ಕಾಂಗ್ರೆಸ್ ಸರ್ಕಾರ ಉಳಿಸಲು ಬಿಜೆಪಿ ನಾಯಕಿ ಯತ್ನ: ರಾಜಸ್ಥಾನ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್

Suvarna News   | Asianet News
Published : Jul 17, 2020, 01:46 PM ISTUpdated : Jul 17, 2020, 02:22 PM IST
ಕಾಂಗ್ರೆಸ್ ಸರ್ಕಾರ ಉಳಿಸಲು ಬಿಜೆಪಿ ನಾಯಕಿ ಯತ್ನ: ರಾಜಸ್ಥಾನ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್

ಸಾರಾಂಶ

ರಾಜಸ್ಥಾನ ರಾಜಕೀಯ ಡ್ರಾಮಾ ನಡುವೆ ಅಚ್ಚರಿಯ ಬೆಳವಣಿಗೆ ಎಂಬಂತೆ ಬಿಜೆಪಿ ನಾಯಕಿ, ರಾಜಸ್ಥಾನದ ಮಾಜಿ ಸಿಎಂ ವಸುಂಧರ ರಾಜೆ ಅವರು ಕಾಂಗ್ರೆಸ್ ನೇತೃತ್ವದ ಸರ್ಕಾರ ಬೆಂಬಲಿಸುವಂತೆ ಶಾಸಕರಿಗೆ ಕರೆ ನೀಡಿದ್ದಾರೆ ಎನ್ನಲಾಗಿದೆ.

ಜೈಪುರ(ಜು.17): ರಾಜಸ್ಥಾನದಲ್ಲಿ ಸಿಎಂ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಕುತ್ತು ಬಂದೊದಗಿದ್ದು, ಸಚಿನ್ ಪೈಲಟ್ ನೇತೃತ್ವದ ಕಾಂಗ್ರೆಸ್ ಶಾಸಕರ ತಂಡ ಸರ್ಕಾರ ಉರುಳಿಸುವ ಸಾಧ್ಯತೆ ಇದೆ.

ಶಾಸಕರಿಗೆ ಈಗಾಗಲೇ ಅನರ್ಹತೆ ನೋಟಿಸ್ ಕುಳುಹಿಸಿದ್ದು, ಶಾಸಕರೂ ಕೋರ್ಟ್ ಮೊರೆ ಹೋಗಿದ್ದಾರೆ. ಈ ಎಲ್ಲ ರಾಜಕೀಯ ಡ್ರಾಮಾ ನಡುವೆ ಅಚ್ಚರಿಯ ಬೆಳವಣಿಗೆ ಎಂಬಂತೆ ಬಿಜೆಪಿ ನಾಯಕಿ, ರಾಜಸ್ಥಾನದ ಮಾಜಿ ಸಿಎಂ ವಸುಂಧರ ರಾಜೆ ಅವರು ಕಾಂಗ್ರೆಸ್ ನೇತೃತ್ವದ ಸರ್ಕಾರ ಬೆಂಬಲಿಸುವಂತೆ ಶಾಸಕರಿಗೆ ಕರೆ ನೀಡಿದ್ದಾರೆ ಎನ್ನಲಾಗಿದೆ.

ಬಿಜೆಪಿಯತ್ತ ಸಚಿನ್ ಪೈಲಟ್: ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಪತನ?

ಸಚಿನ್ ಪೈಲಟ್‌ ತಂಡದಿಂದ ಸರ್ಕಾರ ಉರುಳುವ ಭೀತಿ ಎದುರಿಸುತ್ತಿರುವ ಸಿಎಂಗೆ ಬಿಜೆಪಿ ನಾಯಕಿ ನೆರವಾಗಲು ಪ್ರಯತ್ನಿಸಿದ್ದಾರೆ. ರಾಷ್ಟ್ರೀಯ ಲೋಕ ತಾಂತ್ರಿಕ ಪಕ್ಷದ ಸಂಸದ ಹನುಮಾನ್ ಬೆನಿವಾಲ್ ಟ್ವೀಟ್ ಮಾಡಿದ್ದು, ಈ ಟ್ವೀಟ್ ಕಾಂಗ್ರೆಸ್‌ನ ಎರಡು ಗುಂಪಿನ ನಡುವಿನ ಭಿನ್ನಾಭೀಪ್ರಾಯಕ್ಕೆ ಹೊಸ ಟ್ವಿಸ್ಟ್ ಕೊಟ್ಟಿದೆ. ವಸುಂಧರಾ ರಾಜೆ ಅವರು ಅತೃಪ್ತ ಶಾಸಕರ ಭಿನ್ನಾಭಿಪ್ರಾಯ ಕಳೆಯಲು ಯತ್ನಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಸಿಎಂ ವಸುಂಧರಾ ರಾಜೆ ಅವರು ತಮಗೆ ಆತ್ಮೀಯರಾದ ಕೆಲವು ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಅಶೋಕ್ ಅವರನ್ನು ಬೆಂಬಲಿಸುವಂತೆ ಕೇಳಿದ್ದಾರೆ. ಅವರು ಪ್ರತಿ ಶಾಸಕರಿಗೂ ಕರೆ ಮಾಡಿದ್ದಾರೆ. ಸಿಕಾರ್ ಹಾಗೂ ನಾಗಪುರದಲ್ಲಿರುವ ಶಾಸಕರಿಗೆ ಕರೆ ಮಾಡಿ ಸಚಿನ್ ಪೈಲಟ್‌ನಿಂದ ದೂರವಿರುವಂತೆ ಕೇಳಿಕೊಂಡಿದ್ದಾರೆ. ನನ್ನಲ್ಲಿ ಇದಕ್ಕೆ ಸಂಬಂಧಿಸಿದ ಸಾಕ್ಷ್ಯವಿದೆ ಎಂದು ಅವರು ಹೇಳಿದ್ದಾರೆ.

ಅನರ್ಹತೆ ನೋಟಿಸ್‌ ಪ್ರಶ್ನಿಸಿ ಸಚಿನ್ ಪೈಲಟ್‌ ಟೀಮ್‌ ಕೋರ್ಟ್‌ಗೆ

ವಸುಂಧರಾ ಅವರ ಆಪ್ತರೂ ಈ ಬಗ್ಗೆ ಹೇಳಿದ್ದು, ಅವರು ಅಶೋಕ್‌ ಗೆಹ್ಲೋಟ್‌ಗೆ ನೆರವಾಗುತ್ತಿರುವುದಾಗಿ ತಿಳಿಸಿದ್ದಾರೆ. ಹನುಮಾನ್ ಬೆನಿವಾಲ್ ವಸುಂಧರಾ ರಾಜೆ ಅವರನ್ನು ಸದಾ ಟೀಕಿಸುತ್ತಲೇ ಇದ್ದು, 2018ರ ರಾಜಸ್ಥಾನ ಚುನಾವಣೆ ಮುನ್ನ ಬಿಜೆಪಿ ತೊರೆದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಡಿಗೆದಾರರ ಮನೆಯಿಂದ ಹೊರಹಾಕಲು ಬಂದ ಮಾಲೀಕನಿಗೆ ಆಘಾತ, ತಾಯಿ-ಇಬ್ಬರು ಮಕ್ಕಳ ಶವಪತ್ತೆ
ಕೇರಳ ರಾಜಧಾನಿಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿಗೆ ಭರ್ಜರಿ ಗೆಲುವು, 45 ವರ್ಷದ LDF ಅಧಿಪತ್ಯ ಅಂತ್ಯ