ಬಿಜೆಪಿಗರ ಸಾವಿಗೆ ಕಾರಣರಾದ ರೈತರು ದೋಷಿಗಳಲ್ಲ: ಟಿಕಾ​ಯ​ತ್‌

Published : Oct 10, 2021, 09:14 AM IST
ಬಿಜೆಪಿಗರ ಸಾವಿಗೆ ಕಾರಣರಾದ ರೈತರು ದೋಷಿಗಳಲ್ಲ: ಟಿಕಾ​ಯ​ತ್‌

ಸಾರಾಂಶ

* ಬಿಜೆಪಿ ಕಾರ‍್ಯಕರ್ತರ ಸಾವು ಹಿಂಸಾಚಾರಕ್ಕೆ ಪ್ರತಿಕ್ರಿಯೆಯಷ್ಟೇ * ಹಿಂಸಾಚಾರಕ್ಕಿಳಿದ ರೈತರ ಸಮರ್ಥಿಸಿಕೊಂಡ ಟಿಕಾಯತ್‌ * ಬಿಜೆಪಿಗರ ಸಾವಿಗೆ ಕಾರಣರಾದ ರೈತರು ದೋಷಿಗಳಲ್ಲ: ಟಿಕಾ​ಯ​ತ್‌

ನವದೆಹಲಿ(ಅ.10): ಲಖೀಂಪುರ ಹಿಂಸಾಚಾರದ(Lakhimpur Violence) ವೇಳೆ ನಾಲ್ವರು ಬಿಜೆಪಿ(BJP) ಕಾರ್ಯಕರ್ತರ ಸಾವಿಗೆ ಕಾರಣರಾಗಿದ್ದಾರೆ ಎನ್ನಲಾದ ರೈತರನ್ನು ತಪ್ಪಿತಸ್ಥರು ಎಂಬುದಾಗಿ ಪರಿಗಣಿಸಲಾಗದು ಎಂದು ಭಾರತೀಯ ಕಿಸಾನ್‌ ಒಕ್ಕೂಟದ(Bharak Kisan Union) ನಾಯಕ ರಾಕೇಶ್‌ ಟಿಕಾಯತ್‌(Rakesh Tikait) ಹೇಳಿದ್ದಾರೆ.

ಈ ಬಗ್ಗೆ ಶನಿವಾರ ಪತ್ರಕರ್ತರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಟಿಕಾಯತ್‌ ಅವರು, ‘ಲಖೀಂಪುರದಲ್ಲಿ(Lakhimpur) ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಸಚಿವರ ಬೆಂಗಾವಲು ಕಾರುಗಳು ಹಾದು ಹೋಗಿವೆ. ಇದರಿಂದ ರೊಚ್ಚಿಗೆದ್ದ ರೈತರು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾದವರನ್ನು ದೋಷಿಗಳೆಂದು ಪರಿಗಣಿಸಲಾಗದು. ಇಲ್ಲಿ ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ನಡೆದಿದೆಯಷ್ಟೇ’ ಎಂದು ಹೇಳಿದರು. ತನ್ಮೂಲಕ ಬಿಜೆಪಿ ಕಾರ್ಯಕರ್ತರ ಹತ್ಯೆಯನ್ನು ಟಿಕಾಯತ್‌ ಅವರು ಸಮರ್ಥಿಸಿಕೊಂಡಿದ್ದಾರೆ.

ಅಲ್ಲದೆ ರೈತರು ಸೇರಿದಂತೆ 8 ಮಂದಿ ಸಾವಿಗೆ ಕಾರಣವಾಗಿರುವ ಲಖೀಂಪುರ ಹಿಂಸಾಚಾರವು ಪೂರ್ವ ಯೋಜಿತ ಪಿತೂರಿಯಾಗಿದ್ದು, ಈ ಕೃತ್ಯಕ್ಕೆ ಕಾರಣವಾದ ಕೇಂದ್ರ ಸಚಿವ ಅಜಯ್‌ ಮಿಶ್ರಾ ಮತ್ತು ಅವರ ಪುತ್ರ ಆಶಿಷ್‌ ಮಿಶ್ರಾರನ್ನು(Ashish Mishra) ಬಂಧಿಸಬೇಕು. ಜತೆಗೆ ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು. ಈ ಘಟನೆ ಖಂಡಿಸಿ ದಸರಾ ಹಬ್ಬವಾದ ಅ.15ರಂದು ಪ್ರಧಾನಿ ನರೇಂದ್ರ ಮೋದಿ(narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪ್ರತಿಕೃತಿಗಳನ್ನು ದಹಿಸಲಾಗುತ್ತದೆ ಎಂದು ರೈತ ನಾಯಕರು ಹೇಳಿದ್ದಾರೆ.

ಕೇಂದ್ರ ಸಚಿವರ ಪುತ್ರ ಅರೆಸ್ಟ್‌!

ನಾಲ್ವರು ರೈತರು ಸೇರಿ 8 ಮಂದಿ ಸಾವಿಗೆ ಕಾರಣವಾಗಿರುವ ಲಖೀಂಪುರ ಹಿಂಸಾಚಾರಕ್ಕೆ ಸಂಬಂಧಿಸಿ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಚಾಟಿ ಬೀಸಿದ ಬೆನ್ನಲ್ಲೇ, ಈ ಪ್ರಕರಣದ ಪ್ರಮುಖ ಆರೋಪಿಯಾದ ಕೇಂದ್ರ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಅವರ ಪುತ್ರ ಆಶಿಷ್‌ ಮಿಶ್ರಾನನ್ನು ಶನಿ​ವಾರ ತಡ​ರಾತ್ರಿ ಬಂಧಿ​ಸ​ಲಾ​ಗಿ​ದೆ.

‘ಘಟ​ನೆ​ಯಲ್ಲಿ ತಮ್ಮ ಪಾತ್ರ​ವಿಲ್ಲ ಎಂದು ಕೆಲ​ವು ದಾಖ​ಲೆ​ಗ​ಳೊಂದಿಗೆ ಅವರು 12 ತಾಸಿನ ವಿಚಾ​ರಣೆ ವೇಳೆ ಸ್ಪಷ್ಟನೆ ನೀಡಲು ಯತ್ನಿ​ಸಿ​ದ​ರು. ಆದರೆ ಪೊಲೀ​ಸರ ಕೆಲ ಪ್ರಶ್ನೆ​ಗ​ಳಿ​ಗೆ ಉತ್ತರ ನೀಡಲು ವಿಫ​ಲರಾಗಿ ಅಸ​ಹ​ಕಾರ ತೋರಿದ​ರು. ಹೀಗಾಗಿ ಅವ​ರನ್ನು ಬಂಧಿ​ಸ​ಲಾ​ಯಿತು. ಅವ​ರನ್ನು ಕೋರ್ಟ್‌ಗೆ ಹಾಜ​ರು​ಪ​ಡಿ​ಸಿ ಮತ್ತೆ ವಶಕ್ಕೆ ಪಡೆದು ಹೆಚ್ಚಿನ ವಿಚಾ​ರಣೆ ನಡೆ​ಸು​ತ್ತೇ​ವೆ’ ಎಂದು ಸಹಾ​ರ​ನ್‌​ಪುರ ಡಿಐಜಿ ಉಪೇಂದ್ರ ಅಗ​ರ್‌​ವಾಲ್‌ ತಿಳಿ​ಸಿ​ದ್ದಾ​ರೆ. ಮೂಲ​ಗಳ ಪ್ರಕಾರ, ಘಟನೆ ನಡೆದ ಅ.3ರ ಮಧ್ಯಾಹ್ನ 2.30ರಿಂದ 3.30ರ ನಡುವೆ ತಾನು ಎಲ್ಲಿ ಇದ್ದೆ ಎಂಬು​ದನ್ನು ಹೇಳಲು ಆಶಿಷ್‌ ವಿಫ​ಲ​ರಾ​ದರು. ಇದೇ ಅವರ ಬಂಧ​ನಕ್ಕೆ ಕಾರ​ಣ​ವಾ​ಯಿತು.

ಇದ​ರೊಂದಿಗೆ ಆಶಿಷ್‌ ಬಂಧ​ನ ಆಗ​ಲೇ​ಬೇಕು ಎಂದು ಪಟ್ಟು ಹಿಡಿ​ದಿದ್ದ ರೈತ ಸಂಘ​ಟ​ನೆ​ಗಳು ಹಾಗೂ ವಿಪ​ಕ್ಷ​ಗಳ ಪ್ರಮುಖ ಬೇಡಿಕೆ ಈಡೇ​ರಿ​ದಂತಾ​ಗಿದೆ. ಜತೆಗೆ, ಪ್ರಕ​ರ​ಣ​ದಲ್ಲಿ ಬಂಧಿ​ತರ ಸಂಖ್ಯೆ 3ಕ್ಕೇರಿ​ದೆ. ಈ ಮುನ್ನ ಇಬ್ಬರು ಆಶಿಷ್‌ ಆಪ್ತ​ರನ್ನು ಬಂಧಿ​ಸ​ಲಾ​ಗಿ​ತ್ತು.

ಶುಕ್ರ​ವಾರ ವಿಚಾ​ರ​ಣೆಗೆ ಆಶಿ​ಷ್‌​ರನ್ನು ಕರೆ​ದಿ​ತ್ತಾ​ದ​ರೂ ಅವರು ಬಂದಿ​ರ​ಲಿಲ್ಲ. ಆದರೆ, ಘಟನೆ ನಡೆದು ಸುಮಾರು 1 ವಾರದ ಬಳಿಕ ಶನಿ​ವಾರ ಬೆಳಗ್ಗೆ 10.30ಕ್ಕೆ ಲಖೀಂಪುರ ಕ್ರೈಮ್‌ ಬ್ರಾಂಚ್‌ ಪೊಲೀಸರೆದುರು ಆಶಿಷ್‌ ಹಾಜ​ರಾ​ದ​ರು. ಡಿಐಜಿ ಅಗರ್‌ವಾಲ್‌ ನೇತೃತ್ವದ 11 ಜನರ ಎಸ್‌ಐಟಿ ತಂಡ ತಡ​ರಾತ್ರಿ 11ರವ​ರೆಗೆ ವಿಚಾ​ರಣೆ ನಡೆ​ಸಿ​ತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!