ಅಯೋಧ್ಯೆಗೆ ಭೇಟಿ ನೀಡಲು ಬಯಸುವವರಿಗೆ ಬಿಜೆಪಿ ವ್ಯವಸ್ಥೆ

Published : Jan 03, 2024, 09:48 AM IST
 ಅಯೋಧ್ಯೆಗೆ ಭೇಟಿ ನೀಡಲು ಬಯಸುವವರಿಗೆ ಬಿಜೆಪಿ ವ್ಯವಸ್ಥೆ

ಸಾರಾಂಶ

ಅಯೋಧ್ಯೆಗೆ ಪ್ರತಿದಿನ 35 ರೈಲುಗಳ ಓಡಾಟ. ಜ.25ರಿಂದ 60 ದಿನಗಳ ಕಾಲ ಮಹಾ ಸಂಪರ್ಕ ಅಭಿಯಾನ. ಪ್ರತಿದಿನ 50 ಸಾವಿರ ಜನರಿಗೆ ದರ್ಶನ ಮಾಡಿಸಲು ಪಣ. ಪ್ರಯಾಣ ವೆಚ್ಚ ಭಕ್ತರದ್ದು, ಅನುಕೂಲ ಕಲ್ಪಿಸುವ ಹೊಣೆ ಬಿಜೆಪಿಗರದ್ದು.

ನವದೆಹಲಿ (ಜ.3): ಅಯೋಧ್ಯೆಗೆ ಭೇಟಿ ನೀಡಲು ಇಚ್ಛಿಸುವ ರಾಮಭಕ್ತರಿಗೆ ಜ.25ರಿಂದ 2 ತಿಂಗಳವರೆಗೆ ರೈಲು ಪ್ರಯಾಣದ ಅನುಕೂಲ ಕಲ್ಪಿಸಲು ಬಿಜೆಪಿ ನಿರ್ಧರಿಸಿದೆ. ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ದಿಲ್ಲಿಯಲ್ಲಿ ಬಿಜೆಪಿ ಸಭೆಯಲ್ಲಿ ಮಾತನಾಡಿದ ಅವರು, ‘ಜ.25ರಿಂದ ಅಯೋಧ್ಯೆಗೆ ಮಹಾ ಸಂಪರ್ಕ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಪ್ರತಿದಿನ 50 ಸಾವಿರ ಮಂದಿಯಂತೆ 60 ದಿನಗಳ ಕಾಲ ರಾಷ್ಟ್ರಾದ್ಯಂತ ಜನರನ್ನು ಅಯೋಧ್ಯೆಗೆ ಕರೆತರಲು ನಾವೆಲ್ಲ ಪಣ ತೊಡಬೇಕಿದೆ. ಅದಕ್ಕಾಗಿ ಅಯೋಧ್ಯೆಯಿಂದ ದೇಶದೆಲ್ಲೆಡೆಗೆ ದಿನಕ್ಕೆ ಕನಿಷ್ಠ 35 ರೈಲುಗಳು ಸಂಚರಿಸುವಂತೆ ರೈಲ್ವೆ ಸಚಿವರಲ್ಲಿ ಮನವಿ ಮಾಡಲಾಗುವುದು’ ಎಂದರು.

ರಾಮಲಲ್ಲಾ ವಿಗ್ರಹ ಆಯ್ಕೆ ಘೋಷಣೆ ಜ.17ಕ್ಕೆ, 11 ಟ್ರಸ್ಟಿಗಳಿಂದ ಮತದಾನ ಮೂಲಕ ವಿಗ್ರಹ ಆಯ್ಕೆ

ಆದರೆ ಅಯೋಧ್ಯೆಗೆ ಪ್ರಯಾಣ ವೆಚ್ಚವನ್ನು ಭಕ್ತಾದಿಗಳೇ ಭರಿಸಬೇಕು. ಭಕ್ತರಿರುಗೆ ಪ್ರಯಾಣಕ್ಕೆ ಬೇಕಾದ ಅಗತ್ಯ ಸಹಾಯವನ್ನು ಬಿಜೆಪಿ ಕಾರ್ಯಕರ್ತರು ಮಾಡಬೇಕು. ಈ ಮೂಲಕ ಹೆಚ್ಚಿನ ಜನರಿಗೆ ರಾಮನ ದರ್ಶನ ಮಾಡಿಸಲು ಪಣ ತೊಡಬೇಕು ಎಂದು ಪಕ್ಷದಿಂದ ಸೂಚಿಸಲಾಗಿದೆ ಎಂದು ಮೂಳಗಳು ಹೇಳಿವೆ.

ಶ್ರೀರಾಮ ಮಂದಿರದ ಎಲೆಕ್ಟ್ರಿಕಲ್ ಕಾರ್ಯದಲ್ಲಿ ಕನ್ನಡಿಗ
ಅಯೋಧ್ಯೆ ರಾಮಮಂದಿರಕ್ಕೆ ಎಲೆಕ್ಟ್ರಿಕಲ್ ಕಾರ್ಯನಿರ್ವಹಿಸಲು ಕೋಲಾರ ಜಿಲ್ಲೆ ಟೇಕಲ್‌ನ ಬನಹಳ್ಳಿ ಗ್ರಾಮದ ಪ್ರವೀಣ್‌ಕುಮಾರ್.ಬಿ.ಕೆ ಎರಡು ತಿಂಗಳಿಂದ ಕಾರ್ಯನಿರ್ವಹಿಸುತ್ತಿರುವುದು ಇಲ್ಲಿನ ಬನಹಳ್ಳಿ ಗ್ರಾಮದ ಜನತೆಯ ಹೆಮ್ಮೆಯ ಸಂಗತಿಯಾಗಿದೆ.

ರಾಮಮಂದಿರದಲ್ಲಿ ಹಲವಾರು ಶಿಲ್ಪಿಗಳು ವಿವಿಧ ಕಾರ್ಯಗಳಲ್ಲಿ ಅತಿ ಹೆಚ್ಚು ಕನ್ನಡಿಗರೇ ಕೆಲಸ ಮಾಡುತ್ತಿದ್ದು ಪ್ರವೀಣ್‌ಕುಮಾರ್ ಕೂಡ ಎಲೆಕ್ಟ್ರಿಕಲ್ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬಿಜೆಪಿ ರಾಮ ಎನ್ನೋರಿಗೆ ಕೇಂದ್ರ ನಾಯಕರು ಆಹ್ವಾನ ಕೊಟ್ಟಿಲ್ಲ: ಕೆ.ಎಸ್‌.ಈಶ್ವರಪ್ಪ

ಎಲೆಕ್ಟ್ರಿಕಲ್ ಸೂಪರ್‌ವೈಸರ್
ಬೆಂಗಳೂರಿನಲ್ಲಿ ವಿವಿಧ ಕಟ್ಟಡಗಳಲ್ಲಿ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ಪ್ರವೀಣ್‌ಕುಮಾರ್‌, ಬಳಿಕ ಮಧ್ಯೆ ಭಾರತದ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಎಲೆಕ್ಟ್ರಿಕಲ್ ಸೂಪರ್‌ವೈಸರ್ ಆಗಿ ಸೇರ್ಪಡೆಯಾಗಿದ್ದಾರೆ. ಕಳೆದ ನವೆಂಬರ್‌ನಲ್ಲಿ ಈ ಕಂಪನಿ ರಾಮಮಂದಿರದ ಎಲೆಕ್ಟ್ರಿಕಲ್ ಕಾರ್ಯನಿರ್ವಹಿಸಲು ಆಯ್ಕೆಯಾಗಿದ್ದು, ಇಲ್ಲಿಯ ಕೆಲಸಗಾರರಲ್ಲಿ ಪ್ರವೀಣ್‌ಕುಮಾರ್ ಸಹ ಒಬ್ಬರಾಗಿದ್ದಾರೆ.

ಪ್ರವೀಣ್‌ಕುಮಾರ್ ಹೇಳುವಂತೆ, ನಾನು ಕಾರ್ಯಕ್ಕೆ ಆಯ್ಕೆಯಾಗಿರುವುದು ನನ್ನ ಸೌಭಾಗ್ಯ. ಕಳೆದ ಎರಡು ತಿಂಗಳನಿಂದ ನಾವು ಮಂದಿರದ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದೇವೆ. ನನ್ನ ಕೈಲಾದ ಮಟ್ಟಿಗೆ ಶ್ರೀರಾಮನ ಸೇವೆ ಮಾಡುತ್ತಿರುವುದಾಗಿ ನಮ್ಮ ತಂದೆ ತಾಯಿ ಆಶೀರ್ವಾದ ನನ್ನ ಬನಹಳ್ಳಿ ಗ್ರಾಮದ ತಾಯಿ ಚಾಮುಂಡೇಶ್ವರಿ, ಮುನೇಶ್ವರಸ್ವಾಮಿರವರ ಕೃಪೆ ನನ್ನ ಮೇಲಿದೆ ಎನ್ನುತ್ತಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದತಿ ಕೊಂಚ ಸರಿ ದಾರಿಗೆ
ಹಿಂದಿ ಹೇರಿಕೆ ಬಗ್ಗೆ ನ್ಯಾ। ನಾಗರತ್ನ ಬೇಸರ