
ನವದೆಹಲಿ(ಮೇ.28): ಕೊರೋನಾ ವೈರಸ್ ಎಂಬ ಮಹಾಮಾರಿ ಯಾವುದೇ ತಾರತಮ್ಯವಿಲ್ಲದೇ ಎಲ್ಲರನ್ನೂ ಬಾಧಿಸುತ್ತಿದೆ. ಬಡ ವರ್ಗದ ಜನರಿಂದ ಶ್ರೀಮಂತ ವರ್ಷದ ಜನರು ಹೀಗೆ ಎಲ್ಲರೂ ಈ ಮಹಾಮಾರಿ ಅಬ್ಬರಕ್ಕೆ ಬೆಚ್ಚಿ ಬಿದ್ದಿದ್ದಾರೆ. ಭಾರತದಲ್ಲೂ ವೈರಸ್ ಅಬ್ಬರ ದಿನೇ ದಿನೇ ಹೆಚ್ಚಾಗುತ್ತಿದ್ದು, ಸದ್ಯ ಬಿಜೆಪಿ ಪಕ್ಷದ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರಾ ಕೊರೋನಾ ವೈರಸ್ ಲಕ್ಷಣ ಕಂಡು ಬಂದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇನ್ನು ಸಂಭೀತ್ ಗುರುವಾರದಂದು ಗುರುಗಾಂವ್ನ ಖಾಸಗಿ ಆಸ್ಪತ್ರೆ ಮೆದಾಂತ ಹಾಸ್ಪಿಟಲ್ಗೆ ದಾಖಲಾಗಿದ್ದಾರೆ ಎಂದು ಟೈಮ್ಸ್ ನೌ ವರದಿ ಮಾಡಿದೆ.
ಪಕ್ಷದ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರಾ ವಾಹಿನಿಯಲ್ಲಿ ಕಂಡು ಬರುವ ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರು. ಅಲ್ಲದೇ ಸೋಶಿಯಲ್ ಮೀಡಿಯಾದಲ್ಲಿ ಬಹಳಷ್ಟು ಆಕ್ಟಿವ್ ಕೂಡಾ ಹೌದು. ಗುರುವಾರವೂ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಲವಾರು ಪೋಸ್ಟ್ ಶೇರ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ