
ಚೆನ್ನೈ(ಮಾ.22): ಪಂಚ ರಾಜ್ಯಗಳ ಚುನಾವಣೆ ಗೆಲ್ಲಲು ಅವಿರತ ಪ್ರಯತ್ನ ಮಾಡುತ್ತಿರುವ ಬಿಜೆಪಿ ಒಂದೊಂದೆ ರಾಜ್ಯಗಳಲ್ಲಿ ಪ್ರಣಾಲಿಕೆ ಬಿಡುಗಡೆ ಮಾಡುತ್ತಿದೆ. ಪಶ್ಚಿಮ ಬಂಗಾಳ, ಅಸ್ಸಾಂ ಬಳಿಕ ಇದೀಗ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಚೆನ್ನೈ ಬಿಜೆಪಿ ಕಚೇರಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.
ಉಚಿತ ಶಿಕ್ಷಣ, ಆರೋಗ್ಯ,ಅಭಿವೃದ್ಧಿ: ಬಂಗಾಳ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ!
ತಮಿಳುನಾಡು ಮತದಾರರಿಗೆ ಬಿಜೆಪಿ ಭರ್ಜರಿ ಭರವಸೆಗಳನ್ನು ನೀಡಿದೆ. ಬರೋಬ್ಬರಿ 50 ಲಕ್ಷ ಉದ್ಯೋಗ ಸೃಷ್ಟಿ, ಮೀನುಗಾರರಿಗೆ ವಾರ್ಷಿಕ 6,000 ರೂಪಾಯಿ ಧನಸಹಾಯ ಸೇರಿದಂತೆ ಹಲವು ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಹೇಳಿದೆ. ಈ ಬಾರಿಯ ತಮಿಳುನಾಡಿನಲ್ಲಿ ಬಿಜೆಪಿ ಕೂಟದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರವು ವಿಶ್ವಾಸವಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.
ಬಿಜೆಪಿ ಪ್ರಣಾಳಿಕೆಯ ಪ್ರಮುಖಾಂಶ:
ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಎಪ್ರಿಲ್ 6 ರಂದು ಚುನಾವಣೆ ನಡೆಯಲಿದೆ. ಮೇ.02ರಂದು ಫಲಿತಾಂಶ ಹೊರಬೀಳಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ