ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಅಸಾರಾಂ ಬಾಪು ಆಶ್ರಮದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಪತ್ತೆ!

Published : Apr 08, 2022, 11:57 AM ISTUpdated : Apr 08, 2022, 12:13 PM IST
ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಅಸಾರಾಂ ಬಾಪು ಆಶ್ರಮದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಪತ್ತೆ!

ಸಾರಾಂಶ

* ಅಸಾರಾಂ ಬಾಪು ಆಶ್ರಮದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಶವ ಪತ್ತೆ * ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿ * ಕಾರಿನಿಂದ ವಾಸನೆ ಬಂದ ನಂತರ ಗೊತ್ತಾಯಿತು ವಾಸ್ತವತೆ

ಲಕ್ನೋ(ಏ.08): ಉತ್ತರ ಪ್ರದೇಶದ ಗೊಂಡಾದಲ್ಲಿ ಮೃತದೇಹ ಪತ್ತೆಯಾದ ಬಳಿಕ ಭಾರೀ ಸಂಚಲನ ಮೂಡಿಸಿದೆ. ಆಸಾರಾಂ ಬಾಪು ಆಶ್ರಮದೊಳಗೆ ನಿಲ್ಲಿಸಿದ್ದ ಕಾರಿನಿಂದ ಶವ ಪತ್ತೆಯಾಗಿದೆ. ಶವ ಪತ್ತೆಯಾದ ಬಾಲಕಿ ಕಳೆದ 4 ದಿನಗಳಿಂದ ನಾಪತ್ತೆಯಾಗಿದ್ದಳು. ಕಾರಿನಿಂದ ಮೃತದೇಹ ಪತ್ತೆಯಾಗಿರುವ ಈ ಆಶ್ರಮವನ್ನು ಬೆಮೌರ್ ಗ್ರಾಮದ ಬಳಿ ಇದೆ ಎಂದು ಹೇಳಲಾಗುತ್ತಿದೆ. ಅದೇ ವೇಳೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಆಶ್ರಮದ ನೌಕರರನ್ನೂ ವಿಚಾರಣೆ ನಡೆಸಲಾಗುತ್ತಿದೆ. ಕೊಲೆಯ ನಂತರ ಮೃತದೇಹವನ್ನು ಮರೆಮಾಚಲು ಯತ್ನಿಸಲಾಗುತ್ತಿದೆ ಎಂದು ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಸ್ಥಳಕ್ಕಾಗಮಿಸಿದ ವಿಧಿವಿಜ್ಞಾನ ತಂಡವೂ ಆಶ್ರಮ ಹಾಗೂ ವಾಹನದ ತನಿಖೆಯಲ್ಲಿ ತೊಡಗಿದೆ.

ಜೋಧ್‌ಪುರ ಜೈಲಿನದ್ದ ಅಸಾರಾಂ ಬಾಪೂಗೆ ಕೊರೋನಾ, ಆಸ್ಪತ್ರೆಗೆ ದಾಖಲು!

4 ದಿನಗಳಿಂದ ಹುಡುಗಿ ಕಾಣೆಯಾಗಿದ್ದಳು

ಸಿಕ್ಕಿರುವ ಮಾಹಿತಿ ಪ್ರಕಾರ ಬಾಲಕಿ ಕಳೆದ ನಾಲ್ಕು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದಳು. ಅಸಾರಾಂ ಬಾಪು ಅವರ ಆಶ್ರಮದಲ್ಲಿ ಹಲವು ದಿನಗಳಿಂದ ನಿಲ್ಲಿಸಲಾಗಿದ್ದ ಕಾರೊಂದರಿಂದ ಅವರ ಮೃತದೇಹ ಪತ್ತೆಯಾಗಿದೆ. ಕಾರಿನಲ್ಲಿ ದುರ್ವಾಸನೆ ಬರಲಾರಂಭಿಸಿದಾಗ ಮೃತದೇಹ ಪತ್ತೆಯಾಗಿದೆ. ಇದಾದ ಬಳಿಕವೇ ಆಶ್ರಮದ ಸಿಬ್ಬಂದಿ ಕಾರನ್ನು ತೆರೆದು ನೋಡಿದ್ದಾರೆ. ಕಾರು ತೆರೆದು ನೋಡಿದ ನಂತರ ಎಲ್ಲರೂ ದಿಗ್ಭ್ರಮೆಗೊಂಡರು. ಆದರ ಒಳಗಿನಿಂದ ಮೃತದೇಹ ಪತ್ತೆಯಾಗಿದೆ. ಹೀಗಿರುವಾಗಲೇ ಶವ ಪತ್ತೆಯಾದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳ ಹಾಗೂ ಆಶ್ರಮವನ್ನು ಸೀಲ್ ಮಾಡಿದ್ದಾರೆ. ಮೇಲ್ನೋಟಕ್ಕೆ ಮೃತದೇಹವನ್ನು ಬಚ್ಚಿಟ್ಟಿರುವ ಪ್ರಕರಣ ಕಂಡುಬರುತ್ತಿದೆ ಎಂದು ಪ್ರಕರಣದ ತನಿಖೆಯಲ್ಲಿ ತೊಡಗಿರುವ ಪೊಲೀಸರು ತಿಳಿಸಿದ್ದಾರೆ.

ರೇಪ್‌ ಕೇಸಲ್ಲಿ ಆಸಾರಂನ ಪುತ್ರ ನಾರಾಯಣ್‌ ಸಾಯಿ ದೋಷಿ

ಕಾರಿನಿಂದ ವಾಸನೆ ಬಂದ ನಂತರ ಗೊತ್ತಾಯಿತು

ನಗರ ಕೊತ್ವಾಲಿ ಪ್ರದೇಶದ ಬಿಮೌರ್ ಗ್ರಾಮದಿಂದ ಈ ಸಂಪೂರ್ಣ ವಿಷಯ ಮುನ್ನೆಲೆಗೆ ಬಂದಿದೆ. ಹಲವು ದಿನಗಳಿಂದ ಒಂದೇ ಕಡೆ ನಿಲ್ಲಿಸಿದ್ದ ವಾಹನ ದುರ್ವಾಸನೆ ಬೀರಲು ಆರಂಭಿಸಿದಾಗ ಜನರಲ್ಲಿ ಅನುಮಾನ ಮೂಡಿದೆ. ಇದಾದ ಬಳಿಕ ಆಶ್ರಮದ ಕಾವಲುಗಾರ ಕಾರನ್ನು ತೆರೆದು ನೋಡಿದ್ದಾನೆ. ಕಾರಿನೊಳಗಿಂದ ಶವ ಪತ್ತೆಯಾದ ನಂತರ, ತಕ್ಷಣ ಪೊಲೀಸರಿಗೆ ವಿಷಯ ತಿಳಿಸಲಾಯಿತು. ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ವಶಕ್ಕೆ ಪಡೆದು ಗುರುತು ಹಿಡಿಯಲು ಯತ್ನಿಸಿದ್ದಾರೆ. ನಂತರ ನಾಲ್ಕು ದಿನಗಳಿಂದ ಬಾಲಕಿ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಇದೇ ವೇಳೆ ಈ ಘಟನೆ ಬೆಳಕಿಗೆ ಬಂದ ನಂತರ ಸುತ್ತಮುತ್ತಲ ಪ್ರದೇಶದಲ್ಲಿ ಕೋಲಾಹಲ ಉಂಟಾಗಿದೆ.

ರೇಪ್ ಕೇಸ್: ತಂದೆ ಆಯ್ತು ಈಗ ಮಗನಿಗೂ ಜೀವಾವಧಿ ಶಿಕ್ಷೆ

ಸ್ವಯಂ ಘೋಷಿತ ದೇವಮಾನವ ಅಸಾರಾಮ್​ ಬಾಪು ಪುತ್ರ, ನಾರಾಯಣ ಸಾಯಿ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ಯದಾನೆ. 

ಕಳೆದ ಶುಕ್ರವಾರ ನಾರಾಯಣ ಸಾಯಿ ಅಪರಾಧಿ ಎಂದು ತೀರ್ಪು ನೀಡಿದ್ದ ಗುಜರಾತ್‌ನ ಸೂರತ್ ಕೋರ್ಟ್ ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದು, ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರುಪಾಯಿ ದಂಡ ವಿಧಿಸಿದೆ. 2013ರಲ್ಲಿ ನಾರಾಯಣ ಸಾಯಿ ಹಾಗೂ ಅಸಾರಾಮ್​ ಬಾಪು ಸೂರತ್​​ನಲ್ಲಿ ಇಬ್ಬರು ಸಹೋದರಿಯರ ಮೇಲೆ ಅತ್ಯಾಚಾರವೆಸಗಿರೋ ಆರೋಪ ಕೇಳಿಬಂದಿತ್ತು. ನಾರಾಯಣ ಸಾಯಿ ಕಿರಿಯಳ ಮೇಲೆ ಅತ್ಯಾಚಾರವೆಸಗಿದ್ರೆ, ಅಸರಾಂ ಬಾಪು ಹಿರಿಯ ಸಹೋದರಿಯ ಮೇಲೆ ಅತ್ಯಾಚಾರ ಮಾಡಿದ್ದ ಎಂದು ಆರೋಪಿಸಲಾಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ