
ಭೋಪಾಲ್(ಮೇ.22): ದೇಶದಲ್ಲಿ ಸದ್ಯ ಕಾಂಗ್ರೆಸ್ನ ಟೂಲ್ಕಿಟ್ ವಿವಾದ ಸದ್ದು ಮಾಡುತ್ತಿದೆ. ಹೀಗಿರುವಾಗಲೇ ಮಧ್ಯಪ್ರದೇಶದ ಮಾಜಿ ಸಿಎಂ ಕಮಲನಾಥ್ರವರ ವಿಡಿಯೋ ಒಂದು ಭಾರೀ ವೈರಲ್ ಆಗಿದೆ. ಇದರಲ್ಲಿ ಮಾಜಿ ಸಿಎಂ ಕಮಲನಾಥ್ ಕಾಂಗ್ರೆಸ್ ಕಾರ್ಯಕರ್ತರ ಬಳಿ ರೈತರ ವಿಚಾರವನ್ನಿಟ್ಟುಕೊಂಡು 'ಬೆಂಕಿ ಹಚ್ಚಿ' ಎಂದು ಹೇಳಿರುವ ಮಾತುಗಳಿವೆ.
ಟೂಲ್ ಕಿಟ್ ಪ್ರಕರಣ; ಸಂಬೀತ್ ವಿರುದ್ಧ ಕಾಂಗ್ರೆಸ್ ದೂರು, FIR
ಇಪ್ಪತ್ತು ಸೆಕೆಂಡ್ಗಳ ಈ ವಿಡಿಯೋವನ್ನು ಮಧ್ಯಪ್ರದೇಶ ಬಿಜೆಪಿ ಅಧಿಕೃತ ಟ್ವಿಟರ್ ಖಾತೆಯಿಂದ ಶೇರ್ ಮಾಡಲಾಗಿದೆ. ಈ ವಿಡಿಯೋದಲ್ಲಿ ಕಮಲನಾಥ್ ವರ್ಚುವಲ್ ಮೀಟಿಂಗ್ ಒಂದರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಳಿ ರೈತರಿಗೆ ನ್ಯಾಯ ಒದಗಿಸಲು ಹೋರಾಡುವಂತೆ ಹೇಳಿದ್ದಾರೆ. ಅಲ್ಲದೇ ಇದು ಬೆಂಕಿ ಹಚ್ಚಲು ಸೂಕ್ತ ಸಮಯ ಎಂದೂ ಉಲ್ಲೇಖಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ನಲ್ಲಿ ಮಾತನಾಡಿದ ಕಮಲನಾಥ್ 'ನೀವು ಬೆಂಕಿ ಹಚ್ಚಬೇಕು. ನಾನು ಹೇಳಿದ್ದೆ ಇದು ಬೆಂಕಿ ಹಚ್ಚುವ ಸಮಯ. ರೈತರಿಗೆ ನ್ಯಾಯ ಒದಗಿಸಬೇಕು ಮತ್ತೊಂದೆಡೆ ಬೆಂಕಿ ಹಚ್ಚಬೇಕು' ಎಂದಿದ್ದಾರೆ. ಕಮಲನಾಥ್ರವರ ಈ ವಿಡಿಯೋ ಬಗ್ಗೆ ಮಧ್ಯಪ್ರದೇಶ ಬಿಜೆಪಿ ಅಧ್ಯಕ್ಷ ವಿಡಿ ಶರ್ಮಾ ಕಮಲನಾಥ್ರವರು ರೈತರ ಹಿತದೃಷ್ಟಿಯಿಂದ ತೆಗೆದುಕೊಂಡ ನಿರ್ಧಾರದ ವಿಚಾರವಾಗಿಯೂ ಅವರನ್ನು ಗೊಂದಕ್ಕೀಡು ಮಾಡಿ, ಮತ್ತಷ್ಟು ಎತ್ತಿ ಕಟ್ಟುವ ಯತ್ನ ನಡೆಸುತ್ತಿದ್ದಾರೆ ಎಂದಿದ್ದಾರೆ.
'ಕಾಂಗ್ರೆಸ್ ಟೂಲ್ಕಿಟ್ರೂವಾರಿ ಎಚ್ಕೆ: ಸಚಿವ ಪಾಟೀಲ
ದೆಹಲಿ ಗಡಿಯಲ್ಲಿ ಕಳೆದ ಆರು ತಿಂಗಳಿನಿಂದ ರೈತ ಚಳುವಳಿ ನಡೆಯುತ್ತಿದೆ. ಇದೊಂದು ರಾಜಕೀಯ ಪ್ರೇರಿತ ಆಂದೋಲನ ಎಂಬುವುಸದ್ದದು ಮಾಡುತ್ರತಿದೆ. ಲ್ಲಿ ಯಾವುದೇ ಅನುಮಾಣವಿಲ್ಲ. ಕೇಂದ್ರದ ಹೆಸರು ಕೆಡಿಸಲು ಕಾಂಗ್ರೆಸ್ ಈ ಆಂದೋಲನಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡಿದೆ. ಈ ಆಂಂಂದೋಲನದಲ್ಲಿ ದೀಪ್ ಸಿಧು ಸೇರಿ ಅನೇಕ ಖಲಿಸ್ತಾನಿ ನಾಯಕರೂ ಸಕ್ರಿಯರಾಗಿದ್ದಾರೆ ಎಂಬುವುದೂ ತಿಳಿದು ಬಂದಿದೆ.
ಇನ್ನು ಕಮಲನಾಥ್ರವರ ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಹಿಂಸಾಚಾರಕ್ಕೆ ಕಾರಣವಾಗಬಲ್ಲ ವಿಡಿಯೋಗಳನ್ನು ಟಟ್ವಿಟರ್ ಇತ್ತೀಚೆಗೆ ತೆಗೆದು ಹಾಕುತ್ತಿದೆ. ಇಲ್ಲವೇ ನಿಯಮಗಳ ಉಲ್ಲಂಘನೆ ಎಂದು ಅಂತಹ ವಿಷಯಗಳನ್ನು ಶೇರ್ ಮಾಡಿದ ಖಾತೆಗಳನ್ನು ಸ್ಥಗಿತಗೊಳಿಸುತ್ತಿದೆ. ಹೀಗಿರುವಾಘ ಕಮಲನಾಥ್ರವರ ವಿಡಿಯೋ ಬಗ್ಗೆ ಯಾಕೆ ಯಾಔಉದೇ ಕ್ರಮ ಕೈಗೊಂಡಿಲ್ಲ ಎಂದೂ ಕರ್ನಾಟಕ ಬಿಜೆಪಿ ನಾಯಕ ಸಿ. ಟಿ. ರವಿ ಸೇರಿದಂತೆ ಅನೇಕ ಮಂದಿ ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ