ಹೊಡೆವ ಟಿಎಂಸಿ ಕಾರ್ಯಕರ್ತರಿಗೆ ಕಂಬಕ್ಕೆ ಕಟ್ಟಿ ತಿರುಗಿಸಿ ಕೊಡಿ: ಬಿಜೆಪಿ ಸಂಸದೆ

Published : Jan 16, 2023, 08:00 AM IST
ಹೊಡೆವ ಟಿಎಂಸಿ ಕಾರ್ಯಕರ್ತರಿಗೆ ಕಂಬಕ್ಕೆ ಕಟ್ಟಿ ತಿರುಗಿಸಿ ಕೊಡಿ: ಬಿಜೆಪಿ ಸಂಸದೆ

ಸಾರಾಂಶ

ಒಬ್ಬ ಟಿಎಂಸಿ ಕಾರ್ಯಕರ್ತ ನಿಮಗೆ (ಜನಸಾಮಾನ್ಯರಿಗೆ) ಹೊಡೆದ ಎಂದರೆ ಕಣ್ಣೀರು ಹಾಕಬೇಡಿ. ಆತನನ್ನು ಕಂಬಕ್ಕೆ ಕಟ್ಟಿ4-5 ಸಲ ಕಪಾಳಕ್ಕೆ ಹೊಡೆಯಿರಿ ಎಂದು ಬಿಜೆಪಿ ಸಂಸದೆ ಲಾಕೆಟ್‌ ಚಟರ್ಜಿ ಭಾನುವಾರ ಕರೆ ನೀಡಿದ್ದಾರೆ.

ಕೋಲ್ಕತಾ: ಒಬ್ಬ ಟಿಎಂಸಿ ಕಾರ್ಯಕರ್ತ ನಿಮಗೆ (ಜನಸಾಮಾನ್ಯರಿಗೆ) ಹೊಡೆದ ಎಂದರೆ ಕಣ್ಣೀರು ಹಾಕಬೇಡಿ. ಆತನನ್ನು ಕಂಬಕ್ಕೆ ಕಟ್ಟಿ4-5 ಸಲ ಕಪಾಳಕ್ಕೆ ಹೊಡೆಯಿರಿ ಎಂದು ಬಿಜೆಪಿ ಸಂಸದೆ ಲಾಕೆಟ್‌ ಚಟರ್ಜಿ ಭಾನುವಾರ ಕರೆ ನೀಡಿದ್ದಾರೆ. ಇದು ಬಂಗಾಳ ರಾಜಕೀಯದಲ್ಲಿ ಭಾರಿ ವಿವಾದ ಸೃಷ್ಟಿಸಿದೆ. ಇತ್ತೀಚೆಗೆ ಬಿಜೆಪಿ ಕಾರ್ಯಕರ್ತ ಸಾಗರ್‌ ಬಿಸ್ವಾಸ್‌ ಎಂಬಾತ ‘ದೀದಿ ಸುರಕ್ಷಾ ಕವಚ’ ಎಂಬ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ರಸ್ತೆ ಸಮಸ್ಯೆ ಬಗ್ಗೆ ಕೇಳಿದಾಗ, ಆತನಿಗೆ ಟಿಎಂಸಿ ಕಾರ್ಯಕರ್ತನೊಬ್ಬ ಕಪಾಳಕ್ಕೆ ಹೊಡೆದಿದ್ದ. ಈ ಹಿನ್ನೆಲೆಯಲ್ಲಿ ಹೂಗ್ಲಿ ಸಂಸದೆ ಲಾಕೆಟ್‌, ಇಂಥ ಕೃತ್ಯಗಳಿಗೆ ಕಪಾಳಮೋಕ್ಷದ ಮೂಲಕವೇ ಪ್ರತೀಕಾರ ಕೈಗೊಳ್ಳಿ ಎಂದು ಕರೆ ನೀಡಿದ್ದಾರೆ. ಈ ಹೇಳಿಕೆಗೆ ಟಿಎಂಸಿ ಆಕ್ಷೇಪ ವ್ಯಕ್ತಪಡಿಸಿದೆ.

ಬಿಕಿನಿ ಹಾಕಿದ್ರೂ ಸಮಸ್ಯೆ, ಹಿಜಾಬ್ ಧರಿಸಿದ್ರೂ ಸಮಸ್ಯೆ; 'ಬೇಷರಂ ರಂಗ್' ವಿವಾದಕ್ಕೆ ಟಿಎಂಸಿ ಸಂಸದೆ ನುಸ್ರುತ್

ಟಿಎಂಸಿ ನಾಯಕ ಬಂಧನದ ಬೆನ್ನಲ್ಲೇ ಪರೇಶ್‌ ರಾವಲ್‌ಗೆ ಕೋಲ್ಕತ್ತಾ ಪೊಲೀಸರಿಂದ ಸಮನ್ಸ್‌..!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!