ಬಂಗಾಳ ಮಹಿಳಾ ಬಿಜೆಪಿ ಕಾರ್ಯಕರ್ತೆಯನ್ನು ನಗ್ನಗೊಳಿಸಿ ಮೆರವಣಿಗೆ, ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ಸಂಸದೆ!

Published : Jul 21, 2023, 04:15 PM ISTUpdated : Jul 21, 2023, 04:20 PM IST
ಬಂಗಾಳ ಮಹಿಳಾ ಬಿಜೆಪಿ ಕಾರ್ಯಕರ್ತೆಯನ್ನು ನಗ್ನಗೊಳಿಸಿ ಮೆರವಣಿಗೆ, ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ಸಂಸದೆ!

ಸಾರಾಂಶ

ಮಣಿಪುರದಲ್ಲಿ ಮಾತ್ರವಲ್ಲ, ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆಯ ಬಿಜೆಪಿ ಮಹಿಳಾ ಅಭ್ಯರ್ಥಿಯನ್ನು ಟಿಎಂಸಿ ಕಾರ್ಯಕರ್ತರು ನಗ್ನ ಮೆರವಣಿಗೆ ಮಾಡಿಸಿದ್ದಾರೆ. ಪೊಲೀಸರು ಇದ್ದರೂ ಏನೂ ಮಾಡಿಲ್ಲ. ನಮ್ಮ ಹೆಣ್ಣುಮಕ್ಕಳ ಉಳಿಸಿ ಎಂದು ಬಿಜೆಪಿ ಸಂಸದೆ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟಿದ್ದಾರೆ.  

ಕೋಲ್ಕತಾ(ಜು.21) ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿಸಿ ಅತ್ಯಾಚಾರ ಎಸಗಿದ ಘಟನೆ ದೇಶದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದೆ. ಘಟನೆ ಖಂಡಿಸಿ ದೇಶದ ಮೂಲೆ ಮೂಲೆಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಆದರೆ ಪಶ್ಚಿಮ ಬಂಗಾಳಯದ ಪಂಚಾಯತ್ ಚುನಾವಣೆಯಲ್ಲಿ ನಡೆದ ಈ ಭೀಕರ ಘಟನೆ ಎಲ್ಲೂ ಬಹಿರಂಗವಾಗಲೇ ಇಲ್ಲ. ಮತಗಟ್ಟೆ ಬೂತ್‌ನಲ್ಲಿದ್ದ ಪಂಚಾಯತ್ ಮಹಿಳಾ ಬಿಜೆಪಿ ಅಭ್ಯರ್ಥಿಯನ್ನೇ ತೀವ್ರವಾಗಿ ಥಳಿಸಿ, ನಗ್ನಗೊಳಿಸಿ ಮೆರವಣಿಗೆ ಮಾಡಿದ್ದಾರೆ. ಈ ಕುರಿತು ಬಿಜೆಪಿ ಸತತ ಹೋರಾಟದ ಬಳಿಕ ಬಂಗಾಳ ಪೊಲೀಸರು ದೂರು ದಾಖಲಿಸಿದ್ದಾರೆ. ಆದರೆ ಇದುವರೆಗೂ ಒಬ್ಬರೂ ಬಂಧಿಸಿಲ್ಲ. ಈ ಘಟನೆ ಕುರಿತು ಸುದ್ದಿಗೋಷ್ಠಿ ನಡೆಸಿದ ಬಿಜೆಪಿಯ ಹೂಗ್ಲಿ ಸಂಸದೆ ಲೊಕೆಟ್ ಚಟರ್ಜಿ, ನಮ್ಮ ಹೆಣ್ಣು ಮಕ್ಕಳ ಉಳಿಸಿ ಎಂದು ಕಣ್ಣೀರಿಟ್ಟಿದ್ದಾರೆ.

ಹೌರಾದ ಪಾಂಚ್ಲಾದಲ್ಲಿ ಈ ಘಟನೆ ನಡೆದಿತ್ತು. ಬಿಜೆಪಿ ಅಭ್ಯರ್ಥಿಯನ್ನು ಥಳಿಸಿ, ನಗ್ನಗೊಳಿಸಲಾಗಿದೆ. ಬಳಿಕ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಕಲ್ಲು ತೂರಾಟವನ್ನು ನಡೆಸಿದ್ದಾರೆ. ಈ ಘಟನೆ ಹಾಗೂ ಮಣಿಪುರ ಘಟನೆ ಕುರಿತು ಕೇಳಿದ ಪ್ರಶ್ನೆಗೆ ಸುದ್ದಿಗೋಷ್ಠಿಯಲ್ಲಿ ಲೊಕೆಟ್ ಚಟರ್ಜಿ ನೋವು ತಡೆದುಕೊಳ್ಳಲು ಸಾಧ್ಯವಾಗದೆ ಕಣ್ಣೀರಿಟ್ಟಿದ್ದಾರೆ. ನಾವು ಮಹಿಳೆಯರು. ನಾವು ಕೂಡ ಇದೇ ದೇಶದ ಪ್ರಜೆಗಳು, ಪಶ್ಚಿಮ ಬಂಗಾಳ ಭಾರತದೊಳಗೆ ಇರುವ ರಾಜ್ಯ. ನಮ್ಮ ಹೆಣ್ಣುಮಕ್ಕಳನ್ನು ಉಳಿಸಿ ಎಂದು ಕಣ್ಣೀರಿಟ್ಟಿದ್ದಾರೆ.

ಮಣಿಪುರಕ್ಕೆ ಮರುಗಿದ ಮಮತಾಗೆ ಬಂಗಾಳದ ನಗ್ನ ಮೆರವಣಿಗೆ ಕಾಣಿಸ್ಲೇ ಇಲ್ಲ; ಕಹಿ ಘಟನೆ ಬಿಚ್ಚಿಟ್ಟ ಬಿಜೆಪಿ!

ಮಣಿಪುರದ ಘಟನೆಯನ್ನು ಖಂಡಿಸುತ್ತೇನೆ. ಇದು ಮನಕುಲವೇ ತಲೆ ತಗ್ಗಿಸುವಂತ ಕೆಲಸ. ಇದೇ ರೀತಿಯ ಘಟನೆ ಪಶ್ಟಿಮ ಬಂಗಾಳದ ಪಂಚಾಯತ್ ಚುನಾವಣೆಯಲ್ಲೂ ನಡೆದಿದೆ. ಆದರೆ ಇಡೀ ದೇಶ ಈ ಕುರಿತು ಯಾಕೆ ಮಾತನಾಡುತ್ತಿಲ್ಲ. ಪಶ್ಚಿಮ ಬಂಗಾಳದ ಹೆಣ್ಣುಮಕ್ಕಳು ನಮ್ಮವರಲ್ಲವೇ? ಬಂಗಾಳದ ಮಹಿಳೆಗೆ ರಕ್ಷಣೆ ಬೇಡವೆ? ಎಂದು ಪ್ರಶ್ನಿಸಿದ್ದಾರೆ. 

 

 

ಜುಲೈ 8 ರ ಚುನಾವಣೆ ವೇಳೆ ಬಿಜೆಪಿ ಕಾರ್ಯಕರ್ತೆಯನ್ನು ಗೂಂಡಾಗಳು ಹಿಡಿದು ಥಳಿಸಿದ್ದಾರೆ. ಬಳಿಕ ಲೈಂಗಿಕ ಕಿರುಕುಳ ನೀಡಿದ್ದಾರೆ. ಆಕೆಯ ಸೀರೆ, ಒಳಉಡುಪು ಹರಿದಿದ್ದಾರೆ. ಬಳಿಕ ನಗ್ನಗೊಳಿಸಿ ಮೆರವಣಿಗೆ ಮಾಡಿದ್ದಾರೆ. ಈ ವೇಳೆ ಹಲವರು ಮಹಿಳೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಇನ್ನು ಮಹಿಳೆಯ ಖಾಸಗಿ ಅಂಗಗಳನ್ನು ಮುಟ್ಟಿ ಕಿರುಕುಳ ನೀಡಿದ್ದಾರೆ. ಇನ್ನು ಜುಲೈ 11ರ ಮತ ಏಣಿಕೆ ದಿನವೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹಲ್ಲೆ ಮಾಡಲಾಗಿದೆ. ಈದರೆ ಬೂತ್ ಒಳಗೆ ಟಿಎಂಸಿ ಗೂಂಡಾಗಳು ಪಿಸ್ತೂಲ್ ಹಿಡಿದು ನಿಂತಿರುವ ಕಾರಣ ಯಾವದೇ ಕಾರ್ಯಕರ್ತರು ವಿಡಿಯೋ ರೆಕಾರ್ಡ್ ಮಾಡುವ ಅವಕಾಶವೇ ಇರಲಿಲ್ಲ. ಎರಡು ಘಟನೆಗಳಲ್ಲಿ ವಿಡಿಯೋ ದಾಖಲೆ ಇಲ್ಲ. ದೇಶ ಇದೀಗ ವಿಡಿಯೋ ದಾಖಲೆ ಇದ್ದ ಘಟನೆ ಬಗ್ಗೆ ಮಾತ್ರ ಮಾತನಾಡುತ್ತಿದೆ. ಬಂಗಾಳದ ಹೆಣ್ಣುಮಕ್ಕಳ ಕುರಿತು ಮೌನವೇಕೆ ಎಂದು ಸಂಸದೆ ಲೊಕೆಟ್ ಚಟರ್ಜಿ ಪ್ರಶ್ನಿಸಿದ್ದಾರೆ.

ಮಣಿಪುರದ ಪೈಶಾಚಿಕ ಘಟನೆ, ಇಬ್ಬರು ಮಹಿಳೆಯರನ್ನು ಬೆತ್ತಲೇ ಮೆರವಣಿಗೆ ಮಾಡಿಸಿ ಗ್ಯಾಂಗ್ ರೇಪ್!

40 ರಿಂದ 50 ಟಿಎಂಸಿ ಕಾರ್ಯಕರ್ತರು ಬಿಜೆಪಿ ಮಹಿಳಾ ಕಾರ್ಯಕರ್ತರು, ಬಿಜೆಪಿ ಮಹಿಳಾ ಅಭ್ಯರ್ಥಿಗಳ ಮೇಲೆ ದಾಳಿ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕುರಿತು ಬಂಗಾಳ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ಮಮತಾ ಬ್ಯಾನರ್ಜಿ ಸರ್ಕಾರ ಮಣಿಪುರದ ಘಟನೆ ಖಂಡಿಸುತ್ತಾ, ತಮ್ಮ ಪಕ್ಕದಲ್ಲೇ ನಡೆದ ಘಟನೆ ಬಗ್ಗೆ ಮೌನ ವಹಿಸಿದ್ದಾರೆ ಎಂದ ಬಿಡೆಪಿ ನಾಯಕರು ಆರೋಪಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ತಿರುಪತಿ ತಿಮ್ಮಪ್ಪನಿಗೆ ಅಂಗವಸ್ತ್ರದ ಮೋಸ, ಪ್ಲಾಸ್ಟಿಕ್‌ ಸಿಲ್ಕ್‌ ಕೊಟ್ಟು 55 ಕೋಟಿ ಯಾಮಾರಿಸಿದ ಕಂಪನಿ!
ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?