ಅಪಘಾತದಿಂದ ಆಸ್ಪತ್ರೆಗೆ ಸೇರಿದ ವಧು : ಅಲ್ಲಿಯೇ ನಡೆದ ಮದುವೆ!

Kannadaprabha News   | Kannada Prabha
Published : Nov 22, 2025, 04:58 AM IST
 marriage

ಸಾರಾಂಶ

ಕೇರಳದಲ್ಲೊಂದು ವಿಶೇಷ ವಿವಾಹ ನಡೆದಿದ್ದು, ವಧು-ವರರು ಆಸ್ಪತ್ರೆಯ ತರ್ತು ಚಿಕಿತ್ಸಾ ಘಟಕದಲ್ಲಿ ನವಜೀವನಕ್ಕೆ ಕಾಲಿಟ್ಟ ಪ್ರಸಂಗ ಶುಕ್ರವಾರ ಜರಗಿದೆ. ಮೇಕಪ್‌ಗಾಗಿ ಶುಕ್ರವಾರ ಬೆಳಗ್ಗೆ ತಮ್ಮ ಕಾರಿನಲ್ಲಿ ಕುಮಾರಕೋಂಗೆ ಹೊರಟಿದ್ದರು. ಮಾರ್ಗ ಮಧ್ಯದಲ್ಲಿ ಕಾರು ಅಪಘಾತಗೊಂಡು ಆಸ್ಪತ್ರೆ ಸೇರಿದ್ದರು

ಕೊಚ್ಚಿ: ಕೇರಳದಲ್ಲೊಂದು ವಿಶೇಷ ವಿವಾಹ ನಡೆದಿದ್ದು, ವಧು-ವರರು ಆಸ್ಪತ್ರೆಯ ತರ್ತು ಚಿಕಿತ್ಸಾ ಘಟಕದಲ್ಲಿ ನವಜೀವನಕ್ಕೆ ಕಾಲಿಟ್ಟ ಪ್ರಸಂಗ ಶುಕ್ರವಾರ ಜರಗಿದೆ. ಅವನಿ ಮತ್ತು ಶಾರೋನ್‌ ಅವರು ಶುಕ್ರವಾರ ಎರ್ನಾಕುಲಂನಲ್ಲಿ ಮದುವೆಯಾಗಬೇಕಿತ್ತು. ಇದರ ಭಾಗವಾಗಿ ಅವನಿ ಅವರು ಮದುವೆ ಮೇಕಪ್‌ಗಾಗಿ ಶುಕ್ರವಾರ ಬೆಳಗ್ಗೆ ತಮ್ಮ ಕಾರಿನಲ್ಲಿ ಕುಮಾರಕೋಂಗೆ ಹೊರಟಿದ್ದರು. ಮಾರ್ಗ ಮಧ್ಯದಲ್ಲಿ ಕಾರು ಅಪಘಾತಗೊಂಡಿದೆ. ಸ್ಥಳೀಯರು ಬೆನ್ನು ಮೂಳೆಗೆ ಏಟು ತಿಂದಿದ್ದ ಅವನಿಯವರನ್ನು ವಿಪಿಎಸ್‌ ಲೇಕ್‌ಶೋರ್‌ ಆಸ್ಪತ್ರೆಗೆ ವರ್ಗಾಯಿಸಿದ್ದಾರೆ.

ಮಾಹಿತಿ ಪಡೆಯುತ್ತಿದ್ದಂತೆ ಶಾರೋನ್‌ ಕುಟುಂಬವೂ ಆಸ್ಪತ್ರೆಗೆ

ಅಪಘಾತದ ಮಾಹಿತಿ ಪಡೆಯುತ್ತಿದ್ದಂತೆ ಶಾರೋನ್‌ ಕುಟುಂಬವೂ ಆಸ್ಪತ್ರೆಗೆ ಬಂದಿದೆ. ಅದೇ ದಿನ ಮಧ್ಯಾಹ್ನ 12.15-12.30ರವರೆಗೆ ಮುಹೂರ್ತವಿದ್ದ ಕಾರಣ ಎರಡೂ ಕುಟುಂಬದವರು ಆಸ್ಪತ್ರೆಯಲ್ಲಿಯೇ ಮದುವೆ ಮಾಡಲು ತೀರ್ಮಾನಿಸಿ, ಆಸ್ಪತ್ರೆಯ ಆಡಳಿತಕ್ಕೆ ಮನವಿ ಮಾಡಿದ್ದಾರೆ.

ತುರ್ತು ಚಿಕಿತ್ಸಾ ವಿಭಾಗದಲ್ಲಿಯೇ ಮದುವೆ

ಇದನ್ನು ಮನ್ನಿಸಿದ ಆಡಳಿತ ಮತ್ತು ವೈದ್ಯರು, ಅವನಿಗೆ ಯಾವುದೇ ತೊಂದರೆಯಾಗದಂತೆ ತುರ್ತು ಚಿಕಿತ್ಸಾ ವಿಭಾಗದಲ್ಲಿಯೇ ಮದುವೆ ಸೆಟ್‌ಅಪ್ ಮಾಡಿ ವಿವಾಹ ನೆರವೇರಿಸಿದ್ದಾರೆ.

ಬಳಿಕ ಅವನಿಯನ್ನು ಹೆಚ್ಚಿನ ಚಿಕಿತ್ಸೆಗೆ ಎರ್ನಾಕುಲಂನ ದೊಡ್ಡ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಪುಟಿನ್‌ಗೆ ರಷ್ಯನ್ ಭಾಷೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ, ಭಾರಿ ಮೆಚ್ಚುಗೆ