
ನವದೆಹಲಿ: ಸಂಸತ್ತಿನಲ್ಲಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಶ್ನೆ ಕೇಳುವುದಕ್ಕಾಗಿ ಲಂಚ ಪಡೆದುಕೊಂಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ನ ಸಂಸದೆ ಮಹುವಾ ಮೊಯಿತ್ರಾಗೆ ಸಿಬಿಐ ತನಿಖೆ ಬಿಸಿ ಆರಂಭವಾಗಿದೆ. ಅವರ ವಿರುದ್ಧ ಸಿಬಿಐ ಶನಿವಾರ ಪ್ರಾಥಮಿಕ ತನಿಖೆ (ಪಿ.ಇ.) ಆರಂಭಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸಿಬಿಐಗೆ (CBI), ಲೋಕಪಾಲ್ ಸಂಸ್ಥೆ ಇತ್ತೀಚೆಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಪ್ರಾಥಮಿಕ ತನಿಖೆ ಆರಂಭಿಸಿದೆ. ಪ್ರಕರಣದಲ್ಲಿ ಸತ್ವ ಇದೆ ಎಂದು ಈ ಹಂತದಲ್ಲಿ ಕಂಡುಬಂದರೆ ಮುಂದೆ ಎಫ್ಐಆರ್ (FIR) ದಾಖಲಿಸಿ ಅಧಿಕೃತ ತನಿಖೆ ಆರಂಭಿಸಲಿದೆ.
Cash for Query: ಮಹುವಾ ಮೊಯಿತ್ರಾಗೆ ಸಂಕಷ್ಟ, ಸಂಸದ ಸ್ಥಾನ ಅನರ್ಹಗೊಳಿಸಲು ನೈತಿಕ ಸಮಿತಿ ಶಿಫಾರಸು!
ಮಹುವಾ ವಿರುದ್ಧ ಕ್ರಿಮಿನಲ್ (Criminal) ಪ್ರಕರಣ ದಾಖಲಿಸಬೇಕೆ ಇಲ್ಲವೇ ಎಂಬುದು ಪ್ರಾಥಮಿಕ ತನಿಖೆಯನ್ನು ಆಧರಿಸಿ ನಿರ್ಧರಿಸಲಿದೆ ಎಂದು ಮೂಲಗಳು ತಿಳಿಸಿವೆ. ಪ್ರಾಥಮಿಕ ತನಿಖೆಯ ವೇಳೆಯಲ್ಲಿ ಸಿಬಿಐ ಯಾವುದೇ ದಾಳಿ ಅಥವಾ ಬಂಧನ ನಡೆಸುವುದಿಲ್ಲ. ಇದರ ಬದಲಿಗೆ ಮಾಹಿತಿ ಸಂಗ್ರಹಣೆ, ಪರಿಶೀಲನೆಯನ್ನಷ್ಟೇ ನಡೆಸಲಿದೆ. ಆರೋಪ ಬಲವಾಗಿದೆ ಎಂದು ಕಂಡುಬಂದರೆ ಎಫ್ಐಆರ್ ದಾಖಲಿಸಿ ಸಂಪೂರ್ಣ ತನಿಖೆ ನಡೆಸಲಿದೆ. ಜತೆಗೆ ಸಂಸದೆಯನ್ನು ಪ್ರಶ್ನಿಸಲಿದ್ದು, ಬಳಿಕ ವರದಿಯನ್ನು ಲೋಕಪಾಲ್ಗೆ ಸಲ್ಲಿಸಲಿದೆ.
ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹಾಗೂ ಸುಪ್ರೀಂಕೋರ್ಟ್ (Supreme court)ವಕೀಲ ಜೈ ಅನಂತ್ ದೇಹದ್ರಾಯ್ ಮೊದಲು ಈ ಪ್ರಕಣ ಬಯಲಿಗೆಳೆದವರು. ‘ಮೋದಿ ಸರ್ಕಾರ ಹಾಗೂ ಉದ್ಯಮಿ ಗೌತಮ್ ಅದಾನಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ತಲೆಬುಡವಿಲ್ಲದ ಪ್ರಶ್ನೆಗಳನ್ನು ಲೋಕಸಭೆಯಲ್ಲಿ ಕೇಳಲು ಮಹುವಾ ಅವರು ಉದ್ಯಮಿ ದರ್ಶನ್ ಹೀರಾನಂದಾನಿ ಅವರಿಂದ ಲಂಚ ಪಡೆದುಕೊಂಡಿದ್ದಾರೆ ಎಂದು ದೂರಿದ್ದರು. ಈ ಬಗ್ಗೆ ಲೋಕಸಭಾ ಸಮಿತಿ ಈಗಾಗಲೇ ಪ್ರತ್ಯೇಕ ತನಿಖೆ ನಡೆಸುತ್ತಿದೆ.
ಸಂಸತ್ನಲ್ಲಿ ಪ್ರಶ್ನೆಗಾಗಿ ಲಂಚ: ಮಹುವಾ ಸಂಸತ್ ಐಡಿ ಬಳಸಿ ದುಬೈನಿಂದ 47 ಬಾರಿ ಲಾಗಿನ್
ಆದರೆ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿರುವ ಸಂಸದೆ ಮಹುವಾ, ಸಂಸತ್ತಿನಲ್ಲಿ ಅದಾನಿ (Gowtham Adani)ಹಾಗೂ ಪ್ರಧಾನಿ ಮೋದಿ ಅವರ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ ಕಾರಣಕ್ಕೆ ಈ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ