
ಕೋಲ್ಕತಾ(ಮಾ.08): ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಅಧಿಕಾರಕ್ಕೇರಿದರೆ, ಪಶ್ಚಿ ಮ ಬಂಗಾಳವನ್ನು ಮತ್ತೊಂದು ಕಾಶ್ಮೀರವನ್ನಾಗಿ ಪರಿವರ್ತಿಸಲಿದೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆತಂಕ ವ್ಯಕ್ತಪಡಿಸಿದ್ದಾರೆ.
ಇಲ್ಲಿ ಬಿಜೆಪಿ ರಾರಯಲಿಯನ್ನುದ್ದೇಶಿಸಿ ಮಾತನಾಡಿದ ಸುವೇಂದು ಅಧಿಕಾರಿ, ‘ಜನಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಇಲ್ಲದಿದ್ದರೆ, ಈ ದೇಶ ಇಸ್ಲಾಂ ದೇಶವಾಗಿರುತ್ತಿತ್ತು. ಅಲ್ಲದೆ ನಾವೆಲ್ಲರೂ ಬಾಂಗ್ಲಾದೇಶದಲ್ಲಿರಬೇಕಿತ್ತು. ಇದೀಗ ಮತ್ತೊಮ್ಮೆ ಟಿಎಂಸಿ ಅಧಿಕಾರಕ್ಕೆ ಬಂದಲ್ಲಿ ಪಶ್ಚಿಮ ಬಂಗಾಳ ಕಾಶ್ಮೀರ ಆಗಲಿದೆ’ ಎಂದು ಹೇಳಿದ್ದಾರೆ.
ಫೆ.14ರಂದು ಜೈ ಬಾಂಗ್ಲಾ ಘೋಷ ವಾಕ್ಯದ ಮೂಲಕ ಪಶ್ಚಿಮ ಬಂಗಾಳವನ್ನು ಟಿಎಂಸಿ ಬಂಗ್ಲಾವನ್ನಾಗಿ ಪರಿವರ್ತಿಸಲು ಯತ್ನಿಸುತ್ತಿದೆ ಎಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ