ತೇಜಸ್ವಿ ಸೂರ್ಯ ವಿರುದ್ಧ ಹೈದರಾಬಾದ್‌ನಲ್ಲೆ ಕೇಸ್!

Published : Nov 27, 2020, 12:22 PM ISTUpdated : Nov 27, 2020, 12:55 PM IST
ತೇಜಸ್ವಿ ಸೂರ್ಯ ವಿರುದ್ಧ ಹೈದರಾಬಾದ್‌ನಲ್ಲೆ ಕೇಸ್!

ಸಾರಾಂಶ

ಪೂರ್ವಾನುಮತಿ ಇಲ್ಲದೆ ಇಲ್ಲಿನ ಒಸ್ಮಾನಿಯಾ ವಿಶ್ವವಿದ್ಯಾಲಯದ ಒಳಗೆ ಪ್ರವೇಶಿಸಿದ ಆರೋಪ|  ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಮತ್ತು ಬಿಜೆಪಿ ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ‍್ಯ ಹಾಗೂ ಬೆಂಬಲಿಗರ ವಿರುದ್ಧ ಕೇಸ್

ಹೈದರಾಬಾದ್(ನ.27)‌: ಪೂರ್ವಾನುಮತಿ ಇಲ್ಲದೆ ಇಲ್ಲಿನ ಒಸ್ಮಾನಿಯಾ ವಿಶ್ವವಿದ್ಯಾಲಯದ ಒಳಗೆ ಪ್ರವೇಶಿಸಿದ ಆರೋಪ ಸಂಬಂಧ ಕರ್ನಾಟಕದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಮತ್ತು ಬಿಜೆಪಿ ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ‍್ಯ ಹಾಗೂ ಬೆಂಬಲಿಗರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದಕ್ಷಿಣದ ಸಂಪೂರ್ಣ ಕೇಸರೀಕರಣ ಹೈದ್ರಾಬಾದ್‌ನಿಂದಲೇ ಪ್ರಾರಂಭ: ತೇಜಸ್ವಿ

ತೆಲಂಗಾಣ ಚಳವಳಿಯಲ್ಲಿ ಹುತಾತ್ಮರಾದವರಿಗೆ ನಮನ ಸಲ್ಲಿಸಲು ಸೂರ‍್ಯ ಹಾಗೂ ಅವರ ಬೆಂಬಲಿಗರು ಮಂಗಳವಾರ ಬ್ಯಾರಿಕೇಡ್‌ಗಳನ್ನು ಕಿತ್ತೆಸೆದು ಒಸ್ಮಾನಿಯಾ ಕ್ಯಾಂಪಸ್‌ ಒಳಗೆ ಪ್ರವೇಶಿಸಿದ್ದರು. ಅಲ್ಲಿ ಸಭೆಯೊಂದನ್ನು ಏರ್ಪಡಿಸಿದ್ದರು. ಈ ಸಂಬಂಧ ಹೈದರಾಬಾದ್‌ ನಗರ ಪೊಲೀಸ್‌ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಲಾಗಿದೆ.

ಇನ್ನೊಂದೆಡೆ ಪೊಲೀಸರು ತಮ್ಮನ್ನು ತಡೆದಿದ್ದಾಗಿ ತೇಜಸ್ವಿ ಸೂರ‍್ಯ ಪ್ರತಿ ಆರೋಪ ಮಾಡಿದ್ದು, ಪೊಲೀಸರು ಅದನ್ನು ಅಲ್ಲಗಳೆದಿದ್ದಾರೆ. ಈ ವಿಶ್ವವಿದ್ಯಾಲಯವು ತೆಲಂಗಾಣ ಪ್ರತ್ಯೇಕ ರಾಜ್ಯಕ್ಕಾಗಿ ನಡೆದ ಹೋರಾಟದ ಕೇಂದ್ರಬಿಂದುವಾಗಿತ್ತು.

ಹೈದರಾಬಾದ್‌ ಹೆಸರು ಬದಲಿಸಿದ ತೇಜಸ್ವಿ ಸೂರ್ಯ, ಭಾಗ್ಯನಗರ!

ಡಿಸೆಂಬರ್‌ 1ರಂದು ಹೈದರಾಬಾದ್‌ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಹೈದರಾಬಾದ್‌ನಲ್ಲಿ ತೇಜಸ್ವಿ ಸೂರ‍್ಯ ಪ್ರಚಾರ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು