ವೈದ್ಯರ ಮೇಲೆ ದಾಳಿಗೆ ಐಎಂಎ ಖಂಡನೆ: 23ರಂದು ಕರಾಳ ದಿನ ಎಚ್ಚರಿಕೆ!

Published : Apr 21, 2020, 11:57 AM ISTUpdated : Apr 21, 2020, 12:12 PM IST
ವೈದ್ಯರ ಮೇಲೆ ದಾಳಿಗೆ ಐಎಂಎ ಖಂಡನೆ: 23ರಂದು ಕರಾಳ ದಿನ ಎಚ್ಚರಿಕೆ!

ಸಾರಾಂಶ

23ರಂದು ಕರಾಳ ದಿನ: ಐಎಂಎ ಎಚ್ಚರಿಕೆ| ವೈದ್ಯರ ಮೇಲೆ ದಾಳಿಗೆ ಐಎಂಎ ಖಂಡನೆ| 22ರಂದು ರಾತ್ರಿ 9ಕ್ಕೆ ಮೋಂಬತ್ತಿ ಪ್ರತಿಭಟನೆ| 23ರಂದು ಕಪ್ಪುಪಟ್ಟಿಧರಿಸಿ ಕರ್ತವ್ಯಕ್ಕೆ ಹಾಜರು

ನವದೆಹಲಿ(ಏ.21): ಬೆಂಗಳೂರು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಕೊರೋನಾ ವೈರಸ್‌ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಸಿಬ್ಬಂದಿಯ ಮೇಲೆ ನಡೆಯುತ್ತಿರುವ ದಾಳಿಗಳ ಬಗ್ಗೆ ಇಂಡಿಯನ್‌ ಮೆಡಿಕಲ್‌ ಅಸೋಸಿಯೇಷನ್‌ (ಐಎಂಎ), ತೀವ್ರ ಆಕ್ರೋಶ ವ್ಯಕ್ತಪಡಿಸಿದೆ ಹಾಗೂ ಇಂತಹ ಕೃತ್ಯಗಳನ್ನು ಕೂಡಲೇ ನಿಲ್ಲಿಸಲು ಕೇಂದ್ರ ಸರ್ಕಾರವು ಕಠಿಣ ಕೇಂದ್ರೀಯ ಕಾನೂನನ್ನು ಬಳಸಬೇಕು ಎಂದು ಆಗ್ರಹಿಸಿದೆ.

ತಿಂಗಳ ಸಂಪಾದನೆ ಬಡವರ ಊಟಕ್ಕೆ ನೀಡಿದ ವಾಚ್‌ಮನ್

‘ಇದಕ್ಕೆ ಪ್ರತಿಭಟನಾರ್ಥವಾಗಿ ಏಪ್ರಿಲ್‌ 22ರಂದು ರಾತ್ರಿ 9ಕ್ಕೆ ಎಲ್ಲ ವೈದ್ಯರು ಹಾಗೂ ಆಸ್ಪತ್ರೆಗಳ ಸಿಬ್ಬಂದಿ ಮೋಂಬತ್ತಿ ಹಚ್ಚಿ ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದಾರೆ. ಒಂದು ವೇಳೆ ಕಠಿಣ ಕೇಂದ್ರೀಯ ಕಾನೂನಿನನ್ವಯ ದಾಳಿಕೋರರ ವಿರುದ್ಧ ಕ್ರಮ ಜರುಗಿಸದೇ ಹೋದರೆ ಏಪ್ರಿಲ್‌ 23ನ್ನು ಕಪ್ಪು ದಿನ ಎಂದು ಘೋಷಿಸಿ, ಅಂದು ಕಪ್ಪುಪಟ್ಟಿಧರಿಸಿ ವೈದ್ಯರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ’ ಎಂದು ಐಎಂಎ ಹೇಳಿದೆ.

ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಸುರಕ್ಷತೆಗೆ ಸರ್ಕಾರ ಕ್ರಮ ಜರುಗಿಸಬೇಕು ಎಂದು ಅದು ಒತ್ತಾಯಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸ್ಮಶಾನದಲ್ಲಿ ನಿಗೂಢ ಕೃತ್ಯ : ಚಿತೆಯ ಮೇಲೆ ಕುರಿ ತಲೆಬುರುಡೆ; ಮದ್ಯದ ಬಾಟಲಿಗಳು, ಬೆಚ್ಚಿಬಿದ್ದ ಗ್ರಾಮಸ್ಥರು
Gold Rate Today: ಬಂಗಾರದ ಬೆಲೆ ದಿಢೀರ್ ₹1,860 ಇಳಿಕೆ! ಗೃಹಿಣಿಯರು ಫುಲ್ ಖುಷ್, ಇಂದಿನ ರೇಟ್ ಎಷ್ಟು?