ನೇತಾಜಿ ದೇಹದ ಅವಶೇಷ ಜಪಾನ್‌ನಿಂದ ತರಿಸಿ, ಸತ್ಯ ಕಡತಗಳಿಂದ ಬಹಿರಂಗ: ಮೋದಿಗೆ ಮೊಮ್ಮಗ ಆಗ್ರಹ

Published : Jul 29, 2024, 12:29 PM IST
ನೇತಾಜಿ ದೇಹದ ಅವಶೇಷ ಜಪಾನ್‌ನಿಂದ ತರಿಸಿ, ಸತ್ಯ ಕಡತಗಳಿಂದ ಬಹಿರಂಗ: ಮೋದಿಗೆ ಮೊಮ್ಮಗ ಆಗ್ರಹ

ಸಾರಾಂಶ

ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ದೇಹದ ಅವಶೇಷಗಳನ್ನು ಜಪಾನಿನ ರೆಂಕೋಜಿಯಿಂದ ಆ.18ರ ಒಳಗೆ ಭಾರತಕ್ಕೆ ತರುವಂತೆ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಗ್ರಹಿಸಿದ್ದಾರೆ.

ಕೋಲ್ಕತಾ (ಜು.29): ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ದೇಹದ ಅವಶೇಷಗಳನ್ನು ಜಪಾನಿನ ರೆಂಕೋಜಿಯಿಂದ ಆ.18ರ ಒಳಗೆ ಭಾರತಕ್ಕೆ ತರುವಂತೆ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್ ಪ್ರಧಾನಿ ನರೇಂದ್ರ‘ ಮೋದಿ ಅವರಿಗೆ ಪತ್ರದ ಮುಖಾಂತರ ಆಗ್ರಹ ಮಾಡಿದ್ದಾರೆ.

ಭಾನುವಾರ ಪಿಟಿಐ ವಿಡಿಯೋಸ್ ಜತೆ ಮಾತನಾಡಿದ ಅವರು, ನೇತಾಜಿ ಅವರ ಸಾವಿನ ಬಗ್ಗೆ ಇರುವ ಊಹಾಪೋಹಗಳಿಗೆ ತೆರೆ ಎಳೆಯಲು ಅವರಿಗೆ ಸಂಬಂಧಪಟ್ಟ ಕಡತಗಳನ್ನು ವರ್ಗೀಕರಿಸಲು ಮುಂದಾದ ಎನ್‌ಡಿಎ ಸರ್ಕಾರವೇ ಅಂತಿಮ ಹೇಳಿಕೆ ನೀಡಬೇಕು ಎಂದು ಹೇಳಿದರು.

ಅಯೋಧ್ಯೆ ಮಸೀದಿ ಜಮೀನು ನನ್ನದು ಎಂದು ಮಹಿಳೆ ದೂರು, ಸುಪ್ರೀಂ ಕೋರ್ಟಿಗೆ ಹೋಗಲು ನಿರ್ಧಾರ

ಪಶ್ಚಿಮ ಬಂಗಾಳ ಬಿಜೆಪಿಯ ಉಪಾಧ್ಯಕ್ಷರಾಗಿದ್ದ ಚಂದ್ರ, ‘ವರ್ಗೀಕರಿಸಲ್ಪಟ್ಟ ಕಡತಗಳು ರಹಸ್ಯ ಮಾಹಿತಿ ಮತ್ತು ದಾಖಲೆಗಳು ಬಹಿರಂಗವಾಗಿದ್ದು, ನೇತಾಜಿಯವರ ಸಾವು 1945ರ ಆ.18ರಂದು ತೈವಾನ್‌ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ಸಂಭವಿಸಿತು ಎಂಬುದನ್ನು ತೋರಿಸುತ್ತದೆ. ಸ್ವಾತಂತ್ರ್ಯಾನಂತರ ಅವರು ಭಾರತಕ್ಕೆ ಮರಳಲು ಬಯಸಿದ್ದರು. ಅವರ ಅವಶೇಷಗಳನ್ನು ರೆಂಕೋಜಿ ಮಂದಿರದಲ್ಲಿ ಇಟ್ಟಿರುವುದು ಅವಮಾನಕರ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೆಹಲಿ ದುರಂತ: ಐಎಎಸ್‌ ಅಧಿಕಾರಿಯಾಗುವ ಕನಸು ಕಂಡಿದ್ದ ಮೂವರ ಜೀವಕ್ಕೆ ಕಟ್ಟಡ ನಿಯಮ ಉಲ್ಲಂಘನೆ ಕುತ್ತು!

‘ಭಾರತದ ಸ್ವಾತಂತ್ರ್ಯಕ್ಕೆ ಶ್ರಮಿಸಿದ ಅವರ ಅವಶೇಷಗಳು ಇಲ್ಲಿನ ಮಣ್ಣನನ್ನು ಮುಟ್ಟಬೇಕು. ಈ ಬಗ್ಗೆ ಕಳೆದ ಮೂರುವರೆ ವರ್ಷಗಳಿಂದ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯಲಾಗುತ್ತಿದೆ. ನೆತಾಜಿಯವರ ಪುತ್ರಿ ಅನಿತಾ ಬೋಸ್ ಹಿಂದೂ ಸಂಪ್ರದಾಯದ ಪ್ರಕಾರ ಅವರ ಅಂತಿಮ ವಿಧಿವಿಧಾನಗಳನ್ನು ಪೂರೈಸಬಯಸಿದ್ದಾರೆ’ ಎಂದ ಚಂದ್ರ, ‘ರೆಂಕೋಜಿಯಲ್ಲಿರುವ ಅವಶೇಷಗಳು ನೆತಾಜಿಯವರದ್ದಲ್ಲ ಎಂದು ಭಾರತ ಸರ್ಕಾರಕ್ಕೆ ಅನ್ನಿಸುತ್ತಿದ್ದರೆ ಅವುಗಳ ನಿರ್ವಹಣೆಯ ಖರ್ಚನ್ನು ಕೊಡಬಾರದು’ ಎಂದು ಆಗ್ರಹಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!