ಬಸ್‌ನಲ್ಲಿ ಕಿರುಕುಳ ನೀಡಿದವನ ಕಾಲರ್‌ ಹಿಡಿದು ಜಗ್ಗಿ 26 ಬಾರಿ ಕಪಾಳಮೋಕ್ಷ ಮಾಡಿದ ಗಟ್ಟಿಗಿತ್ತಿ

Published : Dec 20, 2024, 12:05 PM ISTUpdated : Dec 20, 2024, 12:08 PM IST
ಬಸ್‌ನಲ್ಲಿ ಕಿರುಕುಳ ನೀಡಿದವನ ಕಾಲರ್‌ ಹಿಡಿದು ಜಗ್ಗಿ 26 ಬಾರಿ ಕಪಾಳಮೋಕ್ಷ ಮಾಡಿದ ಗಟ್ಟಿಗಿತ್ತಿ

ಸಾರಾಂಶ

ಪುಣೆಯ ಬಸ್ಸೊಂದರಲ್ಲಿ ಯುವತಿಗೆ ಕಿರುಕುಳ ನೀಡಿದ ವ್ಯಕ್ತಿಗೆ ಯುವತಿಯೇ 26 ಬಾರಿ ಕಪಾಳಮೋಕ್ಷ ಮಾಡಿದ್ದಾಳೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಯ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಲೈಂಗಿಕ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ ಯುವತಿಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ಬಸ್‌ನಲ್ಲಿ ಕಿರುಕುಳ ನೀಡಿದವನ ಕಾಲರ್‌ ಹಿಡಿದು ಜಗ್ಗಿ 26 ಬಾರಿ ಕಪಾಳಮೋಕ್ಷ ಮಾಡಿದ ಗಟ್ಟಿಗಿತ್ತಿ

ಜನರಿಂದ ತುಂಬಿ ತುಳುಕುವ ಚಲಿಸುವ ಬಸ್‌ನಲ್ಲಿ ಕೆಲವು ಕಾಮುಕರು ಮಹಿಳೆಯರಿಗೆ ಕಿರುಕುಳ ನೀಡುವುದು ಸಾಮಾನ್ಯವೆನಿಸಿದೆ.  ಆದರೆ ಹೆಚ್ಚಿನ ಮಹಿಳೆಯರು ಅಸಹಾಯಕತೆಯಿಂದ ಸುಮ್ಮನಿದ್ದರೆ ಮತ್ತೆ ಕೆಲವರು ಧೈರ್ಯ ತೋರಿ ಕಿರುಚಾಡುತ್ತಾರೆ. ಅದೇ ರೀತಿ ಬಸ್ಸೊಂದರಲ್ಲಿ ಪ್ರಯಾಣಿಸುತ್ತಿದ್ದಾಗ ವ್ಯಕ್ತಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಮಹಿಳೆ ಸ್ವಲ್ಪವೂ ತಲೆಕೆಡಿಸಿಕೊಳ್ಳದೇ ಆತನಿಗೆ ಸರಿಯಾಗಿ ಬುದ್ಧಿ ಕಲಿಸಿದ್ದಾಳೆ. ಆತನ ಶರ್ಟ್ ಕಾಲರ್ ಹಿಡಿದು ಎಳೆದಾಡಿದ ಮಹಿಳೆ ಆತನ ಕೆನ್ನೆಗೆ 26 ಬಾರಿ ಬಾರಿಸಿದ್ದಾಳೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಯ ಧೈರ್ಯಕ್ಕೆ ಅನೇಕರು ಮೆಚ್ಚುಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮಹಿಳೆಯರು ಸ್ವಯಂ ರಕ್ಷಣೆ ಮಾಡಿಕೊಳ್ಳುವ ಬಗ್ಗೆ ಹಾಗೂ ಸಾಮಾಜಿಕ ಜವಾಬ್ದಾರಿಯ ಬಗ್ಗೆ ನೆಟ್ಟಿಗರು ಚರ್ಚಿಸುತ್ತಿದ್ದಾರೆ.

ಅಂದಹಾಗೆ ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ಪುಣೆಯ ಬಸ್ಸೊಂದರಲ್ಲಿ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಪಾನಮತ್ತನಾದ ವ್ಯಕ್ತಿಯೊಬ್ಬ ಅಸಹ್ಯವಾಗಿ ಆಕೆಯನ್ನು ಲೈಂಗಿಕ ಕಿರುಕುಳ ನೀಡಿದ್ದಾರೆ. ಕೂಡಲೇ ಸಿಟ್ಟಿಗೆದ್ದ ಆಕೆ ತೆಗೆದು ಬಾರಿಸಿದ್ದಾಳೆ. ಆತನ ಶರ್ಟ್ ಕಾಲರ್ ಹಿಡಿದು ಜಗ್ಗಿದ ಹಾಗೆ ಕೆನ್ನೆಗೆ ಒಂದೇ ಸಮನೆ 26 ಬಾರಿ ಹೊಡೆದಿದ್ದಾಳೆ. ಈ ವೇಳೆ ಆತ ಕೈ ಮುಗಿದು ಕ್ಷಮೆ ಕೇಳಿದ್ದು, ಆದರೆ ಬಸ್ ಕಂಡಕ್ಟರ್ ಮಧ್ಯ ಪ್ರವೇಶಿಸುವವರೆಗೆ ಆಕೆ ನಿರಂತರವಾಗಿ ಬಾರಿಸಿದ್ದಾಳೆ. ಅಲ್ಲದೇ ಬಸನ್ನು ಸಮೀಪದ ಪೊಲೀಸ್‌ ಠಾಣೆಗೆ ತೆಗೆದುಕೊಂಡು ಹೋಗಿ ನಿಲ್ಲಿಸುವಂತೆ ಆಕೆ ಆಗ್ರಹಿಸಿದ್ದಾಳೆ. 

ಈ ವೀಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನ ಪ್ರತಿಕ್ರಿಯಿಸಿದ್ದಾರೆ. ಲೈಂಗಿಕ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ ಮಹಿಳೆಯ ಧೈರ್ಯಕ್ಕೆ ಅನೇಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇಂತಹ ಸ್ಥಿತಿಯನ್ನು ಎದುರಿಸುತ್ತಿರುವ ಅನೇಕ ಮಹಿಳೆಯರಿಗೆ ಈ ಮಹಿಳೆ ಸ್ಪೂರ್ತಿಯಾಗಿದ್ದಾರೆ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಹಾಗೆಯೇ ಮತ್ತೊಬ್ಬರು ಆತ ಕ್ಷಮೆ ಕೇಳಿದ್ದಾನೆ. ಆತ ಕ್ಷಮೆ ಕೇಳಿದ ಮೇಲೂ 26 ಬಾರಿ ಹೊಡೆದಿದ್ದು ಸರಿಯೇ ಎಂದು ಪ್ರಶ್ನೆ ಮಾಡಿದ್ದಾರೆ. ಹಾಗೆಯೇ ಕೆಲವರು ಘಟನೆ ನಡೆಯುವ ವೇಳೆ ಸುಮ್ಮನೇ ನಿಂತ ಇತರ ಪ್ರಯಾಣಿಕರ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ತಿರುಪತಿ ತಿಮ್ಮಪ್ಪನಿಗೆ ಅಂಗವಸ್ತ್ರದ ಮೋಸ, ಪ್ಲಾಸ್ಟಿಕ್‌ ಸಿಲ್ಕ್‌ ಕೊಟ್ಟು 55 ಕೋಟಿ ಯಾಮಾರಿಸಿದ ಕಂಪನಿ!
ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?