ಕಲಾಪ ದೃಶ್ಯ ಚಿತ್ರೀಕರಣ ಮಾಡಿದ ರಾಜ್ಯಸಭಾ ಸಂಸದರಿಗೆ ನಾಯ್ಡು ಎಚ್ಚರಿಕೆ!

Published : Feb 04, 2021, 09:12 AM IST
ಕಲಾಪ ದೃಶ್ಯ ಚಿತ್ರೀಕರಣ ಮಾಡಿದ ರಾಜ್ಯಸಭಾ ಸಂಸದರಿಗೆ ನಾಯ್ಡು ಎಚ್ಚರಿಕೆ!

ಸಾರಾಂಶ

ರಾಜ್ಯಸಭೆಯ ಕಲಾಪವನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು| ಕಲಾಪ ದೃಶ್ಯ ಚಿತ್ರೀಕರಣ ಮಾಡಿದ ರಾಜ್ಯಸಭಾ ಸಂಸದರಿಗೆ ನಾಯ್ಡು ಎಚ್ಚರಿಕೆ!

ನವದೆಹಲಿ(ಫ.04): ರಾಜ್ಯಸಭೆಯ ಕಲಾಪವನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು. ಅದು ಸಂಸದೀಯ ನಿಯಮಾವಳಿಗಳ ಉಲ್ಲಂಘನೆಯಾಗಲಿದೆ ಎಂದು ರಾಜ್ಯಸಭಾ ಸಭಾಧ್ಯಕ್ಷ ವೆಂಕಯ್ಯ ನಾಯ್ಡು ಬುಧವಾರ ಸಂಸದರಿಗೆ ಎಚ್ಚರಿಸಿದರು.

ಮಂಗಳವಾರ ಕೃಷಿ ಕಾಯ್ದೆ ಕುರಿತ ಚರ್ಚೆಯನ್ನು ವಿಪಕ್ಷಗಳ ಕೆಲವು ಸಂಸದರು ಮೊಬೈಲ್‌ನಲ್ಲಿ ಸೆರೆಹಿಡಿದು ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಕೆಲವು ವಾಹಿನಿಗಳೂ ಅದನ್ನು ಪ್ರಸಾರ ಮಾಡಿದ್ದವು. ಈ ಬಗ್ಗೆ ತೀಕ್ಷ$್ಣವಾಗಿ ಪ್ರತಿಕ್ರಿಯಿಸಿರುವ ನಾಯ್ಡು ಅವರು, ‘ರಾಜ್ಯಸಭೆಯಲ್ಲಿ ಮೊಬೈಲ್‌ ಫೋನ್‌ಗಳ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಆದರೆ ಕೆಲವು ಸಂಸದರು ಕಲಾಪವನ್ನು ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡುತ್ತಿರುವುದು ಕಂಡುಬಂದಿದೆ.

ಸಂಸದರಿಂದ ಅಂಥ ವರ್ತನೆಯನ್ನು ನಿರೀಕ್ಷಿಸಲ್ಲ. ಅದು ಸಂಸದೀಯ ನಿಯಮಾವಳಿಗಳ ಉಲ್ಲಂಘನೆಯಾಗಲಿದೆ’ ಎಂದು ಎಚ್ಚರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!