Boycott Qatar Airways ಸೇಡಿಗೆ ಸೇಡು, ಭಾರತದಲ್ಲಿ ಖತಾರ್ ಏರ್‌ವೇಸ್ ಬಹಿಷ್ಕರಿಸಲು ಕರೆ!

Published : Jun 07, 2022, 04:04 PM IST
Boycott Qatar Airways ಸೇಡಿಗೆ ಸೇಡು, ಭಾರತದಲ್ಲಿ ಖತಾರ್ ಏರ್‌ವೇಸ್ ಬಹಿಷ್ಕರಿಸಲು ಕರೆ!

ಸಾರಾಂಶ

ನೂಪುರ್ ಶರ್ಮಾ ಹೇಳಿಕೆಯಿಂದ ಭಾರತದ ಉತ್ಪನ್ನಗಳಿಗೆ ನಿರ್ಬಂಧ ಅರಬ್ ರಾಷ್ಟ್ರಗಳಿಂದ ಭಾರತ ರಾಯಭಾರ ಕಚೇರಿಗೆ ನೋಟಿಸ್ ಭಾರತದಲ್ಲಿ ಬಾಯ್‌ಕಾಟ್ ಖತಾರ್ ಟ್ರೆಂಡ್  

ನವದೆಹಲಿ(ಜೂ.07): ಕಾನ್ಪುರದಲ್ಲಿ ನಡೆದ ಪ್ರವಾದಿ ಮೊಹಮ್ಮದ್ ನಿಂದನೆ ಆರೋಪ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ.  ಅರಬ್ ರಾಷ್ಟ್ರಗಳು ಭಾರತವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುತ್ತಿದೆ. ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳನ್ನು ಕರೆಸೆ ನೋಟಿಸ್ ನೀಡುತ್ತಿದೆ. ಭಾರತದ ಉತ್ಪನ್ನಗಳನ್ನು ಅರಬ್ ರಾಷ್ಟ್ರಗಳ ಸ್ಟೋರ್‌ಗಳಲ್ಲಿ ನಿರ್ಬಂಧಿಸಲಾಗುತ್ತಿದೆ. ಈ ಬೆಳವಣಿಗೆ ಭಾರತ ಸರ್ಕಾರ ಖಡಕ್ ಉತ್ತರ ನೀಡಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಸೇಡಿ ಸೇಡು ವ್ಯಕ್ತವಾಗುತ್ತಿದೆ.ಅರಬ್ ರಾಷ್ಟ್ರಗಳ ವಿಮಾನ ಸೇವೆ ಭಾರತದಲ್ಲಿ ನಿರ್ಬಂಧಿಸಲು ಆಂದೋಲನ ನಡೆಯುತ್ತಿದೆ. ಸದ್ಯ ಬಾಯ್‌ಕಾಟ್ ಖತಾರ್ ಏರ್‌ವೇಸ್ ಬಹಿಷ್ಕರಿಸಲು ಕರೆ ನೀಡಲಾಗಿದೆ.

ಬಾಯ್‌ಕಾಟ್ ಖತಾರ್ ಏರ್‌ವೇಸ್ ಆಂದೋಲನಕ್ಕೆ ಒಂದು ಕಾರಣವನ್ನೂ ನೀಡಲಾಗಿದೆ. ಕಾನ್ಪುರದಲ್ಲಿನ ಹಿಂಸಾಚಾರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಾದಕ್ಕೆ ಕಾರಣಾಗಿರುವುದು ಬಿಜೆಪಿ  ವಕ್ತಾರೆ ನೂಪುರ್ ಶರ್ಮಾ ನೀಡಿರುವ ಹೇಳಿಕೆ. ಈ ಹೇಳಿಕೆಯನ್ನೇ ಆಧಾರವಾಗಿಟ್ಟುಕೊಂಡು ಅರಬ್ ರಾಷ್ಟ್ರಗಳು ಇದು ಭಾರತ ಸರ್ಕಾರದ ನಿಲುವು ಎಂಬ ರೀತಿ ವರ್ತಿಸುತ್ತಿದೆ. ಹೀಗಾದರೆ ಚಿತ್ರಕಲಾಕಾರ ಎಂಎಫ್ ಹುಸೇನ್‌ಗೆ ಭಾರತ ಪೌರತ್ವ ನೀಡಿ ಸಲಹಿದೆ. ಆದರೆ ಹುಸೇನ್ ಹಿಂದೂ ದೇವರ ನಗ್ನ ಚಿತ್ರಗಳನ್ನು ಚಿತ್ರಿಸಿದ್ದರು. ಇದೀಗ ಅಂತವರು ನೂಪುರ್ ಹೇಳಿಕೆಯಿಂದ ಧರ್ಮನಿಂದನೆ ಆಗಿದೆ ಎಂಹ ಆರೋಪ ಮಾಡುತ್ತಿರುವುದು ಎಷ್ಟು ಸರಿ ಎಂದು ಭಾರತೀಯರು ಪ್ರಶ್ನಿಸಿದ್ದಾರೆ. 

ಪಾಕಿಸ್ತಾನ ತನ್ನ ಕೆಲಸವನ್ನು ನೋಡಿಕೊಳ್ಳಲಿ, ಭಾರತದ ತೀಕ್ಷ್ಣ ಉತ್ತರ

ನೂಪುರ್ ಶರ್ಮಾ ಹೇಳಿಕೆ ಕುರಿತು ತನಿಖೆ ನಡೆಯುತ್ತಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷದ ಸದಸ್ಯೆ ಹಾಗೂ ವಕ್ತಾರೆ ಈ ಹೇಳಿಕೆ ನೀಡಿದ್ದಾರೆ. ನೂಪುರ್ ಶರ್ಮಾ ಪಕ್ಷದ ವಕ್ತಾರೆ ಹೊರತು, ಸರ್ಕಾರದ ಅಧಿಕೃತ ವಕ್ತಾರೆ ಅಥವಾ ಯಾವುದೇ ಸ್ಥಾನ ಹೊಂದಿಲ್ಲ. ಇಷ್ಟೇ ಅಲ್ಲ ನೂಪುರ್ ಶರ್ಮಾ ಹೇಳಿಕೆಯನ್ನು ಭಾರತ ಸರ್ಕಾರ ಬೆಂಬಲಿಸಿಲ್ಲ. ಇದು ಭಾರತ ಸರ್ಕಾರದ ನಿಲುವಲ್ಲ. ನೂಪುರ್ ಶರ್ಮಾ ವಿರುದ್ಧ ಪಕ್ಷ ಕ್ರಮ ಕೈಗೊಂಡಿದೆ. ನೂಪುರ್ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾರೆ. ಇಷ್ಟಾದರೂ ತನಿಖೆ ನಡೆಯಲಿದೆ. ಹೀಗಿರುವಾಗಿ ಮಧ್ಯ ಪ್ರಾಶ್ಚ ದೇಶಗಳು ಇದು ಭಾರತ ಸರ್ಕಾರದ ನಿಲುವು ಎಂದು ಅಧಿಕಾರಿಗಳಿಗೆ ನೋಟಿಸ್ ನೀಡುತ್ತಿರುವುದು ಎಷ್ಟು ಸರಿ. ಇದೇ ಪಾಶ್ಚಿಮಾತ್ಯ, ಅರಬ್ ರಾಷ್ಟ್ರಗಳ ಹಲವರು ಹಿಂದೂ ದೇವತೆ, ಹಿಂದೂ ಆರಾಧನೆ, ಮೂರ್ತಿ ಪೂಜೆಯನ್ನು ಅದೆಷ್ಟು ಭಾರಿ ಹೀಯಾಳಿಸಿದ್ದಾರೆ ಅನ್ನೋ ಪಟ್ಟಿ ಬೇಕೆ? ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.  

ಖತಾರ್ ವಿದೇಶಾಂಗ ಸಚಿವರು ಭಾರತೀಯ ರಾಯಭಾರ ಅಧಿಕಾರಿ ದೀಪಕ್ ಮಿತ್ತಲ್‌ಗೆ ನೋಟಿಸ್ ನೀಡಿದ್ದರು.ಇದಕ್ಕೆ ದೀಪಕ್ ಮಿತ್ತಲ್ ತೀವ್ರವಾಗಿ ಖಂಡಿಸಿದ್ದರು. ಇಷ್ಟೇ ಅಲ್ಲ ಭಾರತ ವಿದೇಶಾಂಗ ಇಲಾಖೆ ಕೂಡ ಮಧ್ಯ ಪ್ರಾಶ್ಚ ರಾಷ್ಟ್ರಗಳ ಈ ನಡೆಯನ್ನು ಖಂಡಿಸಿದೆ. ಇದರ ಪರಿಣಾಮ ಸಾಮಾಜಿಕ ಜಾಲಾಣದಲ್ಲಿ ಭಾರತೀಯರು ಬಾಯ್ಕಾಟ್ ಖತಾರ್ ಏರ್‌ವೇಸ್ ಆಂದೋಲನ ಆರಂಭಗೊಂಡಿದೆ.

ಪ್ರವಾದಿ ನಿಂದನೆ: ಕತಾರ್‌, ಇರಾನ್‌, ಕುವೈತ್‌ ಅಸಮಾಧಾನ

ಸೌದಿ ಅರೇಬಿಯಾ, ಕುವೈಟ್, ಇರಾನ್ ಸೇರಿದಂತೆ ಕೆಲ ರಾಷ್ಟ್ರಗಳು ಭಾರತ ವಿರುದ್ಧ ಕೆಂಡ ಕಾರಿದೆ. ಹೀಗಾಗಿ ಈ ದೇಶಗಳ ಕಂಪನಿಗಳನ್ನು ಭಾರತದಿಂದ ನಿಷೇಧಿಸಲು ಆಗ್ರಹಿಸಲಾಗಿದೆ. ಹೋರಾಟ ತೀವ್ರಗೊಳ್ಳುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅರಬ್ ರಾಷ್ಟ್ರಗಳ ವಿರುದ್ಧ ಆಂದೋಲನ ನಡೆಯುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು