
ನವದೆಹಲಿ: ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ಗುರುತಿಸಿಕೊಂಡಿದ್ದ ಶಹಜಾದ್ ಪೂನಾವಾಲಾ ಪಕ್ಷವನ್ನು ತೊರೆದಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರಿಗೆ ವರ್ಗಾಯಿಸಿದ್ದಾರೆ. ಹಾಗೆಯೇ ರಾಜೀನಾಮೆ ಪತ್ರವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಾನು ಅತ್ಯಂತ ನಮ್ರತೆ, ಪ್ರೀತಿ ಮತ್ತು ಕೃತಜ್ಞತೆಯಿಂದ ಮತ್ತೊಮ್ಮೆ ನನ್ನ ರಾಜೀನಾಮೆ ಪತ್ರವನ್ನು ಪಕ್ಷದ ಅಧ್ಯಕ್ಷರಿಗೆ ಸಲ್ಲಿಸುತ್ತಿದ್ದೇನೆ. ಈ ಬಾರಿ ರಾಜೀನಾಮೆ ಸ್ವೀಕರಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಶಹಜಾದ್ ಪೂನಾವಾಲಾ ತಮ್ಮ ಎಕ್ಸ್ ಖಾತೆಯ ಪ್ರೊಫೈಲ್ ಅಪ್ಡೇಟ್ ಮಾಡಿಕೊಂಡಿದ್ದು, ಅಲ್ಲಿದ್ದ ಬಿಜೆಪಿ ಎಂಬ ಪದವನ್ನು ತೆಗೆದಿದ್ದರು. ಈ ಸಣ್ಣ ಬದಲಾವಣೆ ತೀವ್ರ ಚರ್ಚಗೆ ಗ್ರಾಸವಾಗಿತ್ತು. ಇದೀಗ ಶಹಜಾದ್ ಪೂನಾವಾಲಾ ಬಿಜೆಪಿಯಿಂದ ಹೊರ ಬರುತ್ತಿರೋದನ್ನು ದೃಢಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ನಿತಿನ್ ನವೀನ್, ಗೃಹ ಸಚಿವ ಅಮಿತ್ ಶಾ, ಬಿಎಲ್ ಸಂತೋಷ್, ಜೆಪಿ ನಡ್ಡಾ, ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಮತ್ತು ಇಡೀ ಸಂಘ ಪರಿವಾರ ಸೇರಿದಂತೆ ಎಲ್ಲಾ ಹಿರಿಯ ನಾಯಕರಿಗೆ ಪೂನಾವಾಲ ತಮ್ಮ ಧನ್ಯವಾದಗಳನ್ನು ಸಲ್ಲಿಸಿದ್ದು, ತಮಗೆ ನೀಡಿದ ಮಾರ್ಗದರ್ಶನ, ಪ್ರೀತಿ ಮತ್ತು ಗೌರವಕ್ಕೆ ಕೃತಜ್ಞನಾಗಿರುತ್ತೇನೆ ಎಂದಿ ಹೇಳಿಕೊಂಡಿದ್ದಾರೆ. ಯಾವುದೇ ರಾಜಕೀಯ ಹಿನ್ನಲೆ ಇಲ್ಲದ ಪಸ್ಮಾಂಡ್ ಮುಸ್ಲಿಂ ನನ್ನಂತಹವನ ಇಲ್ಲಿಯವರೆಗಿನ ಜೀವನ ಸಾಮಾನ್ಯವಾಗಿರಲಿಲ್ಲ. ಬಿಜೆಪಿ ನೀಡಿದ ರಾಷ್ಟ್ರೀಯ ವಕ್ತಾರನ ಸ್ಥಾನ ಮತ್ತು ಜವಾಬ್ದಾರಿಯನ್ನು ತೊರೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಪಕ್ಷ ನನ್ನ ರಾಜೀನಾಮೆಯನ್ನು ತಕ್ಷಣ ಸ್ವೀಕರಿಸಲು ನಿರಾಕರಿಸಿದ್ದು, ನನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇಳಿಕೊಂಡಿದ್ದು ಭಾವನಾತ್ಮಕವಾಗಿತ್ತು. ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿ, ಗಂಭೀರವಾಗಿ ಚಿಂತನೆ ನಡೆಸಿದ ಬಳಿಕ ಅಂತಿಮವಾಗಿ ನನ್ನ ರಾಷ್ಟ್ರೀಯ ವಕ್ತಾರ ಸ್ಥಾನ ಮತ್ತು ಬಿಜೆಪಿಯ ಸಕ್ರಿಯ ಪ್ರಾಥಮಿಕ ಸದಸ್ಯತ್ವದಿಂದ ಕೆಳಗಿಳಿಯಲು ಬಯಸುತ್ತೇನೆ ಎಂದು ನಿರ್ಧರಿಸಿದ್ದೇನೆ ಎಂಬ ಮಾಹಿತಿಯನ್ನು ಶಹಜಾದ್ ಪೂನಾವಾಲಾ ಹಂಚಿಕೊಂಡಿದ್ದಾರೆ.
Resignation Letter.
With utmost humility, sense of affection & gratitude i have once again submitted my resignation letter to @BJP4India & Hon’ble Shri @NitinNabin ji & have requested that the same be accepted.
Eternally grateful for guidance, love, respect and platform that… pic.twitter.com/yUvyJiWNdX— Shehzad Jai Hind (@Shehzad_Ind) August 17, 2026
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ