ಟಿಎಂಸಿ ಸೇರಿದ ಪತ್ನಿಗೆ ವಿಚ್ಛೇದನ ನೀಡಲು ನಿರ್ಧರಿಸಿದ ಬಿಜೆಪಿ ಸಂಸದ!

Published : Dec 22, 2020, 07:32 AM IST
ಟಿಎಂಸಿ ಸೇರಿದ ಪತ್ನಿಗೆ ವಿಚ್ಛೇದನ ನೀಡಲು ನಿರ್ಧರಿಸಿದ ಬಿಜೆಪಿ ಸಂಸದ!

ಸಾರಾಂಶ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ನಡುವಿನ ರಾಜಕೀಯ ಸಮರ| ರಾಜಕೀಯ ಸಮರದಿಂದ ಸಾಂಸಾರಿಕ ಸಂಬಂಧಗಳಲ್ಲೂ ಬಿರುಕು| ಪತ್ನಿ ಟಿಎಂಸಿ ಸೇರಿದ ಬೆನ್ನಲ್ಲೇ ವಿಚ್ಛೇದನಕ್ಕೆ ಬಿಜೆಪಿ ಸಂಸದ ನಿರ್ಧಾರ

ಕೊಲ್ಕತ್ತಾ(ಡಿ.22): ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ನಡುವಿನ ರಾಜಕೀಯ ಸಮರವೀಗ ಸಾಂಸಾರಿಕ ಸಂಬಂಧಗಳಲ್ಲೂ ಬಿರುಕು ಮೂಡಿಸತೊಡಗಿದೆ. ಬಿಷ್ಣುಪುರದ ಬಿಜೆಪಿ ಸಂಸದ ಸೌಮಿತ್ರ ಖಾನ್‌ ಅವರ ಪತ್ನಿ ಸುಜಾತಾ ಮಂಡಲ್‌ ಸೋಮವಾರ ಟಿಎಂಸಿ ಸೇರ್ಪಡೆಯಾಗಿದ್ದು, ಅದರ ಬೆನ್ನಲ್ಲೇ ಆಕೆಗೆ ವಿಚ್ಛೇದನ ನೀಡಲು ಸೌಮಿತ್ರ ಖಾನ್‌ ನಿರ್ಧರಿಸಿದ್ದಾರೆ.

ಪತ್ನಿ ಟಿಎಂಸಿ ಸೇರ್ಪಡೆಯಾಗುತ್ತಿದ್ದಂತೆ ಪತ್ರಿಕಾಗೋಷ್ಠಿ ನಡೆಸಿದ ಸೌಮಿತ್ರ ಖಾನ್‌, ‘ತೃಣಮೂಲ ಕಾಂಗ್ರೆಸ್‌ ಪಕ್ಷ ನನ್ನ ಸಂಸಾರ ಒಡೆದಿದೆ. ಆಕೆಗೆ ಬಿಜೆಪಿ ಸಂಸದನ ಪತ್ನಿಯೆಂದು ಗೌರವ ಸಿಗುತ್ತಿತ್ತು. ನನ್ನ ಗೆಲುವಿನಲ್ಲಿ ಆಕೆಯ ಪಾತ್ರವೂ ಇತ್ತು. ನನ್ನ ಸಂಸಾರ ಒಡೆದವರನ್ನು ನಾನು ಕ್ಷಮಿಸುವುದಿಲ್ಲ. ಸುಜಾತಾ ನನ್ನ ಆಸ್ತಿಯನ್ನು ಬೇಕಾದರೆ ತೆಗೆದುಕೊಳ್ಳಲಿ. ಇಲ್ಲದಿದ್ದರೆ ಅದನ್ನು ಸಾರ್ವಜನಿಕರಿಗೆ ದಾನ ಮಾಡುತ್ತೇನೆ. ಈಗಲೇ ಆಕೆಗೆ ವಿಚ್ಛೇದನ ನೋಟಿಸ್‌ ಕಳಿಸುತ್ತಿದ್ದೇನೆ’ ಎಂದು ಹೇಳಿದರು.

ಇನ್ನೊಂದೆಡೆ, ಟಿಎಂಸಿ ಸೇರ್ಪಡೆಯಾಗಿ ಮಾತನಾಡಿದ ಸುಜಾತಾ ಮಂಡಲ್‌, ‘ಬಿಜೆಪಿಯಲ್ಲಿ ನನಗೆ ಗೌರವವಿರಲಿಲ್ಲ. ಅಲ್ಲಿರುವವರೆಲ್ಲ ಅವಕಾಶವಾದಿಗಳು ಮತ್ತು ಕಳಂಕಿತರು. ಅವರೆಲ್ಲ ತಮ್ಮ ಕಳಂಕ ತೊಳೆದುಕೊಳ್ಳಲು ಯಾವ ಸೋಪು ಹಾಕಿಕೊಳ್ಳುತ್ತಾರೋ ಗೊತ್ತಿಲ್ಲ. ನನ್ನ ಪತಿಗಾಗಿ ಮತ್ತು ಪಕ್ಷಕ್ಕಾಗಿ ಹೋರಾಡಿದೆ. ಲೋಕಸಭೆ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಿದೆ. ಆದರೆ, ಅವರು ಬರೀ ಅವಕಾಶವಾದಿಗಳು ಎಂಬುದು ಗೊತ್ತಾಯಿತು’ ಎಂದು ವಾಗ್ದಾಳಿ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?