
ಹೈದರಾಬಾದ್: ಬರದಿಂದ ಎದುರಾಗುವ ರಾಜಕೀಯ ಲಾಭ ಪಡೆಯುವ ಸಂಚಿನ ಕಾರಣಕ್ಕಾಗಿ ಬಿಆರ್ಎಸ್ ಶಾಸಕರು ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ದೇಗುವೊಂದಕ್ಕೆ ತೆರಳಿ ಮಾಟಮಂತ್ರ ಮಾಡಿಸಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಮಹೇಶ್ ಕುಮಾರ್ ಗೌಡ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಮಂಗಳವಾರ ಇಲ್ಲಿ ಪ್ರತಿಕ್ರಿಯೆ ನೀಡಿರುವ ಗೌಡ್, ‘ರಾಜ್ಯದಲ್ಲಿ ಮಳೆಯಾಗದೇ ಬರ ಸಂಭವಿಸಿದರೆ ಅದರಿಂದ ಬರ ಎದುರಾಗಲಿದೆ. ಇದರಿಂದ ಆಡಳಿತ ವಿರೋಧಿ ಅಲೆ ಎದ್ದು ರಾಜಕೀಯ ಲಾಭ ಪಡೆಯಬಹುದು ಎಂಬುದು ಬಿಆರ್ಎಸ್ ನಾಯಕರ ಲೆಕ್ಕಾಚಾರ. ಇದೇ ಕಾರಣಕ್ಕಾಗಿ ಬಿಆರ್ಎಸ್ ಶಾಸಕ ಹರೀಶ್ ರಾವ್ ಅವರು ಕಳೆದ ಮಾರ್ಚ್, ಮೇ ಮತ್ತು ಜೂನ್ ತಿಂಗಳಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಕೆಲವೊಂದು ದೇಗುಲ, ತಮಿಳುನಾಡಿನ ತಿರುಚ್ಚಿ ದೇಗುಲಗಳಿಗೆ ಭೇಟಿ ನೀಡಿ ಕೆಲವೊಂದು ‘ಕ್ಷುದ್ರ ಪೂಜೆ’ ಮಾಡಿಸಿದ್ದಾರೆ. ಇದಕ್ಕೆ ನಮ್ಮ ಬಳಿ ಸಾಕ್ಷ್ಯಗಳಿವೆ. ಈ ಬಗ್ಗೆ ಅವರೇ ಸ್ಪಷ್ಟಪಡಿಸಬೇಕು ಎಂದು ಗೌಡ್ ಹೇಳಿದ್ದಾರೆ.
ಈ ನಡುವೆ ಆರೋಪ ತಳ್ಳಿಹಾಕಿರುವ ಹರೀಶ್ ರಾವ್, ಇದೊಂದು ಕೀಳು ಆರೋಪ ಎಂದಿದ್ದಾರೆ.
Hyderabad, Telangana: Congress leader Bomma Mahesh Kumar Goud says, "Poojas are performed for two reasons, one for a good cause and the other with the intention of wishing harm to someone else. Such types of poojas are practiced in Tamil Nadu and Karnataka, in some temples. In… pic.twitter.com/tQ5arkLocv
— IANS (@ians_india) August 4, 2026
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ