ಮೋದಿ ಜನಪ್ರಿಯತೆಯಿಂದ ಬಿಜೆಪಿ ಮಹಾರಾಷ್ಟ್ರದಲ್ಲಿ ಜಯ, ಕಾಂಗ್ರೆಸ್ ನಾಯಕತ್ವದ ಮೇಲಿಲ್ಲ ವಿಶ್ವಾಸ: ಸಮೀಕ್ಷೆ

Published : Dec 21, 2024, 05:20 AM IST
ಮೋದಿ ಜನಪ್ರಿಯತೆಯಿಂದ ಬಿಜೆಪಿ ಮಹಾರಾಷ್ಟ್ರದಲ್ಲಿ ಜಯ, ಕಾಂಗ್ರೆಸ್ ನಾಯಕತ್ವದ ಮೇಲಿಲ್ಲ ವಿಶ್ವಾಸ: ಸಮೀಕ್ಷೆ

ಸಾರಾಂಶ

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ದೇಶಾದ್ಯಂತ ಕೇವಲ 240 ಸೀಟು ಪಡೆದು ಕಡಿಮೆ ಸಾಧನೆ ಮಾಡಿದರೂ ಈ ರಾಜ್ಯಗಳಲ್ಲಿ ಕೇಸರಿ ಪಕ್ಷದ ಜಯಕ್ಕೆ ಮೋದಿ ಜನಪ್ರಿಯತೆಯೇ ಕಾರಣ ಎಂದು 'ಮ್ಯಾಟ್ರಿಜ್' ಸಂಸ್ಥೆಯ ಸಮೀಕ್ಷೆ ಹೇಳಿದೆ. 

ನವದೆಹಲಿ(ಡಿ.21):  ಇತ್ತೀಚಿನ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯೇ ಕಾರಣ. ಅವರ ಜನಪ್ರಿಯತೆ ಯೊಂದೇ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ನೆಲಸಮಗೊಳಿಸಿತು ಎಂದು ಸಮೀಕ್ಷೆಯೊಂದು ಹೇಳಿದೆ. 

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ದೇಶಾದ್ಯಂತ ಕೇವಲ 240 ಸೀಟು ಪಡೆದು ಕಡಿಮೆ ಸಾಧನೆ ಮಾಡಿದರೂ ಈ ರಾಜ್ಯಗಳಲ್ಲಿ ಕೇಸರಿ ಪಕ್ಷದ ಜಯಕ್ಕೆ ಮೋದಿ ಜನಪ್ರಿಯತೆಯೇ ಕಾರಣ ಎಂದು 'ಮ್ಯಾಟ್ರಿಜ್' ಸಂಸ್ಥೆಯ ಸಮೀಕ್ಷೆ ಹೇಳಿದೆ. ಸಮೀಕ್ಷೆಯನ್ನು 2024ರ ನ.25ರಿಂದ 2024ರ ಡಿ.14ರ ನಡುವೆ ಮಹಾರಾಷ್ಟ್ರದಲ್ಲಿ 76,830 ಮತ್ತು ಹರ್ಯಾಣದಲ್ಲಿ 53,647 ಮಾದರಿ ಗಾತ್ರದೊಂದಿಗೆ ನಡೆಸಲಾಗಿದೆ. 

ದಿಢೀರ್‌ ಮೋದಿ ಭೇಟಿ: ಯತ್ನಾಳ್ ಬಣದ ವಿರುದ್ಧ ವರಿಷ್ಠರಿಗೆ ದೂರು ನೀಡ್ತಾರಾ ವಿಜಯೇಂದ್ರ?

ಪ್ರಧಾನಿ ಮೋದಿಯವರ ನಿರಂತರ ಜನಪ್ರಿಯತೆ: 

ಮೋದಿ ಈಗಲೂ ಪ್ರಭಾವಿ ನಾಯಕ ಎಂಬ ಇಮೇಜ್ ಉಳಿಸಿಕೊಂಡಿದ್ದಾರೆ. ಇದು ವಿಧಾನಸಭಾ ಚುನಾವಣಾ ಫಲಿತಾಂಶಗಳಲ್ಲಿ ಪ್ರಮು ಖ ಪಾತ್ರ ವಹಿಸಿದೆ. ಮಹಾ ರಾಷ್ಟ್ರದಲ್ಲಿ ಶೇ.55 ಜನರು ಮೋದಿ ನಾಯಕತ್ವ ಮೆಚ್ಚಿದ್ದಾರೆ. ಹರ್ಯಾಣದಲ್ಲಿ ಶೇ.53 ಜನರು ಮೋದಿ ಜನಪ್ರಿಯತೆ ಜಿಗಿದಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಕಾಂಗ್ರೆಸ್ ಪ್ರಚಾರಕ್ಕೆ ಬೆಂಬಲವಿಲ್ಲ: 

ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಸಂವಿಧಾನದ ಮೇಲೆ ದಾಳಿ, ಕೃಷಿ ಕಾನೂನುಗಳು ಮತ್ತು ಕುಸ್ತಿಪಟುಗಳ ಸಮಸ್ಯೆಗಳು ಮುಂತಾದ ಸಮಸ್ಯೆಗಳನ್ನು ಕಾಂಗ್ರೆಸ್ ಪ್ರಸ್ತಾಪಿಸಿದರೂ ಜನರು ಅದಕ್ಕೆ ಬೆಲೆ ನೀಡಿಲ್ಲ. ಮೋದಿ ಅಬ್ಬರದ ಪ್ರಚಾರ ಇದಕ್ಕೆ ಮುಳುವಾಯಿತು ಎಂದು ಸಮೀಕ್ಷೆ ಹೇಳಿದೆ. 

ಕಾಂಗ್ರೆಸ್ ನಾಯಕತ್ವದ ಮೇಲಿಲ್ಲ ವಿಶ್ವಾಸ: 

ಮಹಾರಾಷ್ಟ್ರ ಮತ್ತು ಹರ್ಯಾಣದಲ್ಲಿ ಪ್ರತಿಪಕ್ಷದ ಮುಖವೆಂದು ಪರಿಗಣಿಸಲ್ಪಟ್ಟ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಮೇಲಿನ ನಂಬಿಕೆಯ ಕೊರತೆ. ಪ್ರಧಾನಿ ಸ್ಥಾನಕ್ಕೆ ರಾಹುಲ್ ಪರ್ಯಾಯ ಎಂದು ರೂಪಿಸುವಲ್ಲಿ ಕಾಂಗ್ರೆಸ್ ವಿಫಲವಾಯಿತು ಎಂದು ಸಮೀಕ್ಷೆ ನುಡಿದಿದೆ. 

ಮೋದಿ ನೇತೃತ್ವದ ಎನ್‌ಡಿಎ ಅವಧೀಲಿ ಕರ್ನಾಟಕಕ್ಕೆ 2 ಲಕ್ಷ ಕೋಟಿ ಅನುದಾನ: ಸಂಸದ ಸುಧಾಕ‌ರ್

ಜನರ ಭಾವನೆ ಬದಲು: 

ಲೋಕಸಭೆ ಚುನಾವಣೆ ವೇಳೆ ಬಿಜೆಪಿಗೆ ಮತ ಹಾಕದೇ ತಪ್ಪು ಮಾಡಿದೆವು ಎಂದು ಮಹಾರಾಷ್ಟ್ರ ಮತ್ತು ಹರ್ಯಾಣದ ಹಲವು ಮತದಾರರು ಸಮೀಕ್ಷೆಯಲ್ಲಿ ಅಭಿಪ್ರಾಯಪಟ್ಟಿದ್ದು, ತಮ್ಮ ತಮ್ಮ ನಿರ್ಧಾರ ತಿದ್ದಿಕೊಂಡಿದ್ದೇವೆ ಎಂದು ಹೇಳಿದ್ದಾರೆ ಎಂದು ಸಮೀಕ್ಷೆ ನುಡಿದಿದೆ.

ಇಂದಿನಿಂದ ಮೋದಿ 2 ದಿನಗಳ ಕುವೈತ್ ಪ್ರವಾಸ 

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮತ್ತು ಭಾನುವಾರ 2 ದಿನಗಳ ಕುವೈತ್ ಪ್ರವಾಸ ಕೈಗೊಳ್ಳಲಿದ್ದಾರೆ. ಇದು ಇಂದಿರಾ ಗಾಂಧಿ ಬಳಿಕ 43 ವರ್ಷದಲ್ಲಿ ಮೊದಲ ಭಾರತದ ಪ್ರಧಾನಿ ಭೇಟಿಯಾಗಿದೆ. ಕುವೈತ್ ಎಮಿರ್ ಶೇಖ್ ಮೆಶಲ್ ಅಲ್ ಅಹ್ಮದ್ ಅಲ್ ಜಬೇರ್ ಅಲ್ ಸಬಾಹ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ 2 ದಿನದ ಕುವೈತ್ ಪ್ರವಾಸ ಕೈಗೊಳ್ಳಿದ್ದಾರೆ. ಈ ವೇಳೆ ಎಮಿರ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಜತೆಗೆ ಭಾರತೀಯ ಸಮುದಾಯ ವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸರ್ಕಾರ ತಿಳಿಸಿದೆ. 1981 ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಕುವೈತ್‌ಗೆ ಭೇಟಿ ನೀಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!