Breaking: ಬಿಜೆಪಿಯ ಭೀಷ್ಮ ಎಲ್‌ ಕೆ ಅಡ್ವಾಣಿಗೆ ಭಾರತರತ್ನ ಘೋಷಣೆ

Published : Feb 03, 2024, 11:45 AM ISTUpdated : Feb 03, 2024, 12:15 PM IST
Breaking: ಬಿಜೆಪಿಯ ಭೀಷ್ಮ ಎಲ್‌ ಕೆ ಅಡ್ವಾಣಿಗೆ ಭಾರತರತ್ನ ಘೋಷಣೆ

ಸಾರಾಂಶ

ಬಿಜೆಪಿಯ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿಗೆ ಕೇಂದ್ರ ಸರ್ಕಾರ ಭಾರತ ರತ್ನ ಘೋಷಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. 

ನವದೆಹಲಿ (ಫೆ.3): ಬಿಜೆಪಿಯ ಭೀಷ್ಮ, ಹಿರಿಯ ರಾಜಕಾರಣಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದಲ್ಲಿ ಅತ್ಯುನ್ನತ ನಾಗರಿಕ ಗೌರವ  ಭಾರತ ರತ್ನ ಭಾರತ ರತ್ನವನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. 96 ವರ್ಷದ ಹಿರಿಯ ರಾಜಕಾರಣಿ ಎಲ್ ಕೆ ಅಡ್ವಾಣಿ ಅವರಿಗೆ ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ ಈ ಅತ್ಯುನ್ನತ ಗೌರವ ನೀಡಲಾಗಿದೆ.

ಶ್ರೀ ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮಾರಕವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು. ಅವರು ನಮ್ಮ ಗೃಹ ಮಂತ್ರಿ ಮತ್ತು I&B ಸಚಿವರಾಗಿಯೂ ಗುರುತಿಸಿಕೊಂಡರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ, ಶ್ರೀಮಂತ ಒಳನೋಟಗಳಿಂದ ತುಂಬಿವೆ.

ಸಾರ್ವಜನಿಕ ಆಸ್ತಿಗೆ ಹಾನಿ ಕೇಸಲ್ಲಿ ದಂಡ ಕಟ್ಟಿದರೆ ಮಾತ್ರ ಜಾಮೀನು

ಸಾರ್ವಜನಿಕ ಜೀವನದಲ್ಲಿ ಅಡ್ವಾಣಿ ಜಿಯವರ ದಶಕಗಳ ಸುದೀರ್ಘ ಸೇವೆಯು ಪಾರದರ್ಶಕತೆ ಮತ್ತು ಸಮಗ್ರತೆಗೆ ಅಚಲವಾದ ಬದ್ಧತೆಯಿಂದ ಗುರುತಿಸಲ್ಪಟ್ಟಿದೆ, ರಾಜಕೀಯ ನೀತಿಶಾಸ್ತ್ರದಲ್ಲಿ ಅನುಕರಣೀಯ ಮಾನದಂಡವನ್ನು ಹೊಂದಿಸುತ್ತದೆ.  ಅವರು ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನದ ಕಡೆಗೆ ಅಪ್ರತಿಮ ಪ್ರಯತ್ನಗಳನ್ನು ಮಾಡಿದ್ದಾರೆ.  ಅವರಿಗೆ ಭಾರತರತ್ನ ಪ್ರಶಸ್ತಿ ಪ್ರದಾನ ಮಾಡಿದ್ದು ನನ್ನ ಪಾಲಿಗೆ ಅತ್ಯಂತ ಭಾವನಾತ್ಮಕ ಕ್ಷಣ.  ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರಿಂದ ಕಲಿಯಲು ನನಗೆ ಅಸಂಖ್ಯಾತ ಅವಕಾಶಗಳು ಸಿಕ್ಕಿರುವುದು ನನ್ನ ವಿಶೇಷತೆ ಎಂದು ನಾನು ಯಾವಾಗಲೂ ಪರಿಗಣಿಸುತ್ತೇನೆ ಎಂದು ಮೋದಿ ಬರೆದುಕೊಂಡಿದ್ದಾರೆ.

ಜ್ಞಾನವಾಪಿಯಲ್ಲಿ ಪೂಜೆ ಖಂಡಿಸಿ ಮುಸ್ಲಿಮರಿಂದ ವಾರಾಣಸಿ ಬಂದ್‌

ಸ್ವತಂತ್ರ್ಯ ಪೂರ್ವ ಭಾರತದ ಸಿಂಧ್ ಪ್ರಾಂತ್ಯದ ಗೊರೆಗಾಂವ್ ನಲ್ಲಿ ಅಂದರೆ ಈಗಿನ ಪಾಕಿಸ್ತಾನದ ಕರಾಚಿಯಲ್ಲಿ ನವೆಂಬರ್ 8, 1927ರಲ್ಲಿ ಜನಿಸಿದ ಅಡ್ವಾಣಿ, ಬಳಿಕ 1941 ತನ್ನ 14ನೇ ವಯಸ್ಸಿನಲ್ಲಿ ಆರ್‌ಎಸ್‌ಎಸ್‌ಗೆ ಸೇರ್ಪಡೆಗೊಂಡರು. 1947ರಲ್ಲಿ ಕರಾಚಿ ಯುನಿಟ್‌ಗೆ ಕಾರ್ಯದರ್ಶಿಯಾದರು. 

ಜನಸಂಘದ ಮೂಲಕ ರಾಜಕೀಯ ಜೀವನವನ್ನು ಆರಂಭಿಸಿದ ಲಾಲ್ ​ಕೃಷ್ಣ ಅಡ್ವಾಣಿ. ದಿವಂಗತ ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರ ಜತೆಗೂಡಿ ಬಿಜೆಪಿಯನ್ನು ಕಟ್ಟಲು ದಶಕಗಳ ಕಾಲ ಹಗಲಿರುಳು ದೇಶಾದ್ಯಂತ ಸುತ್ತಾಡಿದ್ದಾರೆ. ಬಿಜೆಪಿಯಲ್ಲಿ ಏನೂ ಇಲ್ಲದಿದ್ದಾಗ ಪಕ್ಷವನ್ನು ಕಟ್ಟುವುದರ ಜತೆಗೆ ಪ್ರತಿ ರಾಜ್ಯಗಳಲ್ಲೂ ಬಿಜೆಪಿ ಸರ್ಕಾರಗಳು ಬರುವ ನಿಟ್ಟಿನಲ್ಲಿ ಕೆಲಸವನ್ನು ಆರಂಭಿಸಿದ್ದು  ಇದೇ ಅಡ್ವಾಣಿ. ರಾಮಮಂದಿರ ನಿರ್ಮಾಣಕ್ಕೆ ರಥಯಾತ್ರೆ, ರಾಮಮಂದಿರ ನಿರ್ಮಾಣ ಹೋರಾಟ ಸೇರಿದಂತೆ ಇನ್ನಿತರೆ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು.

ವಾಜಪೇಯಿ ಸರ್ಕಾರದಲ್ಲಿ ಗೃಹ ಸಚಿವ, 2002ರಿಂದ 2004ರವರೆಗೆ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. 2013ರಲ್ಲಿ ಎಲ್ ಕೆ ಅಡ್ವಾಣಿ ಅವರು ತಾವು ಹೊಂದಿದ್ದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. 2014ರ ಬಳಿಕ ಬಿಜೆಪಿ ಮಾರ್ಗದರ್ಶಕ ಮಂಡಳಿಯ ಸದಸ್ಯರಾಗಿದ್ದರು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್