
ಚೆನ್ನೈ (ಫೆ.24): 10 ವರ್ಷಗಳ ನಂತರ ನಡೆದ ತಮಿಳುನಾಡಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ (Local Body Election) ಬಿಜೆಪಿ (BJP) ಮೂರನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 230 ಸ್ಥಾನಗಳನ್ನು ಗೆಲ್ಲುವ ಮೂಲಕ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ನಂತರ ಅತಿ ಹೆಚ್ಚು ಸ್ಥಾನ ಗೆದ್ದ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ.
ಕೇವಲ 19 ದಿನಗಳ ಹಿಂದೆ ಲೋಕಸಭೆಯಲ್ಲಿ ಮಾತನಾಡಿದ್ದ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi), ನೀವು ತಮಿಳುನಾಡಲ್ಲಿ ಎಂದಿಗೂ ಬೇರೂರಲು ಸಾಧ್ಯವಾಗದು ಎಂದು ಸವಾಲು ಹಾಕಿದ್ದರು. ಅದರ ಬೆನ್ನಲ್ಲೇ ನಡೆದ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದ್ದ ಬಿಜೆಪಿ 230 ಸ್ಥಾನ ಗೆಲ್ಲುವ ಮೂಲಕ, ರಾಜ್ಯದಲ್ಲಿ ಬೇರೂರುವ ಸ್ಪಷ್ಟಸುಳಿವು ನೀಡಿದೆ.
ಜೊತೆಗೆ ಈ ಗೆಲುವು, ಈ ಹಿಂದೆ ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಮತ್ತು ಹಾಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಅಣ್ಣಾಮಲೈ (Annamalai) ಅವರಿಗೆ ಸಿಕ್ಕ ಮೊದಲ ರಾಜಕೀಯ ವಿಜಯ ಎಂಬುದು ವಿಶೇಷ. ಈ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲೇ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದ ಪಕ್ಷಗಳಲ್ಲಿ 3ನೇ ಸ್ಥಾನದಲ್ಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಗೆಲುವು ಬಿಜೆಪಿಯ ನೈತಿಕ ಶಕ್ತಿಯನ್ನು ಹೆಚ್ಚು ಮಾಡಿದೆ ಎಂದು ಹಿರಿಯ ಬಿಜೆಪಿ ನಾಯಕ ಪ್ರೋ.ಆರ್.ಶ್ರೀನಿವಾಸನ್ ಹೇಳಿದ್ದಾರೆ.
Hijab Row ತಮಿಳುನಾಡು ಪೌರಾಡಳಿತ ಚುನಾವಣೆ ಮತದಾನದಲ್ಲಿ ಹಿಜಾಬ್ ಗದ್ದಲ!
ಡಿಎಂಕೆ ಹಲವೆಡೆ ಮುನ್ನಡೆ, ಕೆಲವು ವಾರ್ಡ್ಗಳಲ್ಲಿ ಗೆಲುವು: ಬಿಗಿ ಭದ್ರತೆಯಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ತಮಿಳುನಾಡು ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ತಮಿಳುನಾಡು ರಾಜ್ಯ ಚುನಾವಣಾ ಆಯೋಗ (TNSEC) ಪ್ರಕಾರ, ದ್ರಾವಿಡ ಮುನ್ನೇತ್ರ ಕಳಗಂ (DMK) ಮುನ್ಸಿಪಲ್ ಕಾರ್ಪೊರೇಶನ್ಗಳು ಮತ್ತು ಪುರಸಭೆಗಳಲ್ಲಿ ಮುನ್ನಡೆ ಸಾಧಿಸಿದೆ. ಇದರಿಂದ ಎಐಎಡಿಎಂಕೆ ತೀರಾ ಹಿಂದುಳಿದಿದೆ. ಕಾಂಗ್ರೆಸ್ ಮೂರನೇ ಸ್ಥಾನದಲ್ಲಿದೆ. ಆದರೆ, ಮತ ಎಣಿಕೆಯ ಬಳಿಕವೇ ವಾಸ್ತವವೇನು ಎಂದು ತಿಳಿಯಲಿದೆ. ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ವೆಲ್ಲೂರಿನಲ್ಲಿ ಡಿಎಂಕೆ 14 ವಾರ್ಡ್ಗಳನ್ನು ಗೆದ್ದಿದೆ. ಎಐಎಡಿಎಂಕೆ 4 ವಾರ್ಡ್, ಪಿಎಂಕೆ 4 ವಾರ್ಡ್, ಎಎಂಎಂಕೆ 1 ವಾರ್ಡ್ ಮತ್ತು ಪಕ್ಷೇತರರು 3 ವಾರ್ಡ್ಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಫೆಬ್ರವರಿ 19 ರಂದು ತಮಿಳುನಾಡಿನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆದವು. 60.70 ರಷ್ಟು ಜನರು ಈ ಚುನಾವಣೆಯಲ್ಲಿ ಮತ ಚಲಾಯಿಸಿದ್ದರು. ರಾಜ್ಯದ 21 ಪಾಲಿಕೆಗಳು, 138 ಪುರಸಭೆಗಳು ಮತ್ತು 490 ನಗರ ಪಂಚಾಯತ್ಗಳ 12,607 ಹುದ್ದೆಗಳಿಗೆ 57,778 ಅಭ್ಯರ್ಥಿಗಳು ಕಣದಲ್ಲಿದ್ದರು. ಇನ್ನು ಕೆಲವೇ ಗಂಟೆಗಳಲ್ಲಿ ಅವರ ಭವಿಷ್ಯ ನಿರ್ಧಾರವಾಗಲಿದೆ. ಚುನಾವಣೆಯಲ್ಲಿ ಡಿಎಂಕೆ ಗೆಲ್ಲುವ ಭರವಸೆ ಇದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮತದಾನದ ನಂತರ ಹೇಳಿದ್ದರೆ, ಮಾಜಿ ಸಿಎಂ ಕೆ ಪಳನಿಸಾಮಿ ಅವರು ಆಡಳಿತ ಮತ್ತು ಕೊಡುಕೊಳ್ಳುವಿಕೆಯಲ್ಲಿ ವಿಫಲವಾಗಿರುವ ಡಿಎಂಕೆಗೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದರು.
Lavanya Suicide Case: ಸಿಬಿಐ ತನಿಖೆ ಮಧ್ಯೆ ಸರ್ಕಾರಕ್ಕೆ ಬಿಜೆಪಿ ಪ್ರಶ್ನೆಗಳ ಸುರಿಮಳೆ!
ಸಿಸಿಟಿವಿ ಕ್ಯಾಮೆರಾ ಮೂಲಕ ಮತ ಎಣಿಕೆ ಮೇಲೆ ನಿಗಾ: ರಾಜ್ಯದ 15 ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಮತ ಎಣಿಕೆಯನ್ನು ಸಿಸಿಟಿವಿ ಕ್ಯಾಮರಾಗಳ ಮೂಲಕ ಗಮನಿಸಲಾಗುತ್ತಿದೆ. 11 ವರ್ಷಗಳ ಬಳಿಕ ಇಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿದೆ. ಇಂತಹ ಸಂದರ್ಭದಲ್ಲಿ ಅಭ್ಯರ್ಥಿಗಳಲ್ಲಿ ಭಾರೀ ಉತ್ಸಾಹ ಮೂಡಿದೆ. ಭದ್ರತೆ ದೃಷ್ಟಿಯಿಂದ ಕೇಂದ್ರದ ಹೊರಗೆ 7 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ರಾಜ್ಯದಲ್ಲಿ ಪಾಲಿಕೆಯ ಮೇಯರ್, ಉಪಮೇಯರ್ ಸ್ಥಾನಕ್ಕೆ ಪರೋಕ್ಷ ಚುನಾವಣೆ ನಡೆಯಲಿದ್ದು, ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಗರ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಮಾ.4ರಂದು ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ