತ್ರಿಸಿಲ್ಲ ಎಂದು ಆರೋಪ ಮಾಡುತ್ತಿದೆ. ಎಂದು ನರಸಿಂಹ ರಾವ್ ಹೇಳಿದ್ದಾರೆ.

ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭದ ದಿನ ಮತ್ತೆ ಬರುತ್ತೇನೆ ಎಂದಿದ್ದ ಮೋದಿ!.

ರಾಮ ಮಂದಿರ ನಿರ್ಮಾಣ ಈ ಹಂತಕ್ಕೆ ತಲುಪಲು ಕಾಂಗ್ರೆಸ್ ಮುಖ್ಯ ಕಾರಣ. ಕಾಂಗ್ರೆಸ್‌ಗೂ ಆಮಂತ್ರ ನೀಡಬೇಕು. ಆದರೆ ಬಿಜೆಪಿ ತಾನೇ ಮಾಡಿದೆ ಎಂದು ಬೀಗುತ್ತಿದೆ. ಬಿಜೆಪಿ ನಡೆ ಸರಿಯಲ್ಲ ಎಂದು ಕಾಂಗ್ರೆಸ್ ಆರೋಪಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್