ದೇಶದಲ್ಲಿ ವೈರಸ್ ಹಾವಳಿ, ಮಾಂಸ ಮಾರುಕಟ್ಟೆ ಮೇಲೆ ಸರ್ಕಾರದ ನಿಯಂತ್ರಣ?

Published : Sep 23, 2020, 01:43 PM ISTUpdated : Sep 23, 2020, 01:57 PM IST
ದೇಶದಲ್ಲಿ ವೈರಸ್ ಹಾವಳಿ, ಮಾಂಸ ಮಾರುಕಟ್ಟೆ ಮೇಲೆ ಸರ್ಕಾರದ ನಿಯಂತ್ರಣ?

ಸಾರಾಂಶ

ಜನಸಂಖ್ಯಾ ನಿಯಂತ್ರಣ ಸಂಬಂಧ ಲೋಕಸಭೆಯಲ್ಲಿ ಧ್ವನಿ ಎತ್ತಿದ ಬಿಜೆಪಿ ಸಂಸದ| ದೇಶದಲ್ಲಿ ವೈರಸ್ ಹಾವಳಿ, ಮಾಂಸ ಮಾರುಕಟ್ಟೆ ಮೇಲೆ ನಿಯಂತ್ರಣ ಸರ್ಕಾರದ ನಿಯಂತ್ರಣ?| ಶೂನ್ಯ ವೇಳೆಯಲ್ಲಿ ಸರ್ಕಾರಕ್ಕೆ ಬಿಜೆಪಿ ಸಂಸದನ ಹಲವು ಮನವಿ

ನವದೆಹಲಿ(ಸೆ.23): ಬಿಜೆಪಿ ಸಂಸದ ನಿಶಕಾಂತ್ ದುಬೆ ಮಂಗಳವಾರ ಲೋಕಸಭೆಯಲ್ಲಿ ದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಕಾನೂನು ಹಾಗೂ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಶೂನ್ಯಕಾಲದಲ್ಲಿ ಮಾತನಾಡಿದ ಸಂಸದ ಅಲ್ಲದೇ ಪರಿಶಿಷ್ಟ ಜಾತಿ ಹಾಗೂ ಪಂಗಡದಿಂದ ಮತಾಂತರಗೊಳ್ಳುವವರಿಗೂ ಯಾವುದೇ ಮೀಸಲಾತಿ ನೀಡಬಾರದೆಂದು ಆಗ್ರಹಿಸಿದ್ದಾರೆ.

ಅನೇಕ ಕಡೆ ಹಿಂದುಳಿದ ವರ್ಗದ ಜನರನ್ನು ಮತಾಂತರಗೊಳಿಸುತ್ತಿರುವುದು ಬೆಳಕಿಗೆ ಬಂದಿದೆ. ಹೀಗಘಾಇ ಇಂತಹವರಿಗೆ ಮೀಸಲಾತಿ ಸಿಗದಂತಹ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸುತ್ತೇನೆ ಎಂದಿದ್ದಾರೆ. ಅಲ್ಲದೇ ಸಂವಿಧಾನದ 370 ನೇ ವಿಧಿ ರದ್ದುಗೊಳಿಸಿದ ಬಳಿಕ ಸದ್ಯ ಜನಸಂಖ್ಯಾ ನಿಯಂತ್ರಣ ಕಾನೂನು ಜಾರಿಗೊಳಿಸುವುದೂ ಅತೀ ಅಗತ್ಯವಾಗದೆ ಜೊತೆಗೆ ಸಮಾನ ನಾಗರಿಕ ಸಂಹಿತೆಯನ್ನೂ ಜಾಋಇಗೊಳಿಸುವಂತೆ ಒತ್ತಾಯಿಸಿದ್ದಾರೆ.

ತ್ರಿವಳಿ ತಲಾಖ್‌, 370ನೇ ವಿಧಿ ರದ್ದತಿ ಬೆನ್ನಲ್ಲೇ ಏಕರೂಪ ನಾಗರಿಕ ಸಂಹಿತೆ ಜಾರಿ?

ಇದನ್ನು ಹೊರತುಪಡಿಸಿ ಅನೇಕ ವೈರಸ್‌ಗಳು ಹಕ್ಕಿ ಹಾಗೂ ಕ್ರಮಿ ಕೀಟಗಳಿಂದ ಮನುಷ್ಯರಿಗೆ ಹರಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಾಣಿ ಮತ್ತು ಮಾಂಸದ ಮಾರುಕಟ್ಟೆಯನ್ನು ನಿಯಂತ್ರಿಸುವ ಅವಶ್ಯಕತೆಯಿದೆ ಈ ನಿಟ್ಟಿನಲ್ಲೂ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. 

ಏನಿದು ಏಕರೂಪ ನಾಗರಿಕ ಸಂಹಿತೆ?

ಹಿಂದು, ಮುಸ್ಲಿಂ, ಕ್ರೈಸ್ತ ಸೇರಿದಂತೆ ದೇಶದಲ್ಲಿರುವ ಎಲ್ಲ ಧರ್ಮಗಳಿಗೂ ಸೇರಿದ ನಾಗರಿಕರಿಗೆ ಅನ್ವಯವಾಗುವ ಒಂದೇ ರೀತಿಯ ವೈಯಕ್ತಿಕ ಕಾನೂನು. ವಿವಾಹ, ವಿಚ್ಛೇದನ, ಆಸ್ತಿ ಹಂಚಿಕೆ, ಉತ್ತರಾಧಿಕಾರಿ ನೇಮಕ ವಿಚಾರವಾಗಿ ಹಿಂದು, ಮುಸ್ಲಿಮರಲ್ಲಿ ಪ್ರತ್ಯೇಕ ವೈಯಕ್ತಿಕ ಕಾನೂನುಗಳಿವೆ. ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದರೆ ಅಂತಹ ಎಲ್ಲ ಕಾಯ್ದೆಗಳೂ ರದ್ದಾಗಿ, ದೇಶಾದ್ಯಂತ ಎಲ್ಲ ಧರ್ಮೀಯರಿಗೂ ಒಂದೇ ಕಾಯ್ದೆ ಬರುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!