ರಾಜ್ಕೋಟ್: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಪ್ಲಾಸ್ಟಿಕ್ ಬಾಟಲ್ ಎಸೆದ ಘಟನೆ ಶನಿವಾರ ಇಲ್ಲಿ ನಡೆದಿದೆ. ಈ ಬಗ್ಗೆ ಮಾಹಿತಿ ನೀಡಿದ ಆಮ್ ಆದ್ಮಿ ಪಕ್ಷದ ನಾಯಕರು ಬಾಟಲಿ ಕೇಜ್ರಿವಾಲ್ ತಲೆಯ ಮೇಲ್ಭಾಗದಲ್ಲಿ ಹಾದು ಹೊಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಹೇಳಿದ್ದಾರೆ. ಭದ್ರತಾ ಸಿಬ್ಬಂದಿಗಳು ಮತ್ತು ಆಪ್ ನಾಯಕರೊಂದಿಗೆ ಜನದಟ್ಟನೆಯ ಮಧ್ಯೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಈ ಹಿಂದೆ ಕೇಜ್ರಿ ಮೇಲೆ ಇಂಕ್(Ink), ಚಪ್ಪಲಿ ಎಸೆದ, ಕಪಾಳಮೋಕ್ಷ ಮಾಡಿದ ಘಟನೆಗಳು ನಡೆದಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ