
ಕೋಲ್ಕತಾ(ಜೂ.11): ಪಶ್ಚಿಮ ಬಂಗಾಳ ಚುನಾವಣೆ ಸೋಲು ಬಿಜೆಪಿ ಇನ್ನಿಲ್ಲದ ತಲೆನೋವು ತಂದಿದೆ. ಗೆಲುವಿನ ಭರವಸೆಯೊಂದಿಗೆ ಬಿಜೆಪಿ ಸೇರಿಕೊಂಡಿದ್ದ ಹಲವು ನಾಯಕರು ಇದೀಗ ಮತ್ತೆ ಟಿಎಂಸಿ ಸೇರಿಕೊಳ್ಳುವ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಪ್ರಭಾವಿ ನಾಯಕ ಮುಕುಲ್ ರಾಯ್ ಮತ್ತೆ ತೃಣಮೂಲಕ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ದಟ್ಟವಾಗುತ್ತಿದೆ. ಕಾರಣ ಟಿಎಂಸಿ ನಾಯಕಿ, ಸಿಎಂ ಮಮತಾ ಬ್ಯಾನರ್ಜಿ ಭೇಟಿಯಾಗಲು ರಾಯ್, ಟಿಎಂಸಿ ಭವನಕ್ಕೆ ಹಾಜರಾಗಿದ್ದಾರೆ.
ಬಿಜೆಪಿಯಿಂದ ಮತ್ತೆ ಮೂಲಪಕ್ಷಕ್ಕೆ ಘರ್ವಾಪಸಿ : ಮೋದಿ ದೂರವಾಣಿ ಕರೆ
ಟಿಎಂಸಿ ಭವನದಲ್ಲಿ ಪಕ್ಷದ ಮುಖಂಡರ ಜೊತೆ ಸಭೆ ನಡೆಸುತ್ತಿರುವ ಮಮತಾ ಬ್ಯಾನರ್ಜಿ ಶೀಘ್ರದಲ್ಲೇ ಮುಕುಲ್ ರಾಯ್ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಬಳಿಕ ಮಹತ್ವದ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.
ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಭರ್ಜರಿ ಗೆಲುವು ಹಾಗೂ ವಿರೋಧ ಪಕ್ಷದ ಅಧ್ಯಕ್ಷ ಸ್ಥಾನವನ್ನು ಟಿಎಂಸಿಯಿಂದ ಬಿಜೆಪಿಗೆ ಆಗಮಿಸಿದ ಸುವೇಂಧು ಅಧಿಕಾರಿಗೆ ನೀಡಲಾಗಿದೆ. ಇದರಿಂದ ಅಸಮಾಧಾನಗೊಂಡ ಮುಕುಲ್ ರಾಯ್ ಮತ್ತೆ ಟಿಎಂಸಿಗೆ ವಾಪಸ್ ಮರಳಲು ಇಚ್ಚಿಸಿದ್ದರು.
ದೀದಿ ಸೋದರಳಿಯಗೆ ಟಿಎಂಸಿ ಪ್ರಧಾನ ಕಾರ್ಯದರ್ಶಿ ಪಟ್ಟ!.
ಮಮತಾ ಬ್ಯಾನರ್ಜಿ ಸಂಬಂಧಿ, ಟಿಎಂಸಿ ಪ್ರಮುಖ ನಾಯಕ ಅಭಿಷೇಕ್ ಬ್ಯಾನರ್ಜಿ ಅನಾರೋಗ್ಯ ಕಾರಣ ಆಸ್ಪತ್ರೆ ದಾಖಲಾದ ವೇಳೆ ಮುಕುಲ್ ರಾಯ್ ಭೇಟಿ ನೀಡಿದ್ದರು. ಇದರೊಂದಿಗೆ ರಾಯ್ ಬಿಜೆಪಿ ತೊರೆದು ಟಿಎಂಸಿಗೆ ವಾಪಸ್ ಕುರಿತು ಚರ್ಚೆಗಳು ತೀವ್ರಗೊಂಡಿತ್ತು. ಇದೀಗ ಟಿಎಂಸಿ ಭವನಕ್ಕೆ ತೆರಳಿ, ಮಮತಾ ಬ್ಯಾನರ್ಜಿ ಜೊತೆ ಮಾತುಕತೆ ಮುಂದಾಗಿರುವುದು ಈ ಎಲ್ಲಾ ಬೆಳವಣಿಗೆಗಳನ್ನು ಪುಷ್ಠೀಕರಿಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ