ಮುಸ್ಲಿಮರು ತಮ್ಮ ಅಂಗಡಿಗಳಿಗೆ ಹಿಂದೂ ದೇವತೆಗಳ ಹೆಸರಿಡಬೇಡಿ ಎಂದ ಬಿಜೆಪಿ ಸಚಿವ

Published : Jul 06, 2024, 04:31 PM IST
ಮುಸ್ಲಿಮರು ತಮ್ಮ ಅಂಗಡಿಗಳಿಗೆ ಹಿಂದೂ ದೇವತೆಗಳ ಹೆಸರಿಡಬೇಡಿ ಎಂದ ಬಿಜೆಪಿ ಸಚಿವ

ಸಾರಾಂಶ

ಎಲ್ಲರೂ ಪಾರದರ್ಶಕವಾಗಿ ತಮ್ಮ ವ್ಯಾಪಾರ ಮಾಡಿ. ಯಾವುದೇ ಕಾರಣಕ್ಕೂ ಕನ್ವರ ಯಾತ್ರೆಯಲ್ಲಿ ವಿವಾದ ಉಂಟಾಗಬಾರದು ಎಂದು ಸಚಿವರು ಹೇಳಿದರು. 

ಲಕ್ನೊ: ಮುಸ್ಲಿಮರು ತಮ್ಮ ಅಂಗಡಿಗಳಿಗೆ ಹಿಂದೂ ದೇವತೆಗಳ ಹೆಸರನ್ನು ಇಡಬೇಡಿ ಎಂದು ಉತ್ತರ ಪ್ರದೇಶ ಸರ್ಕಾರದ ಸಚಿವ ಕಪಿಲ್ ದೇವ್ ಅಗರ್ವಾಲ್ ಹೇಳಿದ್ದಾರೆ. ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಭಕ್ತಾದಿಗಳು ಕನ್ವರ್ ಯಾತ್ರೆಯಲ್ಲಿ ತೊಡಗಿಕೊಳ್ಳುತ್ತಾರೆ. ಕನ್ವರ್ ಯಾತ್ರೆ ಹಿನ್ನೆಲೆ ಉತ್ತರ ಪ್ರದೇಶ ಸರ್ಕಾರ ಹಾಗೂ ಸ್ಥಳೀಯಾಡಳಿತ ತಯಾರಿ ಮಾಡಿಕೊಳ್ಳುತ್ತಿವೆ. ಇಂದು ಉತ್ತರ ಪ್ರದೇಶ ಸಚಿವ ಕಪಿಲ್ ದೇವ್ ಅಗರ್ವಾಲ್, ಮುಜಾಫರ್ ನಗರದ ಕನ್ವರ್ ಶಿವಿರ ಸಂಚಾಲಕರ ಜೊತೆ ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕಪಿಲ್ ದೇವ್ ಅಗರ್ವಾಲ್, ಕನ್ವರ್ ಯಾತ್ರೆ ವೇಳೆ ಮುಸ್ಲಿಮರು ಅಂಗಡಿಗಳಿಗೆ ಹಿಂದೂ ದೇವೆತಗಳ ಹೆಸರಿಟ್ಟು ವ್ಯಾಪಾರ ಮಾಡುತ್ತಾರೆ. ಹಾಗಾಗಿ ಆ ರೀತಿ ಮಾಡಬಾರದು ಎಂದು ಹೇಳಿದರು. 

ಹುದ್ದೆ ಬಿಡಲು ಒಪ್ಪದ ಪ್ರಾಂಶುಪಾಲೆ: ಚೇರ್ ಸಮೇತ ಹೊರ ನೂಕಿದ ಬಿಷಪ್ ಸ್ ...

ಕ್ವನ್ವರ್ ಯಾತ್ರೆ ಮಾರ್ಗದಲ್ಲಿ ಮುಸ್ಲಿಮರು ವ್ಯಾಪಾರ ಮಾಡೋದಕ್ಕೆ ನಮ್ಮ ವಿರೋಧವಿಲ್ಲ. ವ್ಯಾಪಾರ ಹೆಚ್ಚಳಕ್ಕಾಗಿ ಕೆಲ ಮುಸ್ಲಿಮರು ತಮ್ಮ ಅಂಗಡಿಗಳಿಗೆ ಹಿಂದೂ ದೇವತೆಗಳ ಹೆಸರಿಡುತ್ತಾರೆ. ದೂರದಿಂದ ಯಾತ್ರೆಗೆ ಬರೋ ಹಿಂದೂ ಭಕ್ತಾದಿಗಳು ಇಂತಹ ಅಂಗಡಿಗಳಿಗೆ ತೆರಳಿ ಆಹಾರ ಸೇವಿಸುತ್ತಾರೆ. ಆನಂತರ ಇದು ಅನ್ಯಕೋಮಿನವರ ಅಂಗಡಿ ಎಂದು ತಿಳಿದ್ರೆ ಗಲಾಟೆ ಉಂಟಾಗುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆ ಎಲ್ಲರೂ ಪಾರದರ್ಶಕವಾಗಿ ತಮ್ಮ ವ್ಯಾಪಾರ ಮಾಡಿ. ಯಾವುದೇ ಕಾರಣಕ್ಕೂ ಕನ್ವರ ಯಾತ್ರೆಯಲ್ಲಿ ವಿವಾದ ಉಂಟಾಗಬಾರದು ಎಂದು ಸಚಿವರು ಹೇಳಿದರು. 

ಡಿಜಿಪಿ ಪ್ರಶಾಂತ್ ಕುಮಾರ್ ಸಭೆ

ಕೆಲ ದಿನಗಳ ಹಿಂದೆ ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕರಾದ (ಡಿಜಿಪಿ)ಪ್ರಶಾಂತ್ ಕುಮಾರ್, ಮುಂಬರುವ ಕನ್ವರ ಯಾತ್ರೆ ಹಾಗೂ ಅದೇ ಸಮಯದಲ್ಲಿ ಬರುವ ಮೊಹರಂ ಮೆರವಣಿಗೆ ಸಂಬಂಧ ಮುಂಜಾಗ್ರತ ಕ್ರಮಗಳ ಬಗ್ಗೆ ಸಭೆ ನಡೆಸಿದ್ದಾರೆ. ಯಾತ್ರೆ ಮತ್ತು ಮೆರವಣಿಗೆ ಸಾಗುವ ಮಾರ್ಗದಲ್ಲಿ ಡಿಜಿಟಲ್ ತಂತ್ರಜ್ಞರು, ಸ್ಥಳೀಯ ಪೊಲೀಸರು ಜೊತೆಯಾಗಿ ಭದ್ರತೆಯ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. 

ಮತ್ತೆ ತೀರ್ಥಯಾತ್ರೆ ಹೊರಟ ಗೋಲ್ಡನ್ ಬಾಬಾ: ಮೈತುಂಬಾ ಚಿನ್ನ!

ಕನ್ವರ ಯಾತ್ರೆ ಮಾರ್ಗಗಳನ್ನು ಮುಂಚಿತವಾಗಿಯೇ ಪರಿಶೀಲನೆ ನಡೆಸಬೇಕು. ಯಾವುದೇ ಹೊಸ ಸಂಪ್ರದಾಯಗಳಿಗೆ ಅನುಮತಿ ನೀಡಬಾರದು ಎಂದು ಡಿಜಿಪಿ ಪ್ರಶಾಂತ್ ಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಸೂಕ್ಷ್ಮ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಬೇಕು. ಯಾವುದೇ ಅಹಿತಕರ ಘಟನೆಗಳನ್ನು ನಡೆಯದಂತೆ ಎಲ್ಲಾ ಮುನ್ನೆಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಡಿಜಿಪಿ ಸೂಚಿಸಿದ್ದಾರೆ.

ಇಂಟರ್ನೆಟ್‌ ಮೇಲೆಯೂ ಹದ್ದಿನಗಣ್ಣು

ವಲಯವಾರು ಭದ್ರತೆಯನ್ನು ವಿಂಗಡಿಸಿ ಪೊಲೀಸರನ್ನು ನಿಯೋಜಿಸುವಂತೆಯೂ ತಿಳಿಸಲಾಗಿದೆ. ಬಸ್ ಹಾಗೂ ರೈಲು ನಿಲ್ದಾಣದಲ್ಲಿ ಪೊಲೀಸರನ್ನು ನಿಯೋಜನೆ ಮಾಡಬೇಕು. ಈ ಭಾಗದಲ್ಲಿಯ ಇಂಟರ್‌ನೆಟ್ ಬಳಕೆದಾರರ ಮೇಲೆಯೂ ಹದ್ದಿನ ಕಣ್ಣು ಇರಿಸಲು ವ್ಯವಸ್ಥಿತವಾದ ತಂಡವನ್ನು ರಚಿಸಿಕೊಳ್ಳುವಂತೆ ಡಿಜಿಪಿ ಆದೇಶ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ