ಕೇರಳ ಬಿಜೆಪಿಯಿಂದಲೂ ಕೆಲವು ಉಚಿತ ಕೊಡುಗೆಗಳ ಭರವಸೆ; ಪ್ರಣಾಳಿಕೆಯಲ್ಲೇನಿದೆ?

Kannadaprabha News   | Kannada Prabha
Published : Apr 01, 2026, 06:16 AM IST
BJP Kerala Manifesto 2026 Rs3000 Pension Free LPG Rs 2500 Monthly Welfare Cards

ಸಾರಾಂಶ

ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ವಾರ್ಷಿಕ ಎರಡು ಉಚಿತ ಎಲ್‌ಪಿಜಿ, ಮಾಸಿಕ ₹2500 ನೆರವು, ಹಿರಿಯ ನಾಗರಿಕರಿಗೆ ₹3000 ಪಿಂಚಣಿ, ಮತ್ತು ರಾಜ್ಯದಲ್ಲಿ ಏಮ್ಸ್‌ ಸ್ಥಾಪನೆಯಂತಹ ಪ್ರಮುಖ ಭರವಸೆಗಳನ್ನು ನೀಡಲಾಗಿದೆ. 

- ಕೇರಳ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ತಿರುವನಂತಪುರಂ (ಏ.1): ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಮಂಗಳವಾರ ಇಲ್ಲಿ ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಬಿನ್‌ ನವೀನ್, ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್‌ ಚಂದ್ರಶೇಖರ್‌ ಹಾಗೂ ಪಕ್ಷದ ಹಿರಿಯ ನಾಯಕರ ಸಮಕ್ಷಮದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು.ಪ್ರಮುಖ ಅಂಶಗಳು: ಅರ್ಹ ಕುಟುಂಬಳಿಗೆ ವಾರ್ಷಿಕ ಎರಡು ಉಚಿತ ಎಲ್‌ಪಿಜಿ, ಕುಟುಂಬಗಳಿಗೆ ದಿನಸಿ ಮತ್ತು ಔಷಧ ಖರೀದಿಗೆ ಮಾಸಿಕ 2500 ರು. ಮೊತ್ತದ ರೀಚಾರ್ಜ್‌ ಕಾರ್ಡ್‌, ರಾಜ್ಯದಲ್ಲಿ ಏಮ್ಸ್‌ ಸ್ಥಾಪನೆ, ಬಡ ಮಹಿಳೆಯರು, ವಿಧವೆಯರು, 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮಾಸಿಕ 3000 ರು.ಗಳ ಪಿಂಚಣಿ, ಸೇರಿದಂತೆ ಹಲವು ಕಲ್ಯಾಣ ಕಾರ್ಯಕ್ರಮಗಳ ಜಾರಿಯ ಬಗ್ಗೆ ಪಕ್ಷ ಭರವಸೆ ನೀಡಿದೆ.

ಬಿಜೆಪಿ ಪ್ರಣಾಳಿಕೆಯಲ್ಲೇನಿದೆ?

  • - ದಿನಸಿ, ಔಷಧ ಖರೀದಿಗೆ ಮಾಸಿಕ ₹2500 ರು. ನೆರವು
  • - ಓಣಂ, ಕ್ರಿಸ್ಮಸ್‌ ವೇಳೆ 2 ಉಚಿತ ಗ್ಯಾಸ್ ಸಿಲಿಂಡರ್‌
  • - ತಿರುವನಂತಪುರಂ- ಕಣ್ಣೂರು ಸಂಪರ್ಕಿಸುವ ಹೈಸ್ಪೀಡ್‌ ರೈಲು
  • - ಪ್ರತಿ ಮನೆಗೆ ಮಾಸಿಕ 20000 ಲೀಟರ್‌ ಉಚಿತ ನೀರು
  • - ಅರ್ಹ ಮಹಿಳೆ, ವಿಧವೆ, 70 ವರ್ಷ ಮೇಲ್ಪಟ್ಟವರಿಗೆ ₹3000 ಪಿಂಚಣಿ
  • - ಕೇರಳ ನಾಗರಿಕರ ಅನುಕೂಲಕ್ಕೆ ಏಮ್ಸ್‌ ಸ್ಥಾಪನೆ
  • - ಶಬರಿಮಲೆ, ಗುರುವಾಯೂರು ಸೇರಿ ಎಲ್ಲಾ ದೇಗುಲಗಳ ಅಭಿವೃದ್ಧಿ
  • - ದೇಗುಲ ಮಂಡಳಿಗಳಲ್ಲಿ ಇನ್ನು ಮುಂದೆ ಭಕ್ತರಿಗೂ ಅವಕಾಶ
  • - ಶಬರಿಮಲೆ ಚಿನ್ನ ಕಳ್ಳತನ ಬಗ್ಗೆ ಕಾಲಮಿತಿಯಲ್ಲಿ ತನಿಖೆ ಪೂರ್ಣ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನ್ಯಾಯಾಂಗದ ಮೇಲಿನ ದ್ವೇಷಕ್ಕೆ ಕೋರ್ಟ್‌ಗೆ 1100 ಹುಸಿ ಬೆದರಿಕೆ! ಬಂಧಿತ ಮೈಸೂರಿನ ಶ್ರೀನಿವಾಸ ಕೃತ್ಯದ ಬಗ್ಗೆ ದಿಲ್ಲಿ ಪೊಲೀಸರಿಂದ ಶಾಕಿಂಗ್ ಮಾಹಿತಿ
ಪಿಂಕ್ ಫೋಟೋಶೂಟ್‌ನಲ್ಲಿ ಭಾಗಿಯಾದ ಆನೆ ನಾಲ್ಕೇ ತಿಂಗಳಿಗೆ ನಿಗೂಢ ಸಾವು: ಬಣ್ಣ ಹಾಕಿದ್ದಕ್ಕೆ ಪ್ರಾಣಿಪ್ರಿಯರ ತೀವ್ರ ಆಕ್ರೋಶ