
ಭೋಪಾಲ್(ಮಾ.07): ವಿವಾದಾತ್ಮಕ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಶನಿವಾರ ಉಸಿರಾಟ ತೊಂದರೆ ಕಂಡುಬಂದ ಹಿನ್ನೆಲೆಯಲ್ಲಿ ಭೋಪಾಲ್ನಿಂದ ಏರ್ಲಿಫ್ಟ್ ಮಾಡಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಧ್ಯಾಹ್ನ ಮನೆಯಲ್ಲಿ ಪ್ರಜ್ಞಾ ಏಕಾಏಕಿ ಅಸ್ವಸ್ಥರಾದರು. ಕೂಡಲೇ ಅವರನ್ನು ಮುಂಬೈಗೆ ಕರೆದೊಯ್ಯಲಾಗಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ.
ಈ ಮೂಲಕ ಪ್ರಜ್ಞಾ ಸಿಂಗ್ ಅವರು ಒಂದೇ ತಿಂಗಳಲ್ಲಿ 2 ಬಾರಿ ಆಸ್ಪತ್ರೆಗೆ ದಾಖಲಾದಂತಾಗಿದೆ. ಈ ಹಿಂದೆ ಫೆ.19ರಂದು ಇಂಥದ್ದೇ ಕಾರಣಗಳಿಂದ ಆರೋಗ್ಯ ಹದಗೆಟ್ಟಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅದಕ್ಕೂ ಮೊದಲು ಡಿಸೆಂಬರ್ 2020ರಲ್ಲಿ ಕೋವಿಡ್ ಸೋಂಕು ತಗುಲಿದ್ದ ಕಾರಣ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ