ಮಹಾ ಸರ್ಕಾರ ಸುತ್ತಿಕೊಂಡ ಸಾರಿಗೆ ನೌಕರನ ಆತ್ಮಹತ್ಯೆ ಪ್ರಕರಣ; ತಕ್ಷಣ ವೇತನ ನೀಡಲು ಫಡ್ನವಿಸ್ ಆಗ್ರಹ!

Published : Aug 30, 2021, 07:59 PM IST
ಮಹಾ ಸರ್ಕಾರ ಸುತ್ತಿಕೊಂಡ ಸಾರಿಗೆ ನೌಕರನ ಆತ್ಮಹತ್ಯೆ ಪ್ರಕರಣ; ತಕ್ಷಣ ವೇತನ ನೀಡಲು ಫಡ್ನವಿಸ್ ಆಗ್ರಹ!

ಸಾರಾಂಶ

ಸಂಬಳ ಸಿಗದೆ ಆರ್ಥಕ ಸಂಕಷ್ಟಕ್ಕೆ  ಸಿಲುಕಿ ಮಹಾರಾಷ್ಟ್ರ ಸಾರಿಗೆ ನೌಕರ ಆತ್ಮಹತ್ಯೆ ಉದ್ಧವ್ ಠಾಕ್ರೆ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಪ್ರತಿಭಟನೆ ಕಳೆದ 9 ತಿಂಗಳಲ್ಲಿ ಮೂರನೇ ಆತ್ಮಹತ್ಯೆ ಪ್ರಕರಣ

ಮುಂಬೈ(ಆ.30): ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸಾರಿಗೆ ನೌಕರನ ಆತ್ಮಹತ್ಯೆ ಪ್ರಕರಣ. ಸಂಬಳ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಚಾಲಕ ಕಮಲೇಶ್ ಬಿಕಾನ್ ಬಿಡ್ಸೆ ಆತ್ಮಹತ್ಯೆಗೆ ಶರಣಾಗಿದ್ದರು. ಹಲವು ನೌಕರರು ಸಂಬಳ ಸಿಗದೆ ಪರದಾಡುತ್ತಿದ್ದಾರೆ. ಈ ಸಮಸ್ಯೆಯನ್ನು ಶೀಘ್ರವೇ ಇತ್ಯರ್ಥಗೊಳಿಸಲು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಮಹಾರಾಷ್ಟ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

MSRTC ಬಸ್ ಕಂಡಕ್ಟರ್ ಆತ್ಮಹತ್ಯೆ, ಸಂಬಳ ನೀಡದ ಉದ್ಧವ್ ಸರ್ಕಾರ ವಿರುದ್ಧ ಆಕ್ರೋಶ!

ಚಾಲಕ ಕಮಲೇಶ್ ತಮ್ಮ ಮನೆಯಲ್ಲಿ ಶುಕ್ರವಾರ(ಆ.27)ರಂದು ನೇಣಿಗೆ ಶರಣಾಗಿದ್ದರು. ಡೆತ್‌ನೋಟ್‌ನಲ್ಲಿ ಕಡಿಮೆ ಸಂಬಳ, ಸರಿಯಾಗಿ ವೇತನ ಕೈಗೆ ಸಿಗದಿರುವುದೇ ಆತ್ಮಹತ್ಯೆಗೆ ಕಾರಣ ಎಂದು ಉಲ್ಲೇಖಿಸಿದ್ದಾರೆ. ಹೀಗಾಗಿ ಈ ಆತ್ಮಹತ್ಯೆ ಪ್ರಕರಣ ನೇರವಾಗಿ ಉದ್ಧವ್ ಠಾಕ್ರೆ ಸರ್ಕಾರವನ್ನು ಸುತ್ತಿಕೊಂಡಿದೆ. ಇತ್ತ ಸಾರಿಗೆ ನೌಕರರು ಇಂದು(ಆ.30) ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

 

ಮಹಾರಾಷ್ಟ್ರ ಸರ್ಕಾರದ ನಿರ್ಲಕ್ಷ್ಯದಿಂದ ಸಾರಿಗೆ ನೌಕರರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಿಯಾದ ಸಮಯಕ್ಕೆ ಸಂಬಂಳ ಸಿಗದೆ ನೌಕರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕು.  ತಕ್ಷಣವೇ ನೌಕರರಿಗೆ ಸಂಬಳ ನೀಡಬೇಕು. ಮುಂದಿನ ದಿನಗಳಲ್ಲಿ ವೇತನ ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಬೆಜಿಪಿ ನಾಯಕ ದೇವೇಂದ್ರ ಫಡ್ನವಿಸ್ ಆಗ್ರಹಿಸಿದ್ದಾರೆ.

9 ಲಕ್ಷ ರು. ರಕ್ಷಿಸಲು 9 ತಾಸು ಬಸ್‌ ಮೇಲೆ ಕುಳಿತರು!

ಕೊರೋನಾ ವೈರಸ್ ಕಾರಣ ದೇಶದ ಹಲವು ಸರ್ಕಾರಿ ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದೆ. ಹಲವು ರಾಜ್ಯದಲ್ಲಿ ನೌಕರರ ಆತ್ಮಹತ್ಯಾ ಪ್ರಕರಣಗಳು ನಡೆದಿದೆ. ಅಷ್ಟೇ ಬೇಗದಲ್ಲಿ ಇತರರ ರಾಜ್ಯಗಳು ಹೆಚ್ಚಿನ ಅನುದಾನ ನೀಡಿ ಸಮಸ್ಯೆ ಸರಿಪಡಿಸುವ ಪ್ರಯತ್ನ ಮಾಡಿದೆ. ಆದರೆ ಮಹಾರಾಷ್ಟ್ರ ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ.

ಕಳೆದ 9 ತಿಂಗಳಲ್ಲಿ ಮಹಾರಾಷ್ಟ್ರದ ಮೂವರು ಸಾರಿಗೆ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದುವರೆಗೆ ಎಚ್ಚೆತ್ತುಕೊಳ್ಳದ ಉದ್ಧವ್ ಠಾಕ್ರೆ ಸರ್ಕಾರವನ್ನು ದೇವೇಂದ್ರ ಫಡ್ನವಿಸ್ ಪ್ರಶ್ನಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?