ವಿಶ್ವಗುರು ಅಂದ್ರೆ ಸುಮ್ಮನೇನಾ, ಭಾರತಕ್ಕೆ ವಂದಿಸಿ ವಿಮಾನ ಏರಿದ ಬ್ರಿಟನ್ ಪ್ರೊಫೆಸರ್!

Published : Apr 17, 2020, 04:06 PM ISTUpdated : Apr 17, 2020, 04:09 PM IST
ವಿಶ್ವಗುರು ಅಂದ್ರೆ ಸುಮ್ಮನೇನಾ, ಭಾರತಕ್ಕೆ ವಂದಿಸಿ ವಿಮಾನ ಏರಿದ ಬ್ರಿಟನ್ ಪ್ರೊಫೆಸರ್!

ಸಾರಾಂಶ

ಕೊರೋನಾ ವಿರುದ್ಧದ ಹೋರಾಟ/ ಆಂಧ್ರ ಸರ್ಕಾರಕ್ಕೆ ವಿಶೇಷ ಧನ್ಯವಾದ ತಿಳಿಸಿದ ಬ್ರಿಟಿಷ್ ಪ್ರಜೆ/ ವಿಶೇಷ ವಿಮಾನದ ಮೂಲಕ ಸ್ವದೇಶಕ್ಕೆ ಹಿಂದಿರುಗಿದ ಪ್ರೊಫೆಸರ್

ಅಮರಾವತಿ(ಏ. 17) ಕೊರೋನಾ ವೈರಸ್ ಯಾವ ಪ್ರದೇಶವನ್ನು ಬಿಟ್ಟಿಲ್ಲ. ತಿರುಪತಿಯ ಪದ್ಮಾವತಿ ನಿಲಯದಲ್ಲಿ ಬ್ಟಿಟಿಷ್ ಪ್ರಜೆಯೊಬ್ಬರು ಕ್ವಾರಂಟೈನ್ ಆಗಿದ್ದರು.

ಆಂಧ್ರಪ್ರದೇಶ ಸರ್ಕಾರದ ಆಶ್ರಯ ಪಡೆದಿದ್ದ ಬ್ರಿಟನ್ ಪ್ರಜೆ ಇದೀಗ ಅಲ್ಲಿನ ಸರ್ಕಾರಕ್ಕೆ ಅನಂತ ಅನಂತ ಧನ್ಯವಾದ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೆರಡು ಹಾಟ್ ಸ್ಪಾಟ್

ಲಂಡನ್ ನಲ್ಲಿ ಭೂಗೋಳಶಾಶ್ತ್ರದ ಪ್ರೊಫೆಸರ್ ಆಗಿರುವ ಕುಲ್ಲೆ ಕ್ಲೈವ್ ಬ್ರಯಾಂಟ್ ಅಕ್ಟೋಬರ್ ನಲ್ಲಿ ಭಾರತಕ್ಕೆ ಆಗಮಿಸಿದ್ದರು. ತಿರುಪತಿ ತಿರುಮಲದ ವೆಂಕಟೇಶ್ವರನ ದರ್ಶನವನ್ನು ಕೆಲ ದಿನಗಳ ಹಿಂದೆ ಪಡೆದಿದ್ದರು.

ಲಾಕ್  ಡೌನ್ ಘೋಷಣೆಯಾದ ವೇಳೆ ತಿರುಪತಿಯಲ್ಲೇ ಇದ್ದ ಬ್ರಯಾಂಟ್ ಅಲ್ಲಿಯೇ ಹೋಂ ಕ್ವಾರಂಟೈನ್ ಹೋಗುವುದಾಗಿ ತಿಳಿಸಿದ್ದರು.  ಮಾರ್ಚ್ 24 ರಂದು ಹೋಂ ಕ್ವಾರಂಟೈನ್ ಗೆ ತೆರಳಿದ್ದ ಪ್ರೊಫೆಸರ್ ಈಗ ಬಿಡುಗಡೆಯಾಗಿದ್ದು ತಮ್ಮನ್ನು ಆರೈಕೆ ಮಾಡಿಕೊಂಡ ರೀತಿಯನ್ನು ಮನಸಾರೆ ಹೊಗಳಿದ್ದಾರೆ. ಬ್ರಿಟನ್ ಸರ್ಕಾರದ ಒಪ್ಪಿಗೆ ಪಡೆದುಕೊಂಡು ಬ್ರಯಾಂಟ್ ಶುಕ್ರವಾರ ಬೆಳಗ್ಗೆ ವಿಶೇಷ ವಿಮಾನದ ಮೂಲಕ ಲಂಡನ್ ಗೆ ತೆರಳಿದ್ದಾರೆ.

ಇಂಗ್ಲಿಷ್ ನಲ್ಲಿಯೂ ಓದಿ

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪೌರತ್ವ ಸಿಗುವ ಮುನ್ನವೇ ವೋಟರ್‌ ಲಿಸ್ಟ್‌ನಲ್ಲಿ ಹೆಸರು, ಸೋನಿಯಾ ಗಾಂಧಿಗೆ ನೋಟಿಸ್‌ ಕೊಟ್ಟ ದೆಹಲಿ ಕೋರ್ಟ್!
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ