ಪೆಗಾಸಸ್‌, ಕೃಷಿ ಮಸೂದೆ ಗದ್ದಲಕ್ಕೆ ಇಡೀ ವಾರದ ಕಲಾಪ ಬಲಿ!

Published : Jul 24, 2021, 08:42 AM ISTUpdated : Jul 24, 2021, 08:46 AM IST
ಪೆಗಾಸಸ್‌, ಕೃಷಿ ಮಸೂದೆ ಗದ್ದಲಕ್ಕೆ ಇಡೀ ವಾರದ ಕಲಾಪ ಬಲಿ!

ಸಾರಾಂಶ

* ವಾರವಿಡೀ ಗದ್ದಲದಲ್ಲೇ ಕಾಲಕಳೆದ ವಿಪಕ್ಷಗಳು * ಪೆಗಾಸಸ್‌, ಕೃಷಿ ಮಸೂದೆ ಗದ್ದಲಕ್ಕೆ ಇಡೀ ವಾರದ ಕಲಾಪ ಬಲಿ

 

ನವದೆಹಲಿ(ಜು.24): ಪೆಗಾಸಸ್‌ ಹಗರಣ ಮತ್ತು ಕೃಷಿ ಕಾಯ್ದೆಗಳು ಸೇರಿದಂತೆ ಇನ್ನಿತರ ವಿಚಾರಗಳ ಕುರಿತಾಗಿ ವಿಪಕ್ಷಗಳ ಕೋಲಾಹಲ ಮತ್ತು ಗದ್ದಲಕ್ಕೆ ಶುಕ್ರವಾರದ ಸಂಸತ್ತಿನ ಉಭಯ ಕಲಾಪಗಳು ಬಲಿಯಾಗಿವೆ. ಇದರೊಂದಿಗೆ ಮುಂಗಾರು ಅಧಿವೇಶನದ ಮೊದಲ ವಾರ ಪೂರ್ಣ ಈ ವಿಷಯಗಳ ಗದ್ದಲದಲ್ಲೇ ಮುಕ್ತಾಯವಾಗಿದೆ.

ಶುಕ್ರವಾರ ಸಂಸತ್ತಿನ ಉಭಯ ಸದನಗಳಲ್ಲೂ ಪೆಗಾಸಸ್‌ ಕುರಿತು ಜಂಟಿ ಸಂಸದೀಯ ತನಿಖೆ ನಡೆಸಬೇಕು, ಕೃಷಿ ಕಾಯ್ದೆ ರದ್ದು ಪಡಿಸಬೇಕೆಂದು ವಿಪಕ್ಷಗಳು ಗದ್ದಲ ಎಬ್ಬಿಸುವ ಮೂಲಕ ಕಲಾಪಕ್ಕೆ ಅಡ್ಡಿ ಮಾಡಿದವು. ಹೀಗಾಗಿ 4 ಬಾರಿ ಕಲಾಪಗಳನ್ನು ಮುಂದೂಡಲಾಗಿತ್ತು. ಆದರೂ ಪರಿಸ್ಥಿತಿ ತಿಳಿಗೊಳ್ಳದ ಕಾರಣ, ಸೋಮವಾರಕ್ಕೆ ಉಭಯ ಸದನಗಳ ಕಲಾಪ ಮುಂದೂಡಲಾಯಿತು.

ಪ್ರತಿಭಟನೆ:

ಪೆಗಾಸಸ್‌ ಹಗರಣ ಸಂಬಂಧ ಸುಪ್ರೀಂ ಕೋರ್ಟ್‌ ನೇತೃತ್ವದಲ್ಲಿ ತನಿಖೆಗೆ ಆಗ್ರಹಿಸಿ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಸೇರಿದಂತೆ ಹಲವು ವಿಪಕ್ಷದ ಸಂಸದರು ಸಂಸತ್ತಿನ ಆವರಣದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!