
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಗುರುವಾರ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಹಣ ಪಡೆದು ಚೀನಿ ನಾಗರಿಕರಿಗೆ ದೇಶದ ವೀಸಾ ಕೊಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಈ ಚಾರ್ಜ್ಶೀಟ್ ದಾಖಲಾಗಿದೆ.
ತಮ್ಮ ತಂದೆ ಪಿ.ಚಿದಂಬರಂ ಕೇಂದ್ರ ಸಚಿವರಾಗಿದ್ದ ವೇಳೆ ಕೆಲ ಚೀನಾ ನಾಗರಿಕರಿಗೆ ಭಾರತೀಯ ವೀಸಾ ಕೊಡಿಸಲು ಲಂಚ ಸ್ವೀಕರಿಸಿದ್ದರು ಎಂಬ ಆರೋಪ ಕಾರ್ತಿ ಚಿದಂಬರಂ ಮೇಲಿತ್ತು. ಈ ಸಂಬಂಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಗುರುವಾರ ಹೊಸ ಆರೋಪಪಟ್ಟಿ ಸಲ್ಲಿಸಿದೆ. ಅದರಲ್ಲಿ ಕಾರ್ತಿ ಮತ್ತು ಇತರರ ವಿರುದ್ದ ಅಪರಾಧ ಪಿತೂರಿ, ವಂಚನೆ, ನಕಲಿ ಸಹಿ ಹಾಕಿದ ಆರೋಪ ಹೊರಿಸಲಾಗಿದೆ. ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಸಿಬಿಐ, ಎಫ್ಐಆರ್ ದಾಖಲಿಸಿದ 2 ವರ್ಷಗಳ ಬಳಿಕ ಜಾರ್ಜ್ಶೀಟ್ ಸಲ್ಲಿಕೆ ಮಾಡಿದೆ.
ರಾಹುಲ್ ಗಾಂಧಿಗಿಂತ ಮೋದಿ ಜನಪ್ರಿಯ ಹೇಳಿಕೆ, ಕಾರ್ತಿ ಚಿದಂಬರಂಗೆ ಕಾಂಗ್ರೆಸ್ ನೋಟಿಸ್!
ಲಂಚ ಪ್ರಕರಣದ ಹಿನ್ನೆಲೆ ಏನು?
ಪಂಜಾಬ್ ಮೂಲದ ಟಿಎಸ್ಪಿಎಲ್ ಕಂಪನಿಯು 2011ರಲ್ಲಿ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆ ಗುತ್ತಿಗೆಯನ್ನು ಚೀನಾ ಕಂಪನಿಗೆ ನೀಡಿತ್ತು. ಈ ಕಂಪನಿಯ ಸಿಬ್ಬಂದಿ ಭಾರತಕ್ಕೆ ಬರಲು ವೀಸಾ ಬೇಕು ಈ ವೀಸಾ ಕೊಡಿಸಲು ಕಾರ್ತಿ ಚಿದಂಬರಂ ಲಂಚವನ್ನು ಸ್ವೀಕರಿಸಿದ್ದರು ಎಂಬ ಆರೋಪವಿದೆ.
Money Laundering case ಕಾರ್ತಿ ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿ ವಜಾ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ